ನಾಲೆಜ್ ಸಿಟಿ: ಕರ್ನಾಟಕದ ಕೊಡಗು ಜಿಲ್ಲೆಯ 56 ಮೊಹಲ್ಲಾಗಳ ಪದಾಧಿಕಾರಿಗಳು ತಮ್ಮ ಖಾಝಿಯಾದ ಕಾಂದಪುರಂ ಎ.ಪಿ.ಅಬೂಬಕರ್ ಮುಸ್ಲಿಯಾರ್ ಅವರನ್ನು ಭೇಟಿಯಾದರು.
ಕೊಡಗು ಜಿಲ್ಲೆಯ ಸಂಯುಕ್ತ ಖಾಝಿಯಾದ ಕಾಂದಪುರಂ ಉಸ್ತಾದರು ಕೊಡಗಿಗೆ ಆಗಾಗ್ಗೆ ಭೇಟಿ ನೀಡಿ ಸಂಬಂಧವನ್ನು ಹೆಚ್ಚಿಸುತ್ತಿದ್ದರು. ಈ ಸಂಬಂಧವನ್ನು ಗಟ್ಟಿಗೊಳಿಸುವ ಸಲುವಾಗಿ ಸುನ್ನಿ ಸಂಘಟನೆಗಳ ನಾಯಕರು ಹಾಗೂ ಸಮಿತಿಯ ಪದಾಧಿಕಾರಿಗಳು ಜಾಮಿಉಲ್ ಫುತೂಹ್ ಗೆ ಆಗಮಿಸಿ ಸಭೆ ನಡೆಸಿದರು.
ಮೊಹಲ್ಲಾ – ಸಾಂಸ್ಥಿಕ ಸಬಲೀಕರಣ, ಆದರ್ಶ ಪ್ರಚಾರ, ಶಿಕ್ಷಣ ಮತ್ತು ಸಾಮಾಜಿಕ ಸೇವೆ, ಇತ್ಯಾದಿಗಳ ಕುರಿತು ಚರ್ಚೆ ನಡೆದವು. ಕಾದಪುರಂ ಉಸ್ತಾದ್ ಎಲ್ಲಾ ಮಹಲ್ಲುಗಳಲ್ಲಿ ಮಹ್ಲರತುಲ್ ಬದ್ರಿಯ್ಯಃ ಪ್ರಾರಂಭಿಸಲು ಸೂಚಿಸಿ ಇಜಾಝತ್ ನೀಡಿದರು.
ಜೊತೆಗೆ ಈ ಬಾರಿ ಹಜ್ ಗೆ ತೆರಳುವವರಿಗಾಗಿ ಪ್ರಾರ್ಥಿಸಿದರು. ಕಾಂದಪುರಂ ಉಸ್ತಾದ್ ಖಾಝಿಯಾಗಿರುವ ವಿವಿಧ ಮಹಲ್ಲುಗಳ ಸಂಗಮ ಮುಂದಿನ ದಿನಗಳಲ್ಲಿ ಜಾಮಿಉಲ್ ಫುತೂಹ್ನಲ್ಲಿ ನಡೆಯಲಿದೆ.
ಸಭೆಯಲ್ಲಿ ಡಾ| ಎಪಿ ಅಬ್ದುಲ್ ಹಕೀಂ ಅಝ್ಹರಿ ಮಹಲ್ಲ್ ಪ್ರತಿನಿಧಿಗಳೊಂದಿಗೆ ಮಾತನಾಡಿದರು.
ನಾಇಬ್ ಖಾಝಿ ಕೆ.ಎಸ್.ಶಾದುಲಿ ಫೈಝಿ, ಕರ್ನಾಟಕ ಎಸ್ ವೈಎಸ್ ರಾಜ್ಯಾಧ್ಯಕ್ಷ ಅಬ್ದುಲ್ ಹಫೀಝ್ ಸಅದಿ, ಇಸ್ಮಾಯಿಲ್ ಸಖಾಫಿ ಕೊಂಡಂಗೇರಿ, ಅಶ್ರಫ್ ಅಹ್ಸನಿ, ಸಿ.ಪಿ.ಅಬ್ದುಲ್ ಮಜೀದ್ ಮದನಿ, ಮುಹಮ್ಮದ್ ಹಾಜಿ, ಅಬ್ದುಲ್ ಹಮೀದ್ ಮುಸ್ಲಿಯಾರ್, ಇಲ್ಯಾಸ್ ತಙ್ಙಳ್ ಎರುಮಾಡ್, ಝುಬೈರ್ ಸಅದಿ, ಅಡ್ವೊಕೇಟ್ ಕುಞ್ಞಬ್ದುಲ್ಲಾ ಹಾಗೂ ಪಿಎ ಯೂಸುಫ್ ಹಾಜಿ ಎಂಬಿವರು ಮಾತನಾಡಿದರು.
















ಇನ್ನಷ್ಟು ಸುದ್ದಿಗಳು
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ
ಮುಂಬೈಯನ್ನು ನಡುಗಿಸಿದ ಘಟನೆ: ಬಿರಿಯಾನಿ ಮತ್ತು ಕಲ್ಲಂಗಡಿ ತಿಂದ ಕುಟುಂಬ ಬೆಳಗಾಗುವಷ್ಟರಲ್ಲಿ ಅಂತ್ಯ