ಮಂಗಳೂರು: ರಾಜ್ಯದಲ್ಲಿ ಬದಲಾದ ರಾಜಕೀಯ ಬೆಳವಣಿಗೆಯ ಹಿನ್ನೆಲೆಯಲ್ಲಿ ಮಂಗಳೂರಿನ ‘ ಸಂತರು ‘ ಮತ್ತು ಧಾರ್ಮಿಕ ಮುಖಂಡರು ಇತ್ತೀಚೆಗೆ ಸಭೆ ಸೇರಿ, ಕರ್ನಾಟಕದಲ್ಲಿ ಕಾಂಗ್ರೆಸ್ ಸರಕಾರ ವಿರುದ್ಧ ಗೋಹತ್ಯೆ ಮತ್ತು ಮತಾಂತರ ಕಾಯ್ದೆಯ ವಿಷಯ ಪ್ರಸ್ತಾಪಿಸಿ ರಾಜ್ಯಪಾಲರು ಮತ್ತು ಪ್ರಧಾನಿ ಮೋದಿ ಬಳಿ ನಿಯೋಗ ತೆರಳುವುದಾಗಿ ಹೇಳಿಕೆ ನೀಡಿದ್ದಾರೆ.
ಕಾಂಗ್ರೆಸ್ ಸರಕಾರ ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆಯನ್ನು ಹಿಂಪಡೆಯಬಾರದು, ಮತಾಂತರ ನಿಷೇಧ ಕಾಯ್ದೆ ಪುನರ್ ಸ್ಥಾಪಿಸಬೇಕು ತಪ್ಪಿದಲ್ಲಿ ಹೋರಾಟ ಮಾಡುತ್ತೇವೆ ಎಂಬಿತ್ಯಾದಿಯಾಗಿ ವಿಶ್ವ ಹಿಂದೂ ಪರಿಷತ್ ಅಣತಿಯಂತೆ ಕಾರ್ಯ ನಿರ್ವಹಿಸುತ್ತಿದ್ದಾರೆ.
ಮಂಗಳೂರಿನಲ್ಲಿ ಸಭೆ ಸೇರಿದ ಸಂತರು ಕೇಂದ್ರ ಸರಕಾರದ ಮುಂದೆ ಭಾರತದಿಂದ ವಿದೇಶಕ್ಕೆ ರಫ್ತು ಗೊಳ್ಳುವ ಗೋಮಾಂಸ ವ್ಯವಹಾರವನ್ನು ಸ್ಥಗಿತ ಗೊಳಿಸುವ ಬೇಡಿಕೆಯನ್ನು ಮಾಡಬೇಕಿದೆ. ಒಂದು ವೇಳೆ ಮಂಗಳೂರಿನ ಸಂತರು ಗೋಮಾಂಸ ರಫ್ತು ನಿಷೇಧ ಬೇಡಿಕೆ ಮುಂದಿಡುವುದಾದರೆ ಮುಸ್ಲಿಮರು ನಿಯೋಗದಲ್ಲಿ ಭಾಗಿಯಾಗಲು ಸಿದ್ಧರಿದ್ದಾರೆ. ಮಂಗಳೂರಿನ ಸಂತರು ಈ ಬೇಡಿಕೆ ಮುಂದಿಡಲಿ ಎಂದು ಕೆ.ಅಶ್ರಫ್(ಮಾಜಿ ಮೇಯರ್)
ಅಧ್ಯಕ್ಷರು.ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
.
















ಇನ್ನಷ್ಟು ಸುದ್ದಿಗಳು
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ
ಮುಂಬೈಯನ್ನು ನಡುಗಿಸಿದ ಘಟನೆ: ಬಿರಿಯಾನಿ ಮತ್ತು ಕಲ್ಲಂಗಡಿ ತಿಂದ ಕುಟುಂಬ ಬೆಳಗಾಗುವಷ್ಟರಲ್ಲಿ ಅಂತ್ಯ