ಕೆ.ಸಿ.ಎಫ್ ಖತ್ತರ್ ರಾಷ್ಟ್ರೀಯ ಸಮಿತಿ ವತಿಯಿಂದ ಬ್ರಹತ್ ಇಫ್ತಾರ್ ಮೀಟ್ ಕಾರ್ಯಕ್ರಮವು ದಿನಾಂಕ 07-04-2023 ರಂದು ದೋಹಾದ ಫಿನಿಕ್ಸ್ ಸ್ಕೂಲ್ ಸಭಾಂಗಣದಲ್ಲಿ ನಡೆಯಿತು.

ಇಫ್ತಾರ್ ಸಂಗಮ ಸ್ವಾಗತ ಸಮಿತಿ ಅಧ್ಯಕ್ಷರಾದ ಮುನೀರ್ ಮಗುಂಡಿ ರವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು, ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ ಸದಸ್ಯರಾದ ಯೂಸುಫ್ ಸಖಾಫಿ ಅಯ್ಯಂಗೇರಿ ರವರು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು ಇಫ್ತಾರ್ ಕಾರ್ಯಕ್ರಮ ಸಂಘಟಿಸುವ ಮಹತ್ವ ಹಾಗೂ ಕೆಸಿಎಫ್ ನಡೆಸಿಕೊಂಡು ಬರುತ್ತಿರುವ ಕಾರ್ಯಚಟುವಟಿಕೆಗಳ ಬಗ್ಗೆ ಸವಿಸ್ತಾರವಾಗಿ ವಿವರಿಸಿದರು. ಖತ್ತರ್ ರಾಷ್ಟ್ರೀಯ ಸಮಿತಿ ಅಧ್ಯಕ್ಷರಾದ ಹನೀಫ್ ಪಾತೂರು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡುತ್ತಾ ಕೆಸಿಎಫ್ ಸಹಕಾರದೊಂದಿಗೆ ನಡೆಸಲ್ಪಡುತ್ತಿರುವ ಇಹ್ಸಾನ್ ಕರ್ನಾಟಕ ಕಾರ್ಯಾಯೋಜನೆಯ ಬಗ್ಗೆ ಸಭಿಕರೊಂದಿಗೆ ಹಂಚಿಕೊಂಡರು.
ವೇದಿಕೆಯಲ್ಲಿ ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ ಅಡ್ಮಿನ್ ವಿಭಾಗ ಅಧ್ಯಕ್ಷರಾದ ಕಬೀರ್ ದೇರಳಕಟ್ಟೆ, ರಾಷ್ಟ್ರೀಯ ಸಮಿತಿ ಪ್ರಕಾಶನ ವಿಭಾಗದ ಅಧ್ಯಕ್ಷರಾದ ಯಹ್ಯಾ ಸಅದಿ, ಶಿಕ್ಷಣ ವಿಭಾಗದ ಅಧ್ಯಕ್ಷರಾದ ಖಾಲಿದ್ ಹಿಮಮಿ, ಜಮಾಲ್ ಮೂಡಬಿದ್ರೆ, ಶಕೀಲ್ ಉಡುಪಿ ಉಪಸ್ಥಿತರಿದ್ದರು.
ಸರಿಸುಮಾರು 400 ಕ್ಕಿಂತಲೂ ಅಧಿಕ ಸದಸ್ಯರು ಹಾಗೂ ಹಿತೈಷಿಗಳನ್ನೊಳಗೊಂಡು ಮೂಡಿಬಂದ ಈ ಬೃಹತ್ ಇಫ್ತಾರ್ ಕಾರ್ಯಕ್ರಮಕ್ಕೆ ಹಾಫಿಳ್ ಉಮರುಲ್ ಫಾರುಖ್ ಸಖಾಫಿ ಉಸ್ತಾದರ ನೇತೃತ್ವದಲ್ಲಿ ಬದ್ರ್ ಮೌಲಿದ್ ಹಾಗೂ ದುಆ ಮಜ್ಲಿಸ್ ನಡೆಸುವ ಮೂಲಕ ಚಾಲನೆ ನೀಡಲಾಯಿತು. ಆಸಿಫ್ ಅಹ್ಸನಿ ಕೊಡಗು ರವರು ಬದ್ರ್ ಬೈತ್ ಆಲಾಪನೆ ನಡೆಸಿದರು.
ಕಾರ್ಯಕ್ರಮದ ಭಾಗವಾಗಿ ಕರ್ನಾಟಕದಾದ್ಯಂತ ಕೆಸಿಎಫ್ ನಡೆಸುವ ಇಹ್ಸಾನ್ ಕಾರ್ಯಾಚರಣೆಯ ಸಾಕ್ಷ್ಯಚಿತ್ರ ಪ್ರದರ್ಶನ ಹಾಗೂ ಕೆಸಿಎಫ್ ಖತ್ತರ್ ಅಧೀನದಲ್ಲಿ ರಚನೆಗೊಂಡ ಯುನಿಟ್’ಗಳ ಪೈಕಿ ಅಲ್’ಕೋರ್, ಸನಯ್ಯ ಹಾಗೂ ದೋಹಾ ಜದೀದ್ ಯುನಿಟ್ ಗಳಿಗೆ ಮಾನ್ಯತಾ ಪ್ರಮಾಣಪತ್ರ ವಿತರಿಸಲಾಯಿತು.
ಕೆಸಿಫ್ ರಾಷ್ಟೀಯ ಸಮಿತಿ ಪ್ರಧಾನ ಕಾರ್ಯದರ್ಶಿ ಫಾರೂಕ್ ಕೃಷ್ಣಾಪುರ ಸ್ವಾಗತಿಸಿ, ಇಫ್ತಾರ್ ಸ್ವಾಗತ ಸಮಿತಿ ಕನ್ವೀನರ್ ಝಾಕಿರ್ ಚಿಕ್ಕಮಗಳೂರು ವಂದಿಸಿದರು.
















ಇನ್ನಷ್ಟು ಸುದ್ದಿಗಳು
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ