ಮಕ್ಕಾ: ಪವಿತ್ರ ಉಮ್ರಾ ಕರ್ಮ ನಿರ್ವಹಿಸಲು ಮಂಗಳೂರಿನ ಗಲ್ಫ್ ಟೂರ್ಸ್ & ಟ್ರಾವೆಲ್ಸ್ ಮೂಲಕ ಮಕ್ಕಾ ತಲುಪಿದ ಬಂಟ್ವಾಳ ತಾಲೂಕಿನ ವಗ್ಗ ನಿವಾಸಿ ಉಸ್ಮಾನ್ ಎಂಬವರು ಉಮ್ರಾ ನಿರ್ವಹಿಸುತ್ತಿರುವ ವೇಳೆ ಹೃದಯಘಾತಗೊಂಡು ಮಕ್ಕಾದ ಕಿಂಗ್ ಫೈಸಲ್ ಆಸ್ಪತ್ರೆಯಲ್ಲಿ ಕಳೆದ ಒಂದು ತಿಂಗಳಿನಿಂದ ಚಿಕಿತ್ಸೆಯಲ್ಲಿದ್ದು, ಮಾರ್ಚ್ 31 ರಂದು ರಾತ್ರಿ ಕೊನೆಯುಸಿರೆಳೆದರು.
ಕಳೆದ ಫೆಬ್ರವರಿ ತಿಂಗಳಿನಿಂದ ಆಸ್ಪತ್ರೆಯಲ್ಲಿರುವಾಗ ಅವರನ್ನು ಎಲ್ಲಾ ದಿನಗಳಲ್ಲಿ ಮಕ್ಕಾ ಕರ್ನಾಟಕ ಕಲ್ಚರಲ್ ಫೌಂಡೇಶನ್ KCF ನೇತಾರರು ಹೋಗಿ ಕಂಡು ಬರುತ್ತಿದ್ದರು, ಇದೀಗ ಮರಣ ಹೊಂದಿದ ವಿಷಯ ತಿಳಿದು ಕಾರ್ಯಪ್ರವೃತರಾದ ಮಕ್ಕಾ ಸೆಕ್ಟರ್ ಸಾಂತ್ವನ ಇಲಾಖೆ ಹಾಗೂ ಜಿದ್ದಾ ಝೋನ್ ಸಾಂತ್ವನ ಇಲಾಖೆ ಅಧ್ಯಕ್ಷರಾದ ಮೂಸಾ ಹಾಜಿ ಕಿನ್ಯ ಮತ್ತು ಕೆಸಿಎಫ್ ಮದೀನತುಲ್ ಮುನವ್ವರ ಝೋನ್ ಸಾಂತ್ವನ ಕಾರ್ಯದರ್ಶಿ ಅಬ್ದುಲ್ ರಝ್ಝಾಖ್ ಉಳ್ಳಾಲರವರು ಮೃತರ ಅಂತ್ಯಕ್ರಿಯೆಗೆ ಬೇಕಾದ ದಾಖಲೆ ಪತ್ರಗಳು, ಭಾರತೀಯ ರಾಯಭಾರಿ ಕಚೇರಿಗೆ ಕಡತಗಳು ಹಾಗೂ ಇನ್ನಿತರ ವ್ಯವಸ್ಥೆಯನ್ನು ತ್ವರಿತ ಗತಿಯಲ್ಲಿ ಸಿದ್ಧಪಡಿಸಲು ಪ್ರಮುಖ ಪಾತ್ರ ವಹಿಸಿದ್ದರು.
ಮಯ್ಯಿತ್ ದಫನ ಕಾರ್ಯದಲ್ಲಿ ಮೃತರ ಮಗ ಕುವೈತ್ ನಿಂದ ಆಗಮಿಸಿದ ಶಮೀಉಲ್ಲಾ, ಸಹೋದರ ಶರೀಫ್, ಬಾವ ಹಮೀದ್ ಮತ್ತು ಕೆಸಿಎಫ್ ಮಕ್ಕತುಲ್ ಮುಕರ್ರಮಃ ಸೆಕ್ಟರ್ ಅಧ್ಯಕ್ಷರಾದ ಅಬ್ದುಲ್ ರಝ್ಝಾಖ್ ರಂತಡ್ಕ, ಪ್ರಧಾನ ಕಾರ್ಯದರ್ಶಿ ಹನೀಫ್ ಕೋಳ್ಯೂರು, ಇಹ್ಸಾನ್ ಇಲಾಖೆ ಅಧ್ಯಕ್ಷರು ಅಬ್ದುಲ್ ಲತೀಫ್ ನೆಲ್ಯಾಡಿ, ಕೆಸಿಎಫ್ ಕುದೈ ಯೂನಿಟ್ ಅಧ್ಯಕ್ಷರು ರಫೀಕ್ ಬೆಳಂದೂರು, ಸದಸ್ಯರಾದ ಇಕ್ಬಾಲ್ ಗಬ್ಗಲ್, ಹಾಗೂ ಸಾಮಾಜಿಕ ಕಾರ್ಯಕರ್ತ ಶಾಕಿರ್ ಹಕ್ಕ್ ಮೊದಲಾದವರು ಭಾಗವಹಿಸಿದ್ದರು.