ಮಂಗಳೂರು: ರಾಜ್ಯದಲ್ಲಿ ಬದಲಾದ ರಾಜಕೀಯ ಬೆಳವಣಿಗೆಯ ಹಿನ್ನೆಲೆಯಲ್ಲಿ ಮಂಗಳೂರಿನ ‘ ಸಂತರು ‘ ಮತ್ತು ಧಾರ್ಮಿಕ ಮುಖಂಡರು ಇತ್ತೀಚೆಗೆ ಸಭೆ ಸೇರಿ, ಕರ್ನಾಟಕದಲ್ಲಿ ಕಾಂಗ್ರೆಸ್ ಸರಕಾರ ವಿರುದ್ಧ ಗೋಹತ್ಯೆ ಮತ್ತು ಮತಾಂತರ ಕಾಯ್ದೆಯ ವಿಷಯ ಪ್ರಸ್ತಾಪಿಸಿ ರಾಜ್ಯಪಾಲರು ಮತ್ತು ಪ್ರಧಾನಿ ಮೋದಿ ಬಳಿ ನಿಯೋಗ ತೆರಳುವುದಾಗಿ ಹೇಳಿಕೆ ನೀಡಿದ್ದಾರೆ.
ಕಾಂಗ್ರೆಸ್ ಸರಕಾರ ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆಯನ್ನು ಹಿಂಪಡೆಯಬಾರದು, ಮತಾಂತರ ನಿಷೇಧ ಕಾಯ್ದೆ ಪುನರ್ ಸ್ಥಾಪಿಸಬೇಕು ತಪ್ಪಿದಲ್ಲಿ ಹೋರಾಟ ಮಾಡುತ್ತೇವೆ ಎಂಬಿತ್ಯಾದಿಯಾಗಿ ವಿಶ್ವ ಹಿಂದೂ ಪರಿಷತ್ ಅಣತಿಯಂತೆ ಕಾರ್ಯ ನಿರ್ವಹಿಸುತ್ತಿದ್ದಾರೆ.
ಮಂಗಳೂರಿನಲ್ಲಿ ಸಭೆ ಸೇರಿದ ಸಂತರು ಕೇಂದ್ರ ಸರಕಾರದ ಮುಂದೆ ಭಾರತದಿಂದ ವಿದೇಶಕ್ಕೆ ರಫ್ತು ಗೊಳ್ಳುವ ಗೋಮಾಂಸ ವ್ಯವಹಾರವನ್ನು ಸ್ಥಗಿತ ಗೊಳಿಸುವ ಬೇಡಿಕೆಯನ್ನು ಮಾಡಬೇಕಿದೆ. ಒಂದು ವೇಳೆ ಮಂಗಳೂರಿನ ಸಂತರು ಗೋಮಾಂಸ ರಫ್ತು ನಿಷೇಧ ಬೇಡಿಕೆ ಮುಂದಿಡುವುದಾದರೆ ಮುಸ್ಲಿಮರು ನಿಯೋಗದಲ್ಲಿ ಭಾಗಿಯಾಗಲು ಸಿದ್ಧರಿದ್ದಾರೆ. ಮಂಗಳೂರಿನ ಸಂತರು ಈ ಬೇಡಿಕೆ ಮುಂದಿಡಲಿ ಎಂದು ಕೆ.ಅಶ್ರಫ್(ಮಾಜಿ ಮೇಯರ್)
ಅಧ್ಯಕ್ಷರು.ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
.
















ಇನ್ನಷ್ಟು ಸುದ್ದಿಗಳು
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್