ಮಾರ್ಚ್ 15: ಉಮ್ರಾ ಯಾತ್ರೆಗೆಂದು ತೆರಳಿದ್ದ ಬಂಟ್ವಾಳ ತಾಲೂಕಿನ ವಿಟ್ಲ ಸಮೀಪದ ಕೊಳಂಬೆ ನಿವಾಸಿ ಹಸನಬ್ಬರವರು ಸೌದಿ ಅರೇಬಿಯಾದ ಬುರೈದ ದಲ್ಲಿ ತನ್ನ ಮಗನ ನಿವಾಸದಲ್ಲಿ ಮಂಗಳವಾರ ಬೆಳಗ್ಗಿನ ಜಾವ ಮರಣ ಹೊಂದಿದ್ದರು.


ಬುರೈದ ಕಿಂಗ್ ಪಹದ್ ಆಸ್ಪತ್ರೆಗೆ ದಾಖಲಿಸಿದರೂ ಅವರು ಜೀವ ಉಳಿಸಲಾಗಲಿಲ್ಲ.ಅಲ್ ಖಸೀಂ ವ್ಯಾಪ್ತಿಯ ಬುರೈದ ಜಾಮಿಅ ಅಲ್ ವಹಾಬ್ ನಲ್ಲಿ ಮಯ್ಯಿತ್ ನಮಾಝಿನ ನಂತರ ಅಲ್ ವಹಾಬ್ ಖಬರ್ ಸ್ಥಾನದಲ್ಲಿ ಬಂದು ಬಳಗ ಹಾಗೂ ಕೆ.ಸಿ.ಎಫ್ ಕಾರ್ಯಕರ್ತರ ಸಹಕಾರದೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಯಿತು
ಕರ್ನಾಟಕ ಕಲ್ಚರಲ್ ಫೌಂಡೇಶನ್ (ಕೆ.ಸಿ.ಎಫ್) ನೇತಾರರಾದ ಅಶ್ರಫ್ ಕಿನ್ಯ ಹಾಗೂ ರಝಾಖ್ ಉಳ್ಳಾಲ ರವರ ಮಾರ್ಗದರ್ಶನದಲ್ಲಿ ಅಲ್ ಖಸೀಂ ಝೋನಿನ ನೇತಾರರಾದ ಅಬ್ದುಲ್ಲ ಅಶ್ರಪ್ ಕೊಯಿಲ, ತಾಜುದ್ದೀನ್ ಕೆಮ್ಮಾರ,ಸಲೀಂ ಉಳ್ಳಾಲ ಯಾಕೂಬ್ ಸಖಾಫಿ ರವರುಗಳ ಸತತ ಪ್ರಯತ್ನದಿಂದ ದಫನ ಕ್ರಿಯೆಗೆ ಬೆಕಾದ ಕಚೇರಿ ಕಡತಗಳು ಹಾಗೂ ದಾಖಲೆ ಪತ್ರಗಳನ್ನು ಸಕಾಲದಲ್ಲಿ ಸರಿಪಡಿಸಿ ಅಂತ್ಯ ಕ್ರಿಯೆಗೆ ಸಹಕರಿಸಿದರು
















ಇನ್ನಷ್ಟು ಸುದ್ದಿಗಳು
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ
ಪವಿತ್ರ ಕಅಬಾಗೆ ತೊಡಿಸುವ ಕಿಸ್ವಾದ ಹಿಂದಿರುವ ಅದ್ಭುತ ರಹಸ್ಯಗಳ ಬಗ್ಗೆ ನಿಮಗೆ ಗೊತ್ತೇ?
ಅನಿವಾಸಿಗಳಿಗೆ ನೆಮ್ಮದಿ: ಕುವೈತ್ ವಿಮಾನ ನಿಲ್ದಾಣದಲ್ಲಿ ವಿದೇಶಿ ವಿಮಾನಗಳ ಸಂಚಾರಕ್ಕೆ ಅನುಮತಿ
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
ಸೌದಿಯಲ್ಲಿ ತಪಾಸಣೆ ತೀವ್ರ: ಒಂದೇ ವಾರದಲ್ಲಿ 10,700 ನಿಯಮ ಉಲ್ಲಂಘಕರ ಬಂಧನ- 8,000 ಮಂದಿ ಗಡೀಪಾರು
ದುಬೈ ಏರ್ಪೋರ್ಟ್ನಲ್ಲಿ ಅನಾಥ ಬ್ಯಾಗ್: ಓಪನ್ ಮಾಡಿದ ಅಧಿಕಾರಿಗಳಿಗೆ ಶಾಕ್- ಒಳಗೇನಿತ್ತು ಗೊತ್ತೇ?
ದುಬೈ ಮಿನಿಬಸ್ ಅಪಘಾತ: ಆರು ಮಂದಿ ಭಾರತೀಯರು ಸಹಿತ ಎಂಟು ಮಂದಿ ಮೃತ್ಯು
ಸೌದಿ ಅರೇಬಿಯಾದಲ್ಲಿ ತೀವ್ರಗೊಂಡ ಬಿಸಿಲಿನ ಬೇಗೆ- ಹವಾಮಾನ ಇಲಾಖೆಯಿಂದ ಹೈ ಅಲರ್ಟ್!
ಅಪಾರ್ಟ್ಮೆಂಟ್ ಕೇಂದ್ರೀಕರಿಸಿ ಅನೈತಿಕ ಚಟುವಟಿಕೆ- ನಜ್ರಾನ್ನಲ್ಲಿ 12 ವಿದೇಶಿಗರ ಬಂಧನ
ಕುವೈತ್ ವಿಮಾನ ನಿಲ್ದಾಣದ ಮೇಲೆ ದಾಳಿ: ಗಾಯಗೊಂಡವರಲ್ಲಿ 13 ಮಂದಿ ಭಾರತೀಯರು