ಬೆಂಗಳೂರು:ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರಕಾರ ಸಂಪುಟ ಸಭೆಯಲ್ಲಿ ಮತಾಂತರ ನಿಷೇಧ ಕಾಯ್ದೆ ತಿದ್ದುಪಡಿ, ಪಠ್ಯಪುಸ್ತಕಗಳ ಪರಿಷ್ಕರಣೆ ಸೇರಿ ಮಹತ್ವದ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.
ಬಿಜೆಪಿ ಸರ್ಕಾರ ಜಾರಿಗೆ ತಂದ ಮತಾಂತರ ವಿರೋಧಿ ಕಾನೂನನ್ನು ಬದಲಾಯಿಸಲು ರಾಜ್ಯ ಸಚಿವ ಸಂಪುಟ ನಿರ್ಧರಿಸಿದೆ. ಪಠ್ಯ ಪರಿಷ್ಕರಣೆಯ ಅಂತಿಮ ವರದಿ ಸಿದ್ಧವಾಗಿದ್ದು, ಆರ್ಎಸ್ಎಸ್ ಸಂಸ್ಥಾಪಕ ಕೆ.ಬಿ.ಹೆಡ್ಗೆವಾರ್ ಮತ್ತು ಇತರರ ಶಾಲಾ ಪಠ್ಯಪುಸ್ತಕ ಪಾಠಗಳನ್ನ ತೆಗೆದುಹಾಕಲು ಕ್ಯಾಬಿನೆಟ್ ನಿರ್ಧರಿಸಿದೆ.
ಇನ್ನು ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಶಾಲೆಗಳು ಮತ್ತು ಕಾಲೇಜುಗಳಲ್ಲಿ ಸಂವಿಧಾನದ ಪೀಠಿಕೆಯನ್ನು ಓದುವುದನ್ನು ಕಡ್ಡಾಯಗೊಳಿಸಿ ಸರ್ಕಾರ ನಿರ್ಧರಿಸಿದೆ.
ಜುಲೈ ಅಧಿವೇಶನದಲ್ಲಿ ತಿದ್ದುಪಡಿ ಮಸೂದೆ ಮಂಡನೆ ಆಗಲಿದೆ. ಸಚಿವ ಸಂಪುಟ ಮುಗಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಎಚ್ಕೆ ಪಾಟೀಲ್, ಸಭೆಯಲ್ಲಿ ಕೈಗೊಳ್ಳಲಾದ ಪ್ರಮುಖ ತೀರ್ಮಾನಗಳ ಬಗ್ಗೆ ಮಾಹಿತಿ ನೀಡಿದ್ದಾರೆ.
ಈ ಮೊದಲು ಸಿದ್ದರಾಮಯ್ಯ ಸರಕಾರ ಜಾರಿಗೆ ಬಂದಾಗ ಬಿಜೆಪಿ ಅವಧಿಯಲ್ಲಿ ತೆಗೆದುಕೊಂಡ ಕೆಲ ಕಾಯ್ದೆ ರದ್ದು ಮಾಡುವುದಾಗಿ ಹೇಳಿತ್ತು.ಅದರಂತೆ ಸರಕಾರ ಹೆಜ್ಜೆ ಇಡಲು ಮುಂದಾಗಿದೆ.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ