ಎಸ್ವೈಸ್ ಕೊಡಗು ಜಿಲ್ಲಾ ಸಮಿತಿ ವತಿಯಿಂದ ಇಂದು (17-06-2022) ಮಡಿಕೇರಿ ಸಮೀಪದ ಮೇಕೇರಿಯಲ್ಲಿ ಜಿಲ್ಲಾ ಮತ್ತು ಝೋನ್ ಮಟ್ಟದ ನಾಯಕರಿಗೆ ತರಬೇತಿ ಶಿಬಿರ ನಡೆಸಲಾಯಿತು.
ಬೆಳಿಗ್ಗೆ 10:30 ಕ್ಕೆ ದರ್ಗಾ ಝಿಯಾರತ್ನೊಂದಿಗೆ ಪ್ರಾರಂಭವಾದ ಕಾರ್ಯಕ್ರಮಕ್ಕೆ ಜಿಲ್ಲಾಧ್ಯಕ್ಷರದ ಅಬ್ದುಲ್ ಹಮೀದ್ ಮುಸ್ಲಿಯಾರ್,ಕೊಳಕೇರಿ ರವರು ಅಧ್ಯಕ್ಷತೆಯನ್ನು ವಹಿಸಿದ್ದರು.ಸಂಘಟನಾ ಕಾರ್ಯದರ್ಶಿ ಯಾಖೂಬ್ ಮಾಸ್ಟರ್ ಉದ್ಘಾಟನೆ ನಿರ್ವಹಿಸಿ ಮಾತನಾಡಿದರು.


ಕೂರ್ಗ್ ಜಂಇಯ್ಯತುಲ್ ಉಲಾಮಾದ ಪ್ರ.ಕಾರ್ಯದರ್ಶಿ ಅಶ್ರಫ್ ಅಹ್ಸನಿ,ಅನ್ವಾರಲ್ ಹುದಾರವರು ಮೊದಲ ಹಂತದ ತರಗತಿ ನಡೆಸಿ ಎಸ್ವೈಎಸ್ ಹಾಗೂ ಅದರ ನಾಯಕರ ಇತಿಹಾಸವನ್ನು ಮೆಲುಕು ಹಾಕುತ್ತಾ ನಾಯಕತ್ವ ಹೇಗಿರಬೇಕು ಎಂಬುದನ್ನು ಉದಾಹರಣೆ ಸಹಿತ ವಿವರಣೆ ನೀಡಿದರು.
ಎರಡನೇ ಹಂತದ ತರಗತಿಯಲ್ಲಿ ರಾಜ್ಯ ಸಮಿತಿಯ ಸಂಘಟನಾ ಕಾರ್ಯದರ್ಶಿ ಕೆ.ಎಂ ಅಬೂಬಕ್ಕರ್ ಸಿದ್ದೀಕ್ ಮೊಂಟುಗೋಳಿಯವರು ತರಬೇತಿ ನೀಡಿ ನಾಯಕತ್ವ ಮತ್ತು ವ್ಯಕ್ತಿತ್ವ ವಿಕಸನದ ಕುರಿತು ಗಮನಾರ್ಹ ತರಗತಿ ನಡೆಸಿದರು.
ಪ್ರಧಾನ ಕಾರ್ಯದರ್ಶಿ ಅಹ್ಮದ್ ಮದನಿ ಸ್ವಾಗತಿಸಿ ಕಾರ್ಯಕ್ರಮದ ಕೊನೆಯಲ್ಲಿ ಕೃತಜ್ಞತೆ ಸಲ್ಲಿಸಿದರು.
















ಇನ್ನಷ್ಟು ಸುದ್ದಿಗಳು
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ
ಮುಂಬೈಯನ್ನು ನಡುಗಿಸಿದ ಘಟನೆ: ಬಿರಿಯಾನಿ ಮತ್ತು ಕಲ್ಲಂಗಡಿ ತಿಂದ ಕುಟುಂಬ ಬೆಳಗಾಗುವಷ್ಟರಲ್ಲಿ ಅಂತ್ಯ