ಮಕ್ಕಾ: ಉಮ್ರಾ ಕರ್ಮ ನಿರ್ವಹಿಸಲು ಮಂಗಳೂರಿನ ಅಲ್ ಸದೀಮ್ ಟೂರ್ಸ್ & ಟ್ರಾವೆಲ್ಸ್ ನಲ್ಲಿ ಮಕ್ಕಾ ತಲುಪಿದ ಉಡುಪಿ ಮೂಲದ ಇಬ್ಬರು ಮಹಿಳೆಯರು ಅನಾರೋಗ್ಯದಿಂದ ಮಕ್ಕಾದಲ್ಲಿ ನಿಧನ ಹೊಂದಿದರು.
ಮೃತಪಟ್ಟ ಮಹಿಳೆಯರು ಬ್ರಹ್ಮಾವರ ತಾಲೂಕಿನ ಮಧುವನ ಅಚ್ಲಾಡಿಯ ಮರಿಯಮ್ಮ (66 ವ) ಹಾಗೂ ಅವರ ಅತ್ತೆಯ ಮಗಳು ಖತೀಜಮ್ಮ (68 ವ) ಎಂದು ತಿಳಿದುಬಂದಿದೆ. ಆಸ್ಪತ್ರೆಗೆ ಸಾಗಿಸುವಲ್ಲಿ ಹಾಗೂ ಇಬ್ಬರ ದಫನ ಕಾರ್ಯಕ್ಕೆ ಬೇಕಾದ ಕಾನೂನು ಪ್ರಕ್ರಿಯೆಗಳು, ಎಲ್ಲಾ ಅವಶ್ಯ ದಾಖಲೆಗಳನ್ನು ಸರಿಪಡಿಸಿ ಸಹಕರಿಸುವಲ್ಲಿ ಕೆಸಿಎಫ್ ಜಿದ್ದಾ ಝೋನ್ ಸಾಂತ್ವನ ಇಲಾಖೆ ಅಧ್ಯಕ್ಷರು ಹಾಗೂ ಕೆಸಿಎಫ್ ಮಕ್ಕತುಲ್ ಮುಕರ್ರಮಾ ಸೆಕ್ಟರ್ ನೇತಾರರಾದ ಮೂಸಾ ಹಾಜಿ ಕಿನ್ಯ ಹಾಗೂ ಕೆಸಿಎಫ್ ಮದೀನತುಲ್ ಮುನವ್ವರ ಝೋನ್ ಸಾಂತ್ವನ ಇಲಾಖೆ ಕಾರ್ಯದರ್ಶಿ ಅಬ್ದುಲ್ ರಝ್ಝಾಖ್ ಉಳ್ಳಾಲರವರು ಪ್ರಮುಖ ಪಾತ್ರ ವಹಿಸಿದ್ದರು.
ಹೀಗೆ ಹಲವು ವರ್ಷಗಳಿಂದ ಪುಣ್ಯ ಭೂಮಿಗಳಾದ ಮಕ್ಕಾ ಮತ್ತು ಮದೀನಾದ ಕರ್ನಾಟಕ ಕಲ್ಚರಲ್ ಫೌಂಡೇಶನ್ KCF ಇದರ ಕಾರ್ಯಕರ್ತರು ಇಂತಹ ಮರಣ ಪ್ರಕ್ರಿಯೆಗಳಲ್ಲಿ ಮರಣ ಹೊಂದಿದ ಸಂಬಂಧಿಕರು ಹಾಗೂ ಉಮ್ರಾ ಟ್ರಾವೆಲ್ಸ್ ನವರೊಂದಿಗೆ ಕೈ ಜೋಡಿಸಿ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ