ಮಂಗಳೂರು: ಕಳೆದ ವರ್ಷ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೂರು ಕೊಲೆಗಳು ನಡೆದಾಗ ಒಂದು ಕುಟುಂಬಕ್ಕೆ ಮಾತ್ರ ಪರಿಹಾರ ಸಾಂತ್ವನ ನೀಡಿ ತಾರತಮ್ಯ ದೋರಣೆಯ ಮೂಲಕ ಮಾನವೀಯತೆಗೆ ಕೊಡಲಿಯೇಟು ನೀಡಿದ ಬಸವಾಜ್ ಬೊಮ್ಮಾಯಿಗೆ ತಿರುಗೇಟು ನೀಡಬೇಕೆಂದು SKSSF ರಾಜ್ಯ ನಾಯಕ, ಭಾವೈಕ್ಯ ಪರಿಷತ್ ಜಿಲ್ಲಾಧ್ಯಕ್ಷ ಇಕ್ಬಾಲ್ ಬಾಳಿಲ ತಿಳಿಸಿದ್ದಾರೆ.
ಪ್ರವೀಣ್ ನೆಟ್ಟಾರು ಪತ್ನಿ ನೂತನ ಕುಮಾರಿಗೆ ತಾತ್ಕಾಲಿಕ ಉದ್ಯೋಗ ನೀಡಿದ ಬಿಜೆಪಿಯ ಕುತಂತ್ರವೂ ಬಹಿರಂಗಗೊಂಡಿದೆ.ಈ ನಿಟ್ಟಿನಲ್ಲಿ ಮರುನೇಮಕವೂ ಸ್ವಾಗತಾರ್ಹ ಎಂದು ತಿಳಿಸಿದರು.
ಮಾಜಿ ಮುಖ್ಯಮಂತ್ರಿ, ಪ್ರವೀಣ್ ನೆಟ್ಟಾರು ಮನೆಗೆ ಬೇಟಿ ನೀಡಿ ಅಲ್ಲೇ ಪಕ್ಕದಲ್ಲಿದ್ದ ಮಸೂದ್ ಮನೆಗೆ ಹಾಗೂ ಸುರತ್ಕಲ್ ಫಾಝಿಲ್ ಮನೆಗೆ ಬೇಟಿ ನೀಡದೆ ತಾರತಮ್ಯ ದೋರಣೆಯ ಮೂಲಕ ಧರ್ಮಗಳ ಮದ್ಯೆ ಬಿರುಕಿಗೆ ಸೇತುವೆ ಕಟ್ಟಿಕೊಟ್ಟಿದ್ದಾರೆ.
ಈ ಸರಕಾರದ ನಿರೀಕ್ಷೆಯಲ್ಲಿರುವ ಎರಡು ಕುಟುಂಬಗಳಿಗೆ ಜೊತೆಗೆ ನೆಟ್ಟಾರ್ ಮನೆಗೂ ಮುಖ್ಯಮಂತ್ರಿಗಳು ಬೇಟಿ ನೀಡಿ ಮಾನವೀಯತೆಯನ್ನು ಜೀವಂತಗೊಳಿಸಲು ಕೋರಿದ್ದಾರೆ. ಇದರಿಂದ ಮಾಜಿ ಮುಖ್ಯಮಂತ್ರಿಯವರ ತಾರತಮ್ಯ ಧೋರಣೆಗೆ ಪಾಠ ಕಳಿಸಿದಂತಾಗುವುದು ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಮಾದಕ ವಸ್ತು ‘ಖಾತ್’ ಮಾರಾಟ: ಭಾರತೀಯ ಪ್ರಜೆ ಸೌದಿಯಲ್ಲಿ ಬಂಧನ
ಅನಿವಾಸಿಗಳಿಗೆ ಶುಭ ಸುದ್ದಿ: ಕುವೈತ್ನಿಂದ ಭಾರತೀಯ ವಿಮಾನ ಸೇವೆಗಳು ಪುನರಾರಂಭ
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ