ದಿನಾಂಕ 05/04/2023 ರಂದು ಜಿಲ್ಲಾ ಕರ್ನಾಟಕ ಮುಸ್ಲಿಂ ಜಮಾತ್ ಕೇಂದ್ರ ಕಚೇರಿಯಲ್ಲಿ ಜಿಲ್ಲಾ ಅಧ್ಯಕ್ಷರಾದ ಅಲ್ ಹಾಜ್ ಮೊಹಮ್ಮದ್ ಶಾಹಿದ್ ರಜ್ವಿ ರವರು ಮತದಾನ ಜಾಗೃತಿ ಅಭಿಯಾನಕ್ಕೆ ಚಾಲನೆ ನೀಡಿದರು.
ಕರ್ನಾಟಕ ಮುಸ್ಲಿಂ ಜಮಾತ್ ವತಿಂದ ನಮ್ಮ ಸಂಸ್ಥೆಯ ಪದಾಧಿಕಾರಿಗಳು ಕಾರ್ಯಕರ್ತರು ಉಲಮಾ ಮತ್ತು ಧಾರ್ಮಿಕ ಮುಖಂಡರ ತಂಡವು ಏಪ್ರಿಲ್ ತಿಂಗಳ 5 ನೇ ತಾರೀಖಿನ ವರೆಗೆ ರಾಜ್ಯಾದ್ಯಂತ ಮತದಾರರನ್ನು ಭೇಟಿ ಮಾಡಿ ಮತದಾನ ಜಾಗೃತಿ ಮೂಡಿಸಲಾಗುವುದು ಈ ಸಂದರ್ಭದಲ್ಲಿ ಮಾತನಾಡಿದ ಅಧ್ಯಕ್ಷರು ಚುನಾವಣೆ ಸಮೀಪಿಸುತ್ತಿದ್ದಂತೆ ಕೆಲವು ವ್ಯಕ್ತಿಗಳು ಮುಸ್ಲಿಂ ಸಮುದಾಯ ಮುಖಂಡರೆಂದು ಹೇಳಿಕೊಂಡು ಸಮುದಾಯದಲ್ಲಿ ಗೊಂದಲ ಸೃಷ್ಟಿ ಮಾಡಿ ವದಂತಿಗಳನ್ನು ಹಬ್ಬಿಸುತಿದ್ದು ಇಂತಹ ನಕಲಿ ವ್ಯಕ್ತಿಗಳ ವದಂತಿಗಳಿಗೆ ಕಿವಿಗೊಡಬಾರದು ಎಂದು ಸಮುದಾಯ ಮುಖಂಡರೊಂದಿಗೆ ಜಾಗೃತಿ ವಹಿಸಲು ಸಲಹೆ ನೀಡಿದರು.
ಮುಸ್ಲಿಂ ಸಮುದಾಯವು ಯಾವುದೇ ಪ್ರತ್ಯೇಕ ಪಕ್ಷಕ್ಕಾಗಲಿ ಅಥವಾ ಪ್ರತ್ಯೇಕ ಅಬ್ಯಾರ್ಥಿಗಾಗಲಿ ಚುನಾವಣೆ ಮೂಲಕ ಬೆಂಬಲಿಸುವುದಿಲ್ಲ ಅಥವಾ ಬಹಿರಂಗವಾಗಿ ಪ್ರಚಾರ ಮಾಡುವುದೇ ಆಗಲಿ ಸಮುದಾಯದ ಶಿಸ್ತು ಪಾಲನೆಗೆ ವಿರುದ್ಧವಾಗಿದೆ ಸಮುದಾಯದ ಏಳಿಗೆಗಾಗಿ ಶೈಕ್ಷಣಿಕವಾಗಿ ಸಾಮಾಜಿಕವಾಗಿ ಶ್ರಮಿಸುವ ಹಾಗು ಅಲ್ಪಸಂಖ್ಯಾತರ ಭಾವನೆಗಳಿಗೆ ಗೌರವಿಸುವ ಒಳ್ಳೆಯ ಮನೋಭಾವ ಹೊಂದಿರುವ ವ್ಯಕ್ತಿಗಳನ್ನು ಗುರುತಿಸಿ ಸೂಕ್ತ ಸಮಯದಲ್ಲಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಸಂಸ್ತೆಯ ರಾಜ್ಯ ಸದಸ್ಯರಾದ ಯೂಸುಫ್ ಹಾಜಿ ಜಿಲ್ಲಾ ಕಾರ್ಯದರ್ಶಿಯಾದ ಅಲ್ ಹಾಜ್ ಫೈರೋಜ್ ಅಹಮದ್ ರಜ್ವಿ ತಾಲೂಕು ಅಧ್ಯಕ್ಷರಾದ ಮೊಹಮದ್ ಆರಿಫ್ ಅಲಿ ಖಾನ್, ಇನ್ನಿತರೆ ಧಾರ್ಮಿಕ ಮುಖಂಡರು, ಉಲೇಮಾ ಗಳು ಉಮಾರಗಳು ಉಪಸ್ಥಿತರಿದ್ದರು.
















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ