ಮುಹ್ಯಿದ್ದೀನ್ ಜುಮುಅ ಮಸ್ಜಿದ್ ಮಂಗಳಪೇಟೆ ಇದರ ವತಿಯಿಂದ ವಾರಂಪ್ರತೀ ನಡೆಸಿಕೊಂಡು ಬರುವ ಸ್ವಲಾತ್ ಮಜ್ಲಿಸ್ ನ ಮೂವತ್ತನೇ ವಾರ್ಷಿಕ ಸಮಾರಂಭವು ಇದೇ ಬರುವ ಮಾರ್ಚ್ 17 ಮತ್ತು 18 ರಂದು ನಡೆಯಲಿದೆ.17 ರಂದು ಸಯ್ಯಿದ್ ಜಮಾಲುಲೈಲ್ ತಂಙಳ್ ಕಾಜೂರ್ ರವರಿಂದ ಉಪನ್ಯಾಸ ಕಾರ್ಯಕ್ರಮ ಹಾಗೂ ಮಾರ್ಚ್ 18 ರಂದು ನಡೆಯುವ ಸ್ವಲಾತ್ ನೇತೃತ್ವವನ್ನು ಬಹುಭಾಷ ವಿದ್ವಾಂಸರು, ಮರ್ಕಝ್ ಮುದರ್ರಿಸರಾದ ಸಯ್ಯಿದ್ ಜಝೀಲ್ ಶಾಮಿಲ್ ಇರ್ಪಾನಿ ಜಮಾಲುಲೈಲ್ ತಂಙಳ್ ಕೇರಳರವರು ವಹಿಸಲಿದ್ದಾರೆ.
ಮಂಗಳಪೇಟೆ ಜಮಾಅತ್ ಅಧ್ಯಕ್ಷರಾದ ಸಿ ಅಬ್ದುಲ್ ಹಮೀದ್ ರವರ ಅಧ್ಯಕ್ಷತೆಯಲ್ಲಿ ನಡೆಯುವ ಸಮಾರಂಭದಲ್ಲಿ ಸ್ಥಳೀಯ ಖತೀಬ್ ಶಫೀಖ್ ಸಖಾಫಿ ಸ್ವಾಗತ ನಿರ್ವಹಿಸಲಿದ್ದು,ಮಂಗಳಪೇಟೆ ಖಾಝಿ ಶೈಖುನಾ ಝೈನುಲ್ ಉಲಮಾ ಮಾಣಿ ಉಸ್ತಾದ್ ಉದ್ಘಾಟನೆ ಮಾಡಲಿದ್ದಾರೆ.
ಬಜಪೆ ಮುದರ್ರಿಸ್ ಇಸ್ಮಾಯಿಲ್ ಮನ್ಸೂರ್ ಅಹ್ಮದ್ ಸಅದಿ,ಅಲ್ ಕಾಮಿಲ್ BE ರವರು ಮುಖ್ಯ ಪ್ರಭಾಷಣ ಮಾಡಲಿದ್ದಾರೆ.ಹಲವಾರು ಗಣ್ಯ ವ್ಯಕ್ತಿಗಳು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ ಎಂದು ಜಮಾಅತ್ ಪ್ರಧಾನ ಕಾರ್ಯದರ್ಶಿ ಶರಫ್ರಾಝ್ ನವಾಝ್ ರವರು ಪತ್ರಿಕಾ ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ