ಮಡಿಕೇರಿ: ಕರ್ನಾಟಕ ಸುನ್ನೀ ಸ್ಟೂಡೆಂಟ್ಸ್ ಫೆಡರೇಷನ್ ರಾಜ್ಯ ಸಮಿತಿ ಹಮ್ಮಿಕೊಂಡಿರುವ Initium ಜಿಲ್ಲಾ ಸೆಕ್ರೆಟರಿಯೇಟ್ ನಾಯಕರ ಕಾರ್ಯಾಗಾರ ನಾಳೆ ಮಧ್ಯಾಹ್ನ ಎರಡು ಗಂಟೆಗೆ ಕೊಡಗು ಜಿಲ್ಲೆಯ ಅಯ್ಯಂಗೇರಿಯಲ್ಲಿ ನಡೆಯಲಿದೆ.
ಎರಡು ದಿನಗಳ ಕಾಲ ನಡೆಯಲಿರುವ ಶಿಬಿರವನ್ನು ಎಸ್ವೈಎಸ್ ರಾಜ್ಯಾಧ್ಯಕ್ಷ ಹಫೀಲ್ ಸಅದಿ ಕೊಡಗು ಉದ್ಘಾಟಿಸಲಿದ್ದಾರೆ.
ಎಸ್ವೈಎಸ್ ರಾಜ್ಯ ಕಾರ್ಯದರ್ಶಿ ಜಿಎಂ ಮುಹಮ್ಮದ್ ಕಾಮಿಲ್ ಸಖಾಫಿ, ಎಸ್ಸೆಸ್ಸೆಫ್ ರಾಷ್ಟ್ರೀಯ ನಾಯಕರಾದ ರಾಶಿದ್ ಬುಖಾರಿ ಕೇರಳ, ಸಿಎನ್ ಜಾಫರ್ ಕಾಸರಗೋಡು ಹಾಗೂ ಅನಸ್ ಅಮಾನಿ ಪುಷ್ಪಗಿರಿ ವಿವಿಧ ವಿಷಯಗಳಲ್ಲಿ ತರಗತಿ ನಡೆಸಲಿದ್ದಾರೆ.
ಸಕಾಲಿಕವಾದ ವಿವಿಧ ವಿಷಯಗಳಲ್ಲಿ ಚರ್ಚೆಗಳು ನಡೆಯಲಿದ್ದು. ಎಸ್ಸೆಸ್ಸೆಫ್ ರಾಜ್ಯಾಧ್ಯಕ್ಷ ಹಾಫಿಝ್ ಸುಫ್ಯಾನ್ ಸಖಾಫಿ ಅಲ್ ಹಿಕಮಿ ಅಧ್ಯಕ್ಷತೆ ವಹಿಸಲಿದ್ದಾರೆ.ಸಮಾರೋಪ ಸಮಾರಂಭವನ್ನು ಎಸ್ಸೆಸ್ಸೆಫ್ ಮಾಜಿ ರಾಜ್ಯಾಧ್ಯಕ್ಷ ಇಸ್ಮಾಯಿಲ್ ಸಖಾಫಿ ಕೊಂಡಂಗೇರಿ ಉದ್ಘಾಟನೆ ಮಾಡಲಿದ್ದು ಎಸ್ಸೆಸ್ಸೆಫ್ ಮಾಜಿ ರಾಜ್ಯ ನಾಯಕರಾದ ಯಾಕೂಬ್ ಮಾಸ್ಟರ್ ಕೊಳಕೇರಿ, ಶರೀಫ್ ಹೊಸತೋಟ, ರಫೀಕ್ ನೆಲ್ಲಿಹುದ್ಕೇರಿ, ಕೆಎಂ ಮುಸ್ತಫಾ ನಈಮಿ ಹಾವೇರಿ ಹಾಗೂ ಪ್ರಮುಖರು ಭಾಗವಹಿಸಲಿದ್ದಾರೆ ಎಂದು ಎಸ್ಸೆಸ್ಸೆಫ್ ರಾಜ್ಯ ಪ್ರಧಾನ ಕಾರ್ಯದರ್ಶಿ ಸಫ್ವಾನ್ ಚಿಕ್ಕಮಗಳೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

















ಇನ್ನಷ್ಟು ಸುದ್ದಿಗಳು
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ