ದಮ್ಮಾಮ್: ಕಾಟಿಪಳ್ಳ ಮುಸ್ಲಿಂ ಯೂತ್ ಎಸೋಸಿಯೇಷನ್ (ಕೆಎಂವೈಎ) ಈಸ್ಟರ್ನ್ ಝೋನ್ ವಾರ್ಷಿಕ ಮಹಾಸಭೆ 17, ಮಾರ್ಚ್ 2023 ಶುಕ್ರವಾರ ದಮ್ಮಾಂನಲ್ಲಿ ನಡೆಯಿತು.
ಸಂಘದ ಅಧ್ಯಕ್ಷ ನೌಶಾದ್ ರಶೀದ್ ರವರ ಘನ ಅಧ್ಯಕ್ಷತೆಯಲ್ಲಿ ಜರಗಿದ ಸಭೆಯಲ್ಲಿ ಇಸ್ಮಾಯೀಲ್ ಕಾಟಿಪಳ್ಳ ರವರ ದುಆ ದ ಬಳಿಕ ಆಹಿದ್ ಇಬ್ನ್ ಶಕೀಲ್ ಖಿರಾಅತ್ ಪಠಿಸಿದರು. ಸೈಫುಲ್ಲಾ ಮುಹ್ಯಿದ್ದೀನ್ ಸ್ವಾಗತಿಸಿದರು.
ಇಸ್ಮಾಯೀಲ್ ಇಬ್ನ್ ಸ್ವಾಲಿಹ್ ಉಸ್ತಾದ್ ರವರು ರಮಳಾನ್ ಸಂದೇಶದೊಂದಿಗೆ ಆ ಮಾಸವನ್ನು ಯಾವ ರೀತಿ ಕಾರ್ಯಗತಗೊಳಿಸಬೇಕು ಎಂಬುದರ ಬಗ್ಗೆ ವಿವರವಾಗಿ ವಿವರಿಸಿದರು.
ಮ್ಯಾನ್ ಆಫ್ ದಿ ಇಯರ್ ಅವಾರ್ಡ್ ನ್ನು ಸೈಫುಲ್ಲಾ ಮುಹ್ಯಿದ್ದೀನ್, ಮಾಸಿಕ ಸಭೆಗಳಲ್ಲಿ ಹೆಚ್ಚಿನ ಹಾಜರಾತಿ ಪಡೆದಿದ್ದಕ್ಕೆ ಪರ್ಫೆಕ್ಟ್ ಅಟೆಂಡನ್ಸ್ ಸರ್ಟಿಫಿಕೇಟ್ ನ್ನು ಶಕೀಲ್ ಆದಂ ಹಾಗೂ ಗೌರವಾರ್ಥವಾಗಿ ಕೆಎಂವೈಎ ಶ್ಲಾಘನೀಯ ಯೋಗ್ಯತಾ ಪತ್ರವನ್ನು ಮುಸ್ಥಫ ಇಬ್ರಾಹೀಂ ತನ್ನದಾಗಿರಿಸಿಕೊಂಡರು.
2023-24 ನೇ ಸಾಲಿಗೆ ನೂತನ ಸಮಿತಿಯನ್ನು ಸಂಘದ ಗೌರವಾಧ್ಯಕ್ಷ ಪಿ.ಎ. ಮುಹಮ್ಮದ್ ಬಶೀರ್ ರವರ ಉಸ್ತುವಾರಿಯಲ್ಲಿ ನಡೆಯಿತು.
ಅಧ್ಯಕ್ಷರಾಗಿ ಮುಸ್ಥಫ ಇಬ್ರಾಹೀಂ, ಗೌರವಾಧ್ಯಕ್ಷರಾಗಿ ನೌಶಾದ್ ರಶೀದ್, ಕೋಶಾಧಿಕಾರಿಯಾಗಿ ಪಿ.ಎಂ. ತಾಜುದ್ದೀನ್ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಇಸ್ಮಾಯೀಲ್ ಕಾಟಿಪಳ್ಳ ರವರನ್ನು ನೇಮಕಗೊಳಿಸಲಾಯಿತು.
ಉಪಾಧ್ಯಕ್ಷರಾಗಿ ನಿಯಾಝ್ ಅಹ್ಮದ್ ಮತ್ತು ಪಿ.ಎ. ಶಬೀರ್, ಜೊತೆ ಕಾರ್ಯದರ್ಶಿಗಳಾಗಿ ಸೈಫುಲ್ಲಾ ಮುಹ್ಯಿದ್ದೀನ್ ಮತ್ತು ತ್ವಾಹಿರ್ ಅಲೀ, ಉಪ ಕೋಶಾಧಿಕಾರಿಯಾಗಿ ಆಸಿಫ್ ಆಯ್ಕೆಗೊಂಡರು.
ಸಂಘಟನಾ ಕಾರ್ಯದರ್ಶಿಯಾಗಿ ಶಕೀಲ್ ಆದಂ, ಆಡಿಟರ್ ಆಗಿ ಅಬ್ದುಲ್ ಗಪ್ಪಾರ್, ಸಲಹಾ ಸಮಿತಿಗೆ ಪಿ.ಎ.ಮುಹಮ್ಮದ್ ಬಶೀರ್,ಪಿ.ಎಂ. ಆರಿಫ್,ನಝೀರ್ ಗುಲಾಂ, ಪಿ.ಎಚ್.ಇಖ್ಬಾಲ್, ಪಿ.ಎಂ.ಹನೀಫ್, ಪಿ.ಎ. ರಹ್ಮಾನ್ ಹಾಗೂ ಓರ್ಗನೈಝರ್ ಗಳಾಗಿ ಹಂಝ, ರಫೀಖ್,ಕಲಂದರ್,ಇಮ್ತಿಯಾಝ್,ಹಸನ್ ಸಈದ್ ಮತ್ತು 25 ಮಂದಿ ಸದಸ್ಯರನ್ನು ಕಾರ್ಯಕಾರಿ ಸಮಿತಿಗೆ ಸದಸ್ಯರನ್ನಾಗಿ ಆರಿಸಲಾಯಿತು.
ನೂತನ ಅಧ್ಯಕ್ಷರಾಗಿ ನೇಮಕಗೊಂಡ ಮುಸ್ಥಫಾ ಇಬ್ರಾಹೀಂ ರವರು ಮಾತನಾಡುತ್ತಾ ತಾವುಗಳೆಲ್ಲರ ತನು-ಮನ-ಧನ ದೊಂದಿಗಿನ ಸಹಾಯ ಸಹಕಾರ ವಿದ್ದರೆ ಮಾತ್ರ ಅಭಿವ್ರಧ್ಧಿ ಸಾಧಿಸಲು ಸಾಧ್ಯ. ನಮ್ಮೊಂದಿಗೆ ಕೈ ಜೋಡಿಸಿ ಯಶಸ್ವಿಗೊಳಿಸಿರಿ ಎಂದು ವಿನಂತಿಸಿದರು.
ನೂತನ ಸಮಿತಿಗೆ ಶುಭಾಶಂಷೆ ಗೈದವರು:
ಹಸನ್ ಸಈದ್,ಹಂಝ, ಶಬೀರ್,ನಝೀರ್ ಮತ್ತು ಶಕೀಲ್.
ಪ್ರಧಾನ ಕಾರ್ಯದರ್ಶಿ ಇಸ್ಮಾಯೀಲ್ ಕಾಟಿಪಳ್ಳ ಧನ್ಯವಾದ ಗೈದರು.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ