ನಾಲೆಜ್ ಸಿಟಿ: ಕರ್ನಾಟಕದ ಕೊಡಗು ಜಿಲ್ಲೆಯ 56 ಮೊಹಲ್ಲಾಗಳ ಪದಾಧಿಕಾರಿಗಳು ತಮ್ಮ ಖಾಝಿಯಾದ ಕಾಂದಪುರಂ ಎ.ಪಿ.ಅಬೂಬಕರ್ ಮುಸ್ಲಿಯಾರ್ ಅವರನ್ನು ಭೇಟಿಯಾದರು.
ಕೊಡಗು ಜಿಲ್ಲೆಯ ಸಂಯುಕ್ತ ಖಾಝಿಯಾದ ಕಾಂದಪುರಂ ಉಸ್ತಾದರು ಕೊಡಗಿಗೆ ಆಗಾಗ್ಗೆ ಭೇಟಿ ನೀಡಿ ಸಂಬಂಧವನ್ನು ಹೆಚ್ಚಿಸುತ್ತಿದ್ದರು. ಈ ಸಂಬಂಧವನ್ನು ಗಟ್ಟಿಗೊಳಿಸುವ ಸಲುವಾಗಿ ಸುನ್ನಿ ಸಂಘಟನೆಗಳ ನಾಯಕರು ಹಾಗೂ ಸಮಿತಿಯ ಪದಾಧಿಕಾರಿಗಳು ಜಾಮಿಉಲ್ ಫುತೂಹ್ ಗೆ ಆಗಮಿಸಿ ಸಭೆ ನಡೆಸಿದರು.
ಮೊಹಲ್ಲಾ – ಸಾಂಸ್ಥಿಕ ಸಬಲೀಕರಣ, ಆದರ್ಶ ಪ್ರಚಾರ, ಶಿಕ್ಷಣ ಮತ್ತು ಸಾಮಾಜಿಕ ಸೇವೆ, ಇತ್ಯಾದಿಗಳ ಕುರಿತು ಚರ್ಚೆ ನಡೆದವು. ಕಾದಪುರಂ ಉಸ್ತಾದ್ ಎಲ್ಲಾ ಮಹಲ್ಲುಗಳಲ್ಲಿ ಮಹ್ಲರತುಲ್ ಬದ್ರಿಯ್ಯಃ ಪ್ರಾರಂಭಿಸಲು ಸೂಚಿಸಿ ಇಜಾಝತ್ ನೀಡಿದರು.
ಜೊತೆಗೆ ಈ ಬಾರಿ ಹಜ್ ಗೆ ತೆರಳುವವರಿಗಾಗಿ ಪ್ರಾರ್ಥಿಸಿದರು. ಕಾಂದಪುರಂ ಉಸ್ತಾದ್ ಖಾಝಿಯಾಗಿರುವ ವಿವಿಧ ಮಹಲ್ಲುಗಳ ಸಂಗಮ ಮುಂದಿನ ದಿನಗಳಲ್ಲಿ ಜಾಮಿಉಲ್ ಫುತೂಹ್ನಲ್ಲಿ ನಡೆಯಲಿದೆ.
ಸಭೆಯಲ್ಲಿ ಡಾ| ಎಪಿ ಅಬ್ದುಲ್ ಹಕೀಂ ಅಝ್ಹರಿ ಮಹಲ್ಲ್ ಪ್ರತಿನಿಧಿಗಳೊಂದಿಗೆ ಮಾತನಾಡಿದರು.
ನಾಇಬ್ ಖಾಝಿ ಕೆ.ಎಸ್.ಶಾದುಲಿ ಫೈಝಿ, ಕರ್ನಾಟಕ ಎಸ್ ವೈಎಸ್ ರಾಜ್ಯಾಧ್ಯಕ್ಷ ಅಬ್ದುಲ್ ಹಫೀಝ್ ಸಅದಿ, ಇಸ್ಮಾಯಿಲ್ ಸಖಾಫಿ ಕೊಂಡಂಗೇರಿ, ಅಶ್ರಫ್ ಅಹ್ಸನಿ, ಸಿ.ಪಿ.ಅಬ್ದುಲ್ ಮಜೀದ್ ಮದನಿ, ಮುಹಮ್ಮದ್ ಹಾಜಿ, ಅಬ್ದುಲ್ ಹಮೀದ್ ಮುಸ್ಲಿಯಾರ್, ಇಲ್ಯಾಸ್ ತಙ್ಙಳ್ ಎರುಮಾಡ್, ಝುಬೈರ್ ಸಅದಿ, ಅಡ್ವೊಕೇಟ್ ಕುಞ್ಞಬ್ದುಲ್ಲಾ ಹಾಗೂ ಪಿಎ ಯೂಸುಫ್ ಹಾಜಿ ಎಂಬಿವರು ಮಾತನಾಡಿದರು.
















ಇನ್ನಷ್ಟು ಸುದ್ದಿಗಳು
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್