2023 ಅಂತ್ಯಕ್ಕೆ ಕಾಂಗ್ರೆಸ್ ಸರರ್ಕಾರ ಪತನವಾಗಲಿದೆ ಎಂಬ ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಅವರ ಹೇಳಿಕೆಗೆ ಹೇಳಿಕೆ ಝೈನ್ ಆತೂರು ತಿರುಗೇಟು ನೀಡಿದ್ದಾರೆ.
ನಳಿನ್ ಕುಮಾರ್ ಕಟೀಲ್ ಕಾಂಗ್ರೆಸ್ ಸರರ್ಕಾರ ಪತನವಾಗುವ ಕನಸು ಕಾಣುವುದು ಬಿಟ್ಟು ಮುಂದಿನ ಲೋಕಸಭಾ ಚುನಾವಣೆಯಲ್ಲಿ ತನ್ನ ಸ್ಥಾನವನ್ನು ಮೊದಲು ಖಚಿತಮಾಡಿಕೊಳ್ಳಲಿ ಎಂದು ಅವರು ಹೇಳಿದ್ದಾರೆ.
ನಳಿನ್ ಕುಮಾರ್ ಕಟೀಲ್ ಕಾಂಗ್ರೆಸ್ ಸರರ್ಕಾರವನ್ನು ಟೀಕಿಸುವ ಬದಲು ತಮ್ಮ ಪಕ್ಷದಲ್ಲಿ ನಡೆಯುತ್ತಿರುವ ಬದಲಾವಣೆ ಬಗ್ಗೆ ಚರ್ಚೆ ನಡೆಸಿ ಎಂದು ವಿದ್ಯಾರ್ಥಿ ಕಾಂಗ್ರೆಸ್ ಕರ್ನಾಟಕ ರಾಜ್ಯ ಸಂಯೋಜಕರಾದ ಝೈನ್ ಆತೂರು ಅವರು ಹೇಳಿದ್ದಾರೆ.