ಬೆಂಗಳೂರು: ‘ಸೌದಿ ಅರೇಬಿಯಾದಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿರುವ ವ್ಯಕ್ತಿಯೊಬ್ಬರ ಪ್ರಕರಣದಲ್ಲಿ ತನಿಖೆಗೆ ಸೂಕ್ತ ಸಹಕಾರ ನೀಡುತ್ತಿಲ್ಲ ಎಂಬ ಮಂಗಳೂರು ಪೊಲೀಸರ ಆಕ್ಷೇಪವನ್ನು ಗಂಭೀರವಾಗಿ ಪರಿಗಣಿಸಬೇಕಾಗುತ್ತದೆ ಮತ್ತು ಭಾರತದಲ್ಲಿ ಫೇಸ್ಬುಕ್ ಕಾರ್ಯಚರಣೆ ಬಂದ್ ಮಾಡಲು ಆದೇಶ ಹೊರಡಿಸಬೇಕಾಗುತ್ತದೆ’ ಎಂದು ಹೈಕೋರ್ಟ್ ಕಠಿಣ ಎಚ್ಚರಿಕೆ ನೀಡಿದೆ.
ಈ ಸಂಬಂಧ ಮಂಗಳೂರಿನ ಬಿಕರ್ನಕಟ್ಟೆ ನಿವಾಸಿ ಶೈಲೇಶ್ ಕುಮಾರ ಪತ್ನಿ ಕವಿತಾ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.
‘ಫೇಸ್ಬುಕ್ ಸಂಸ್ಥೆಯು ಒಂದು ವಾರದಲ್ಲಿ ಘಟನೆಯ ಕುರಿತು ಸೂಕ್ತ ಮಾಹಿತಿ ಒಳಗೊಂಡ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕು. ಭಾರತೀಯ ಪ್ರಜೆ ಸುಳ್ಳು ಪ್ರಕರಣದಲ್ಲಿ ವಿದೇಶದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿರುವ ಹಿನ್ನೆಲೆಯಲ್ಲಿ ಆತನ ಬಿಡುಗಡೆಗೆ ಯಾವೆಲ್ಲಾ ಕ್ರಮ ಕೈಗೊಳ್ಳಲಾಗಿದೆ ಎಂಬ ಬಗ್ಗೆ ಕೇಂದ್ರ ಸರ್ಕಾರ ಅಗತ್ಯ ಮಾಹಿತಿ ನೀಡಬೇಕು. ಮಂಗಳೂರು ಪೊಲೀಸರೂ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮರ್ಪಕ ತನಿಖೆ ಕೈಗೊಂಡು ವರದಿ ಸಲ್ಲಿಸಬೇಕು’ ಎಂದು ನ್ಯಾಯಪೀಠ ನಿರ್ದೇಶಿಸಿದೆ. ವಿಚಾರಣೆಯನ್ನು ಇದೇ 22ಕ್ಕೆ ಮುಂದೂಡಲಾಗಿದೆ.
ಏನಿದು ಪ್ರಕರಣ?
ಮಂಗಳೂರಿನ ಬಿಕರ್ನಕಟ್ಟೆಯ 45 ವರ್ಷದ ಶೈಲೇಶ್ ಕುಮಾರ್ ಹಲವು ವರ್ಷಗಳಿಂದ ಸೌದಿ ಅರೇಬಿಯಾದ ಅಲ್ ಕುಬೆ ಎಂಬಲ್ಲಿ ಉದ್ಯೋಗಿಯಾಗಿದ್ದಾರೆ. ಪತ್ನಿ ಮತ್ತು ಮಕ್ಕಳು ಬಿಕರನಕಟ್ಟೆಯಲ್ಲಿ ವಾಸ ಮಾಡುತ್ತಿದ್ದಾರೆ.
ಶೈಲೇಶ್ 2019ರಲ್ಲಿ ಕೇಂದ್ರ ಸರ್ಕಾರ ರೂಪಿಸಿದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಮತ್ತು ರಾಷ್ಟ್ರೀಯ ಪೌರತ್ವ ನೋಂದಣಿ ಕಾಯ್ದೆ (ಎನ್ಆರ್ಸಿ) ಬೆಂಬಲಿಸಿ ತಮ್ಮ ಫೇಸ್ಬುಕ್ನಲ್ಲಿ ಪೋಸ್ಟ್ ಮಾಡಿದ್ದರು. ಇದರಿಂದ ಅವರಿಗೆ ಅನಾಮಿಕರಿಂದ ಬೆದರಿಕೆ ಬಂದಿತ್ತು. ಹಾಗಾಗಿ, ಅವರು ತಮ್ಮ ಫೇಸ್ಬುಕ್ ಖಾತೆಯನ್ನು ರದ್ದುಪಡಿಸಿದ್ದರು.
ಏತನ್ಮಧ್ಯೆ ಶೈಲೇಶ್ ಕುಮಾರ್ ಹೆಸರಿನಲ್ಲಿ 2020ರ ಫೆಬ್ರುವರಿಯಲ್ಲಿ ಅನಾಮಧೇಯ ವ್ಯಕ್ತಿಗಳು ನಕಲಿ ಫೇಸ್ಬುಕ್ ಖಾತೆ ತೆರೆದು ಸೌದಿ ಅರೇಬಿಯಾದ ದೊರೆ, ಅವರ ಧರ್ಮದ ಹೆಸರಿನಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದ್ದರು. ಇದು ತಮ್ಮ ಗಮನಕ್ಕೆ ಬಂದಕೂಡಲೇ ಶೈಲೇಶ್ ತಮ್ಮ ಸ್ನೇಹಿತರಿಗೆ ಮತ್ತು ಮಂಗಳೂರಿನ ಸಂಬಂಧಿಕರಿಗೆ ತಿಳಿಸಿದ್ದರು.
ಇದೇ ವೇಳೆ ಸೌದಿ ಪೊಲೀಸರು ಶೈಲೇಶ್ ಅವರನ್ನು ಬಂಧಿಸಿದ್ದರು. ಈ ಕುರಿತಂತೆ ಮಂಗಳೂರಿನಲ್ಲಿ ಪತ್ನಿ ಕವಿತಾ ದೂರು ದಾಖಲಿಸಿದ್ದರು. ತನಿಖೆ ಕೈಗೆತ್ತಿಕೊಂಡಿದ್ದ ಮಂಗಳೂರು ಪೊಲೀಸರು, ಫೇಸ್ಬುಕ್ ಸಂಸ್ಥೆಗೆ ಪತ್ರ ಬರೆದು, ಶೈಲೇಶ್ ಹೆಸರಿನಲ್ಲಿ ನಕಲಿ ಖಾತೆ ತೆರೆದವರ ಮಾಹಿತಿ ನೀಡುವಂತೆ ಕೋರಿದ್ದರು. ಅಂತೆಯೇ, ‘ನಿರಪರಾಧಿಯಾದ ನನ್ನ ಗಂಡನನ್ನು ಸೌದಿ ಜೈಲಿನಿಂದ ಬಿಡಿಸಲು ಕ್ರಮ ಜರುಗಿಸಿ’ ಎಂದು ಕೋರಿ ಕೇಂದ್ರ ಸರ್ಕಾರಕ್ಕೂ ಮನವಿ ಸಲ್ಲಿಸಿದ್ದರು.
ಈ ಮನವಿ ಫಲ ನೀಡದ ಕಾರಣ ಅವರು, ‘ಪೊಲೀಸರು ನಿಧಾನಗತಿಯಲ್ಲಿ ತನಿಖೆ ನಡೆಸುತ್ತಿದ್ದಾರೆ’ ಎಂದು ಆಕ್ಷೇಪಿಸಿ 2021ರಲ್ಲಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಹೈಕೋರ್ಟ್ ಈ ಹಿಂದೆ ನೀಡಿದ್ದ ನಿರ್ದೇಶನದ ಅನುಸಾರ ಮಂಗಳೂರು ನಗರ ಪೊಲೀಸ್ ಆಯುಕ್ತ ಕುಲದೀಪ್ ಜೈನ್ ಹಾಗೂ ಪ್ರಕರಣದ ತನಿಖಾಧಿಕಾರಿ ಬುಧವಾರ ವಿಚಾರಣೆಗೆ ಖುದ್ದು ಹಾಜರಾಗಿದ್ದರು.
















ಇನ್ನಷ್ಟು ಸುದ್ದಿಗಳು
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
SჄS ಬೆಳ್ತಂಗಡಿ ಝೋನ್: ಸಾಂತ್ವನ ಫಂಡ್ ಹಸ್ತಾಂತರ
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳಿಗೆ ಮರು ಅರ್ಜಿ ಕಡ್ಡಾಯ- ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಮುಂದಿನ 24 ಗಂಟೆಗಳಲ್ಲಿ ಯು.ಎಸ್-ಇರಾನ್ ಶಾಂತಿ ಒಪ್ಪಂದ ಅಂತಿಮ: ಪಾಕ್ ಪ್ರಧಾನಿ ಶಹಬಾಝ್ ಷರೀಫ್
ಮೂವರು ಭಾರತೀಯ ನಾವಿಕರ ಸಾವು: ಯು.ಎಸ್ ವಿರುದ್ಧ ವಿದೇಶಾಂಗ ಸಚಿವ ಜೈಶಂಕರ್ ಆಕ್ರೋಶ
ಜಿದ್ದಾದಲ್ಲಿ ಅಕ್ರಮ ಸಿಹಿತಿಂಡಿ ತಯಾರಿಕಾ ಘಟಕಕ್ಕೆ ಬೀಗ; 20 ಟನ್ ಕೊಳೆತ ಆಹಾರ ಪದಾರ್ಥಗಳ ನಾಶ
‘ಇಸ್ಲಾಂ ಸ್ವೀಕರಿಸಿದ್ದು ನನ್ನ ಸ್ವಂತ ಇಚ್ಛೆಯಿಂದ’ ; ಲವ್ ಜಿಹಾದ್ ಆರೋಪವನ್ನು ತಳ್ಳಿಹಾಕಿದ ಆಯುಷ್ ಮಲಿಕ್ (ಮುಹಮ್ಮದ್ ಅಲಿ)