ಕಲ್ಲಡ್ಕ: ನಾಡಿನ ಪ್ರತಿಷ್ಠಿತ ಸಮನ್ವಯ ಶಿಕ್ಷಣ ಕೇಂದ್ರ ದಾರುಲ್ ಅಶ್ಅರಿಯ ಸುರಿಬೈಲ್ ತನ್ನ 25 ವರ್ಷಗಳನ್ನು ಪೂರೈಸಿ, 2023 ನವೆಂಬರ್ 1,2,3 ದಿನಾಂಕಗಳಲ್ಲಿ ಬೆಳ್ಳಿ ಹಬ್ಬವನ್ನು ಆಚರಿಸುವ ಸಂಭ್ರಮದಲ್ಲಿದೆ.
ಸಂಸ್ಥೆಯು ಬೆಳ್ಳಿ ಹಬ್ಬ ಅಂಗವಾಗಿ 25 ಅಂಶ ಸಮಾಜಮುಖಿ ಕಾರ್ಯಕ್ರಮಗಳನ್ನು ರೂಪಿಸಿದ್ದು, ಅದರ ಮೊದಲನೆಯ ಕಾರ್ಯಕ್ರಮವಾಗಿ ಬಂಟ್ವಾಳ ತಾಲೂಕು ಸರಕಾರಿ ಆಸ್ಪತ್ರೆಯ ನೂರಾರು ರೋಗಿಗಳಿಗೆ, ಸಹಾಯಕರಿಗೆ, ವೈದ್ಯಾಧಿಕಾರಿಗಳಿಗೆ ಪವಿತ್ರ ಬಕ್ರೀದ್ ಹಬ್ಬದ ದಿನ ಆಹಾರ ವಿತರಿಸುವ ಮೂಲಕ ಯೋಜನೆಗೆ ಚಾಲನೆ ನೀಡಲಾಯಿತು.
ಆಹಾರ ವಿತರಣಾ ಕಾರ್ಯಕ್ರಮದಲ್ಲಿ ಸಂಸ್ಥೆಯ ಜನರಲ್ ಮ್ಯಾನೇಜರ್ ಮಹಮ್ಮದ್ ಅಲಿ ಸಖಾಫಿ ಉಸ್ತಾದರು ಮಾತನಾಡಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ವೇಳೆ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ.ಸ್ಟಾಲಿನ್, SSF ದಕ್ಷಿಣ ಕನ್ನಡ ಜಿಲ್ಲಾ ಮಾಜಿ ಅಧ್ಯಕ್ಷ ಇಬ್ರಾಹಿಂ ಸಖಾಫಿ ಸೆರ್ಕಳ ಹಾಗೂ ಅಕ್ಬರ್ ಅಲಿ ಮದನಿ ಆಲಂಪಾಡಿ, ಕರೀಂ ಕದ್ಕಾರ್, ಝಕರಿಯ ನಾರ್ಶ, ಹಂಝ ಮಂಚಿ, ಇಸ್ಮಾಯಿಲ್ ಬಂಟ್ವಾಳ, ರಝ್ಝಾಕ್ ಹನೀಫಿ, ರವೂಫ್ ಅಶ್-ಅರಿ, ಮುಸ್ತಫ ಅಶ್-ಅರಿ, ಝಾಹಿರ್ ಪಾತೂರ್ ಉಪಸ್ಥಿತರಿದ್ದರು.
ಸಿದ್ದೀಕ್ ಅಶ್-ಅರಿ, ಕುಕ್ಕಾಜೆ ಸಂಸ್ಥೆಯ 25 ಅಂಶ ಯೋಜನೆಗಳನ್ನು ಯಶಸ್ವಿಯಾಗಿ ನಡೆಸಲು ಸಹಕಾರ ಕೋರಿದರು.
















ಇನ್ನಷ್ಟು ಸುದ್ದಿಗಳು
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ