ಮಂಗಳೂರು: ಸಂಸ್ಕೃತಿಯ ನೆಲೆಬೀಡಾಗಿರುವ ಕರುನಾಡು ಕೋಮುವಾದ ಹಾಗೂ ಮಾದಕ ವ್ಯಸನಗಳಿಗೆ ತತ್ತರಿಸಿ ಹೋಗಿವೆ.
ಅದನ್ನು ಸಂಪೂರ್ಣ ನಿರ್ನಾಮ ಗೊಳಿಸುವುದಕ್ಕೆ ಸರ್ಕಾರವು ಮೊದಲ ಆದ್ಯತೆ ನೀಡಬೇಕಿದೆ ಹಾಗೂ ಗೃಹ ಖಾತೆ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ನೀಡುವಾಗ ಇದನ್ನು ಪರಿಗಣಿಸುವಂತೆಯೂ SKSSF ರಾಜ್ಯ ನಾಯಕ ಇಕ್ಬಾಲ್ ಬಾಳಿಲ ಈಮೈಲ್ ಮೂಲಕ ಹಾಗೂ ಸಂಬಂಧಪಟ್ಟ ಅಧಿಕಾರಿಗಳ ಮೂಲಕ ಮುಖ್ಯಮಂತ್ರಿಗೆ ಮನವಿಯನ್ನು ಸಲ್ಲಿಸಿದ್ದಾರೆ.
ಪ್ರತೇಕವಾಗಿ ದಕ್ಷಿಣ ಕನ್ನಡ ಜಿಲ್ಲೆಯು ಶಿಕ್ಷಣ, ಆರೋಗ್ಯ, ಸ್ವಚ್ಚತೆ, ಧಾರ್ಮಿಕ ಆಚರಣೆಗಳ ಮೂಲಕ ಅತ್ಯಂತ ಗೌರವ ಉಳಿಸಿಕೊಂಡ ಜಿಲ್ಲೆ. ಆದರೆ ಕೆಲವು ವರ್ಷಗಳಿಂದ ಕೋಮುವಾದ ಮತ್ತು ಮಾದಕ ವ್ಯಸನವು ವ್ಯಾಪಕವಾಗಿ ಹರಡಿ ಜಿಲ್ಲೆಯನ್ನು ತಲೆತಗ್ಗಿಸುವಂತೆ ಮಾಡಿದೆ.
ಸೇವಾರಂಗದಲ್ಲಿ ಕ್ರಾಂತಿಯ ಹೆಜ್ಜೆ ಹಾಕಿರುವ SKSSF ಸಂಘಟನೆಯು ಸೌಹಾರ್ದತೆಯ ಉಳಿವಿವಾಗಿ ಪ್ರತೀ ವರ್ಷವೂ ನೂರಕ್ಕೂ ಅಧಿಕ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ
ಪ್ರತೇಕವಾಗಿ ಸ್ವಾತಂತ್ರ್ಯ ದಿನಾಚರಣೆ ಹಾಗೂ ಗಣರಾಜ್ಯೋತ್ಸವ ದಿನದಂದು ಸಾವಿರಾರು ಜನರನ್ನು ಸೇರಿಸಿ ಅದ್ಬುತ ಕಾರ್ಯಕ್ರಮ ನೀಡುವ ಮೂಲಕ ಕೋಮುವಾದ ಮಾದಕ ವ್ಯಸನ ನಿರ್ನಾಮಕ್ಕಾಗಿ ಪ್ರಯತ್ನಿಸಲಾಗಿದೆ. ಆದರೂ ಸಂಪೂರ್ಣ ಕಡಿವಾಣ ಬೀಳಬೇಕಾದ ಅನಿವಾರ್ಯವಿದೆ.
ಅದಕ್ಕೊಂದು ಪರಿಹಾರ ಕಂಡುಕೊಳ್ಳಬೇಕಾದರೆ ಸಮರ್ಥವಾಗಿ ಎದುರಿಸಬಲ್ಲ ನಾಯಕನನ್ನು ದಕ್ಷಿಣ ಕನ್ನಡ ಜಿಲ್ಲೆಗೆ ಉಸ್ತುವಾರಿ ಸಚಿವರನ್ನಾಗಿ ನೇಮಿಸಬೇಕೆಂದು ಇಕ್ಬಾಲ್ ಬಾಳಿಲ ಮನವಿಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಮಾದಕ ವಸ್ತು ‘ಖಾತ್’ ಮಾರಾಟ: ಭಾರತೀಯ ಪ್ರಜೆ ಸೌದಿಯಲ್ಲಿ ಬಂಧನ
ಅನಿವಾಸಿಗಳಿಗೆ ಶುಭ ಸುದ್ದಿ: ಕುವೈತ್ನಿಂದ ಭಾರತೀಯ ವಿಮಾನ ಸೇವೆಗಳು ಪುನರಾರಂಭ
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ