ಬೆಂಗಳೂರು: ಭಾರೀ ಕುತೂಹಲ ಕೆರಳಿಸಿದ್ದ ಕರ್ನಾಟಕ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಕಾಂಗ್ರೆಸ್ ಭರ್ಜರಿ ಬಹುಮತ ಪಡೆದಿದೆ. ಬಿಜೆಪಿ ಹೀನಾಯ ಸೋಲು ಕಂಡಿದ್ದು, 65 ಸ್ಥಾನಕ್ಕೆ ಸೀಮಿತವಾಗಿದೆ. ಕಾಂಗ್ರೆಸ್ 136 ಕ್ಷೇತ್ರಗಳನ್ನು ಗೆದ್ದಿದ್ದು, ಜೆಡಿಎಸ್ 19, ಇತರರು 4 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದಾರೆ.
ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಮೂರು ಪಕ್ಷಗಳ ನಡುವಿನ ಭಾರಿ ಹಣಾಹಣಿ, ಅಬ್ಬರದ ಪ್ರಚಾರ, ಪ್ರತಿಷ್ಠೆಯನ್ನೇ ಪಣವಾಗಿಟ್ಟು ನಡೆದ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದ 3.67 ಕೋಟಿ ಮತದಾರರು ನೀಡಿರುವ ಜನಾದೇಶ ಬಹಿರಂಗವಾಗಿದೆ. ಈ ಮೂರು ಪಕ್ಷಗಳ ಜೊತೆಗೇ ಎಎಪಿ, ಬಿಎಸ್ ಪಿ ಮತ್ತು ನಟ ಉುಪೇಂದ್ರ ಅವರ ಉತ್ತಮ ಪ್ರಜಾಕೀಯ ಪಕ್ಷದ ಅಭ್ಯರ್ಥಿಗಳು ಕೂಡ ತಮ್ಮ ಅದೃಷ್ಟಪರೀಕ್ಷೆಗೆ ನಿಂತಿದ್ದಾರೆ.
ಪ್ರಮುಖವಾಗಿ ಲೋಕಸಭೆ ಚುನಾವಣೆಗೆ ಒಂದು ವರ್ಷ ಇರುವಾಗ ನಡೆದಿರುವ ಈ ಚುನಾವಣೆಯ ಫಲಿತಾಂಶ ರಾಜ್ಯ ಮಾತ್ರವಲ್ಲ, ದೇಶದ ರಾಜಕೀಯ ದಿಕ್ಕನ್ನು ನಿರ್ಧರಿಸಲಿದೆ ಎಂದು ಹೇಳಲಾಗುತ್ತಿದ್ದು, ಈ ಕಾರಣಕ್ಕೆ, ಫಲಿತಾಂಶ ಇಡೀ ದೇಶದ ಗಮನ ಸೆಳೆದಿದೆ.
ವಿಧಾನಸಭೆಯ 224 ಕ್ಷೇತ್ರಗಳ ಪ್ರತಿನಿಧಿಗಳ ಆಯ್ಕೆಗೆ ಬುಧವಾರ (ಏಪ್ರಿಲ್ 10) ಮತದಾನ ನಡೆದಿತ್ತು. 5.07 ಕೋಟಿ ಮತದಾರರಲ್ಲಿ 3.67 ಕೋಟಿ ಮಂದಿ ಮತಚಲಾಯಿಸಿದ್ದರು. 2,615 ಅಭ್ಯರ್ಥಿಗಳು ಕಣದಲ್ಲಿದ್ದರು.
















ಇನ್ನಷ್ಟು ಸುದ್ದಿಗಳು
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ