ಬೆಂಗಳೂರು: ಮುಸ್ಲಿಮರಿಗೆ ನೀಡಲಾಗಿದ್ದ 2B ಮೀಸಲಾತಿಯನ್ನು ರದ್ದುಪಡಿಸಿರುವ ಸರ್ಕಾರದ ನಿರ್ಧಾರದ ವಿರುದ್ದ ಕಾನೂನು ಹೋರಾಟ ನಡೆಸಲು ಕರ್ನಾಟಕ ಮುಸ್ಲಿಂ ಜಮಾಅತ್ ತೀರ್ಮಾನಿಸಿದೆ.
ಇಂದು ಕಾನೂನು ಪರಿಣತರು ಮತ್ತು ಸಮುದಾಯದ ಮುಖಂಡರೊಂದಿಗೆ ಸರಣಿ ಸಭೆ ನಡೆಸಿದ ಕರ್ನಾಟಕ ಮುಸ್ಲಿಂ ಜಮಾಅತ್ ಈ ಮಹತ್ವದ ತೀರ್ಮಾನ ಕೈ ಗೊಂಡಿದೆ. ರಾಜ್ಯ ಮುಸ್ಲಿಂ ಜಮಾಅತ್ ಕ್ಯಾಬಿನೆಟ್ ಸಭೆಯು ಈ ವಿಷಯಕ್ಕೆ ಅಂಗೀಕಾರ ನೀಡಿದ್ದು ಮುಸ್ಲಿಂ ಜಮಾಅತ್ ರಾಜ್ಯ ಉಪಾಧ್ಯಕ್ಷ ಮೌಲಾನಾ ಶಾಫಿ ಸಅದಿ ನೇತೃತ್ವದಲ್ಲಿ ಈ ಹೋರಾಟ ಚುರುಕುಗೊಳ್ಳಲಿದೆ.
ಮುಸ್ಲಿಂ ಜಮಾಅತ್ ನ ಯುವಜನ ಮತ್ತು ವಿದ್ಯಾರ್ಥಿ ಘಟಕಗಳಾದ ಎಸ್ ವೈ ಎಸ್ ಮತ್ತು ಎಸ್ ಎಸ್ ಎಫ್ ಕೂಡಾ ಈ 2B ಮೀಸಲಾತಿ ರದ್ದತಿ ವಿರುದ್ಧ ವಿವಿಧ ಹೋರಾಟ ಗಳನ್ನು ಸಂಘಟಿಸಲಿದೆ ಎಂದು ಮುಸ್ಲಿಂ ಜಮಾಅತ್ ಅಧ್ಯಕ್ಷ ಮಾಲಾನಾ ಮುಹಮ್ಮದ್ ಪಾಝಿಲ್ ರಝ್ವಿ ಕಾವಲ್ ಕಟ್ಟೆ ಮತ್ತು ರಾಜ್ಯ ಪ್ರಧಾನ ಕಾರ್ಯದರ್ಶಿ ಮೌಲಾನ ಅಬೂ ಸುಫ್ಯಾನ್ ಮದನಿ ಜಂಟಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ