ಬೆಂಗಳೂರು: ಮತೀಯ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಬಶೀರ್ ಕಾವೂರು ಹಾಗೂ ಗೋಲಿಬಾರ್ ಗೆ ಬಲಿಯಾದ ಜಲೀಲ್ ಮತ್ತು ನೌಶೀನ್ ಕುಟುಂಬಸ್ಥರಿಗೆ ಪರಿಹಾರ ನೀಡುವಂತೆ ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟ ರಾಜ್ಯ ಸರ್ಕಾರಕ್ಕೆ ಪ್ರಸ್ತಾಪಿಸಿದೆ.
ಸುರತ್ಕಲ್ ಕೃಷ್ಣಾಪುರದಲ್ಲಿ ನಡೆದ ದೀಪಕ್ ರಾವ್ ಎಂಬ ಯುವಕನ ಹತ್ಯೆಗೆ ಪ್ರತೀಕಾರವಾಗಿ ಅದೇ ದಿನ ರಾತ್ರಿ ಕಾವೂರು ಎಂಬಲ್ಲಿ ರಾತ್ರಿ ಫಾಸ್ಟ್ ಫುಡ್ ರೆಸ್ಟೋರೆಂಟ್ ನಿಂದ ಮನೆಗೆ ಹಿಂತಿರುಗುತ್ತಿದ್ದ ಬಶೀರ್ ಕಾವೂರು ರವರನ್ನು ದುಷ್ಕರ್ಮಿಗಳು ಮಾರಕ ಆಯುಧಗಳಿಂದ ಕೊಚ್ಚಿ ಹತ್ಯೆಗೈದಿದ್ದರು.
ಈ ಹತ್ಯೆ ಮತೀಯ ವಿದ್ವೇಶದಿಂದ ನಡೆಸಿದ ಹತ್ಯೆಯಾಗಿದೆ. ಹತ್ಯಾ ನಂತರ ಸರಕಾರ ಸಂತ್ರಸ್ತ ಕುಟುಂಬಸ್ತರಿಗೆ ಪರಿಹಾರ ವಿತರಣೆ ಮಾಡಿರಲಿಲ್ಲ.
ಇದೀಗ ಸರಕಾರ, ಜಿಲ್ಲೆಯ ವಿವಿಧ ಮತೀಯ ವಿದ್ವೇಶಃ ಪ್ರಕರಣದಲ್ಲಿ ಹತ್ಯೆಯಾದ ವ್ಯಕ್ತಿಗಳ ಕುಟುಂಬಕ್ಕೆ ಪರಿಹಾರ ವಿತರಣೆ ಮಾಡಿದೆ. ಮೃತ ಬಶೀರ್ ಕಾವೂರು ರವರ ಕುಟುಂಬವೂ ಪರಿಹಾರ ಪಡೆಯಲು ಅರ್ಹರಾಗಿದ್ದು ಸರಕಾರ ಬಶೀರ್ ಕುಟುಂಬಸ್ಥರಿಗೆ ಕೂಡ ಪರಿಹಾರ ನೀಡಬೇಕೆಂದು ಮುಸ್ಲಿಮ್ ಒಕ್ಕೂಟ ಸರ್ಕಾರಕ್ಕೆ ಮನವಿ ಮಾಡಿದೆ.
2019 ರಲ್ಲಿ ಪೊಲೀಸರು ಗೋಲಿಬಾರ್ ನಡೆಸಿದ ಪರಿಣಾಮವಾಗಿ ಮೃತಪಟ್ಟ ಜಲೀಲ್ ಮತ್ತು ನೌಷೀನ್ ಕುಟುಂಬಸ್ಥರಿಗೂ ಪರಿಹಾರ ನೀಡಬೇಕೆಂದು ಸರಕಾರಕ್ಕೆ ಪ್ರಸ್ತಾಪಿಸಲಾಗಿದೆ.
ಮತೀಯ ದುಷ್ಕರ್ಮಿಗಳಿಂದ ಹತ್ಯೆಗೊಳಗಾದವರ ಕುಟುಂಬಕ್ಕೆ ಬೆಂಗಳೂರಿನಲ್ಲಿ ಪರಿಹಾರ ವಿತರಣೆ ಸಂಧರ್ಬದಲ್ಲಿ ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟದ ಅಧ್ಯಕ್ಷರಾದ ಕೆ.ಅಶ್ರಫ್ ರವರು ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯರವರಲ್ಲಿ ಬಶೀರ್ ಕಾವೂರು ರವರ ಕುಟುಂಬಸ್ಥರಿಗೆ ಮತ್ತು ಗೋಲಿಬಾರ್ ಸಂತ್ರಸ್ತ ಕುಟುಂಬಗಳಿಗೆ ಪರಿಹಾರ ನೀಡುವಿಕೆಯ ವಿಷಯ ಪ್ರಸ್ತಾವನೆ ಮಾಡಿರುವುದಾಗಿ ಮುಸ್ಲಿಮ್ ಒಕ್ಕೂಟದ ಅಧ್ಯಕ್ಷರಾದ ಕೆ.ಅಶ್ರಫ್ ತಿಳಿಸಿದ್ದಾರೆ.
ನಿಯೋಗದಲ್ಲಿ ಅಬ್ದುಲ್ ಜಲೀಲ್ ಅದ್ದು ಕೃಷ್ಣಾಪುರ, ಅಶ್ರಫ್ ಬದ್ರಿಯಾ ಮತ್ತು ಷರೀಫ್, ಫಾರೂಕ್ ಮತ್ತಿತರರು ಉಪಸ್ಥಿತರಿದ್ದರು.
.
















ಇನ್ನಷ್ಟು ಸುದ್ದಿಗಳು
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ