ಮಕ್ಕಾ: ಉಮ್ರಾ ಕರ್ಮ ನಿರ್ವಹಿಸಲು ಮಂಗಳೂರಿನ ಅಲ್ ಸದೀಮ್ ಟೂರ್ಸ್ & ಟ್ರಾವೆಲ್ಸ್ ನಲ್ಲಿ ಮಕ್ಕಾ ತಲುಪಿದ ಉಡುಪಿ ಮೂಲದ ಇಬ್ಬರು ಮಹಿಳೆಯರು ಅನಾರೋಗ್ಯದಿಂದ ಮಕ್ಕಾದಲ್ಲಿ ನಿಧನ ಹೊಂದಿದರು.
ಮೃತಪಟ್ಟ ಮಹಿಳೆಯರು ಬ್ರಹ್ಮಾವರ ತಾಲೂಕಿನ ಮಧುವನ ಅಚ್ಲಾಡಿಯ ಮರಿಯಮ್ಮ (66 ವ) ಹಾಗೂ ಅವರ ಅತ್ತೆಯ ಮಗಳು ಖತೀಜಮ್ಮ (68 ವ) ಎಂದು ತಿಳಿದುಬಂದಿದೆ. ಆಸ್ಪತ್ರೆಗೆ ಸಾಗಿಸುವಲ್ಲಿ ಹಾಗೂ ಇಬ್ಬರ ದಫನ ಕಾರ್ಯಕ್ಕೆ ಬೇಕಾದ ಕಾನೂನು ಪ್ರಕ್ರಿಯೆಗಳು, ಎಲ್ಲಾ ಅವಶ್ಯ ದಾಖಲೆಗಳನ್ನು ಸರಿಪಡಿಸಿ ಸಹಕರಿಸುವಲ್ಲಿ ಕೆಸಿಎಫ್ ಜಿದ್ದಾ ಝೋನ್ ಸಾಂತ್ವನ ಇಲಾಖೆ ಅಧ್ಯಕ್ಷರು ಹಾಗೂ ಕೆಸಿಎಫ್ ಮಕ್ಕತುಲ್ ಮುಕರ್ರಮಾ ಸೆಕ್ಟರ್ ನೇತಾರರಾದ ಮೂಸಾ ಹಾಜಿ ಕಿನ್ಯ ಹಾಗೂ ಕೆಸಿಎಫ್ ಮದೀನತುಲ್ ಮುನವ್ವರ ಝೋನ್ ಸಾಂತ್ವನ ಇಲಾಖೆ ಕಾರ್ಯದರ್ಶಿ ಅಬ್ದುಲ್ ರಝ್ಝಾಖ್ ಉಳ್ಳಾಲರವರು ಪ್ರಮುಖ ಪಾತ್ರ ವಹಿಸಿದ್ದರು.
ಹೀಗೆ ಹಲವು ವರ್ಷಗಳಿಂದ ಪುಣ್ಯ ಭೂಮಿಗಳಾದ ಮಕ್ಕಾ ಮತ್ತು ಮದೀನಾದ ಕರ್ನಾಟಕ ಕಲ್ಚರಲ್ ಫೌಂಡೇಶನ್ KCF ಇದರ ಕಾರ್ಯಕರ್ತರು ಇಂತಹ ಮರಣ ಪ್ರಕ್ರಿಯೆಗಳಲ್ಲಿ ಮರಣ ಹೊಂದಿದ ಸಂಬಂಧಿಕರು ಹಾಗೂ ಉಮ್ರಾ ಟ್ರಾವೆಲ್ಸ್ ನವರೊಂದಿಗೆ ಕೈ ಜೋಡಿಸಿ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.
















ಇನ್ನಷ್ಟು ಸುದ್ದಿಗಳು
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ