ಬೆಂಗಳೂರು: ಮತೀಯ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಬಶೀರ್ ಕಾವೂರು ಹಾಗೂ ಗೋಲಿಬಾರ್ ಗೆ ಬಲಿಯಾದ ಜಲೀಲ್ ಮತ್ತು ನೌಶೀನ್ ಕುಟುಂಬಸ್ಥರಿಗೆ ಪರಿಹಾರ ನೀಡುವಂತೆ ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟ ರಾಜ್ಯ ಸರ್ಕಾರಕ್ಕೆ ಪ್ರಸ್ತಾಪಿಸಿದೆ.
ಸುರತ್ಕಲ್ ಕೃಷ್ಣಾಪುರದಲ್ಲಿ ನಡೆದ ದೀಪಕ್ ರಾವ್ ಎಂಬ ಯುವಕನ ಹತ್ಯೆಗೆ ಪ್ರತೀಕಾರವಾಗಿ ಅದೇ ದಿನ ರಾತ್ರಿ ಕಾವೂರು ಎಂಬಲ್ಲಿ ರಾತ್ರಿ ಫಾಸ್ಟ್ ಫುಡ್ ರೆಸ್ಟೋರೆಂಟ್ ನಿಂದ ಮನೆಗೆ ಹಿಂತಿರುಗುತ್ತಿದ್ದ ಬಶೀರ್ ಕಾವೂರು ರವರನ್ನು ದುಷ್ಕರ್ಮಿಗಳು ಮಾರಕ ಆಯುಧಗಳಿಂದ ಕೊಚ್ಚಿ ಹತ್ಯೆಗೈದಿದ್ದರು.
ಈ ಹತ್ಯೆ ಮತೀಯ ವಿದ್ವೇಶದಿಂದ ನಡೆಸಿದ ಹತ್ಯೆಯಾಗಿದೆ. ಹತ್ಯಾ ನಂತರ ಸರಕಾರ ಸಂತ್ರಸ್ತ ಕುಟುಂಬಸ್ತರಿಗೆ ಪರಿಹಾರ ವಿತರಣೆ ಮಾಡಿರಲಿಲ್ಲ.
ಇದೀಗ ಸರಕಾರ, ಜಿಲ್ಲೆಯ ವಿವಿಧ ಮತೀಯ ವಿದ್ವೇಶಃ ಪ್ರಕರಣದಲ್ಲಿ ಹತ್ಯೆಯಾದ ವ್ಯಕ್ತಿಗಳ ಕುಟುಂಬಕ್ಕೆ ಪರಿಹಾರ ವಿತರಣೆ ಮಾಡಿದೆ. ಮೃತ ಬಶೀರ್ ಕಾವೂರು ರವರ ಕುಟುಂಬವೂ ಪರಿಹಾರ ಪಡೆಯಲು ಅರ್ಹರಾಗಿದ್ದು ಸರಕಾರ ಬಶೀರ್ ಕುಟುಂಬಸ್ಥರಿಗೆ ಕೂಡ ಪರಿಹಾರ ನೀಡಬೇಕೆಂದು ಮುಸ್ಲಿಮ್ ಒಕ್ಕೂಟ ಸರ್ಕಾರಕ್ಕೆ ಮನವಿ ಮಾಡಿದೆ.
2019 ರಲ್ಲಿ ಪೊಲೀಸರು ಗೋಲಿಬಾರ್ ನಡೆಸಿದ ಪರಿಣಾಮವಾಗಿ ಮೃತಪಟ್ಟ ಜಲೀಲ್ ಮತ್ತು ನೌಷೀನ್ ಕುಟುಂಬಸ್ಥರಿಗೂ ಪರಿಹಾರ ನೀಡಬೇಕೆಂದು ಸರಕಾರಕ್ಕೆ ಪ್ರಸ್ತಾಪಿಸಲಾಗಿದೆ.
ಮತೀಯ ದುಷ್ಕರ್ಮಿಗಳಿಂದ ಹತ್ಯೆಗೊಳಗಾದವರ ಕುಟುಂಬಕ್ಕೆ ಬೆಂಗಳೂರಿನಲ್ಲಿ ಪರಿಹಾರ ವಿತರಣೆ ಸಂಧರ್ಬದಲ್ಲಿ ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟದ ಅಧ್ಯಕ್ಷರಾದ ಕೆ.ಅಶ್ರಫ್ ರವರು ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯರವರಲ್ಲಿ ಬಶೀರ್ ಕಾವೂರು ರವರ ಕುಟುಂಬಸ್ಥರಿಗೆ ಮತ್ತು ಗೋಲಿಬಾರ್ ಸಂತ್ರಸ್ತ ಕುಟುಂಬಗಳಿಗೆ ಪರಿಹಾರ ನೀಡುವಿಕೆಯ ವಿಷಯ ಪ್ರಸ್ತಾವನೆ ಮಾಡಿರುವುದಾಗಿ ಮುಸ್ಲಿಮ್ ಒಕ್ಕೂಟದ ಅಧ್ಯಕ್ಷರಾದ ಕೆ.ಅಶ್ರಫ್ ತಿಳಿಸಿದ್ದಾರೆ.
ನಿಯೋಗದಲ್ಲಿ ಅಬ್ದುಲ್ ಜಲೀಲ್ ಅದ್ದು ಕೃಷ್ಣಾಪುರ, ಅಶ್ರಫ್ ಬದ್ರಿಯಾ ಮತ್ತು ಷರೀಫ್, ಫಾರೂಕ್ ಮತ್ತಿತರರು ಉಪಸ್ಥಿತರಿದ್ದರು.
.
















ಇನ್ನಷ್ಟು ಸುದ್ದಿಗಳು
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
SჄS ಬೆಳ್ತಂಗಡಿ ಝೋನ್: ಸಾಂತ್ವನ ಫಂಡ್ ಹಸ್ತಾಂತರ
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳಿಗೆ ಮರು ಅರ್ಜಿ ಕಡ್ಡಾಯ- ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಮುಂದಿನ 24 ಗಂಟೆಗಳಲ್ಲಿ ಯು.ಎಸ್-ಇರಾನ್ ಶಾಂತಿ ಒಪ್ಪಂದ ಅಂತಿಮ: ಪಾಕ್ ಪ್ರಧಾನಿ ಶಹಬಾಝ್ ಷರೀಫ್
ಮೂವರು ಭಾರತೀಯ ನಾವಿಕರ ಸಾವು: ಯು.ಎಸ್ ವಿರುದ್ಧ ವಿದೇಶಾಂಗ ಸಚಿವ ಜೈಶಂಕರ್ ಆಕ್ರೋಶ
ಜಿದ್ದಾದಲ್ಲಿ ಅಕ್ರಮ ಸಿಹಿತಿಂಡಿ ತಯಾರಿಕಾ ಘಟಕಕ್ಕೆ ಬೀಗ; 20 ಟನ್ ಕೊಳೆತ ಆಹಾರ ಪದಾರ್ಥಗಳ ನಾಶ
‘ಇಸ್ಲಾಂ ಸ್ವೀಕರಿಸಿದ್ದು ನನ್ನ ಸ್ವಂತ ಇಚ್ಛೆಯಿಂದ’ ; ಲವ್ ಜಿಹಾದ್ ಆರೋಪವನ್ನು ತಳ್ಳಿಹಾಕಿದ ಆಯುಷ್ ಮಲಿಕ್ (ಮುಹಮ್ಮದ್ ಅಲಿ)