ಮಂಗಳೂರು: ಪ್ರಚೋದನಕಾರಿ ಭಾಷಣದ ಮೂಲಕ ಸಮಾಜದಲ್ಲಿ ಶಾಂತಿ ಕದಡುವ, ಮುಸ್ಲಿಂ ಸಮುದಾಯದ ಮೇಲೆ ನಿರಂತರವಾಗಿ ದ್ವೇಷ ಹುಟ್ಟುವಂತಹ ವಾತಾವರಣ ಸೃಷ್ಟಿ ಮಾಡುವ ಬಜರಂಗದಳದ ರಘು ಸಕಲೇಶಪುರ ಅಂಥವರು ನಾಗರಿಕ ವಾಸಕ್ಕೆ ಯೋಗ್ಯರಲ್ಲ. ಅಂಥವರನ್ನು ಗಡೀಪಾರು ಮಾಡಬೇಕೂ ಎಂದು ದ. ಕ. ಜಿಲ್ಲಾ ಮುಸ್ಲಿಮ್ ಒಕ್ಕೂಟದ ಅಧ್ಯಕ್ಷರಾದ ಕೆ.ಅಶ್ರಫ್ ರವರು ಆಗ್ರಹಿಸಿದ್ದಾರೆ.
ರಘು, ಇತ್ತೀಚೆಗೆ ಸಕಲೇಶಪುರ ತಾಲೂಕಿನಲ್ಲಿ ನಡೆದ ಸಂಘಟನೆಯ ಸಭೆಯೊಂದರಲ್ಲಿ ಮುಸ್ಲಿಮರ ವಿರುದ್ಧ ನಿಂದನಾತ್ಮಕ , ಅವಹೇಳನಕಾರಿಯಾಗಿ ಹಾಗೂ ಮುಸ್ಲಿಮರು ತರಕಾರಿ, ಮೀನು ಮಾರಾಟಕ್ಕೆ ಹಿಂದೂಗಳ ಮನೆಗೆ ಬಂದರೆ ಗುಂಡಿಕ್ಕಿ ಸಾಯಿಸಿ ಎಂಬಿತ್ಯಾದಿಯಾಗಿ ಹೇಳಿಕೆ ನೀಡಿ ಮತೀಯ ವಿದ್ವೇಶ ಮತ್ತು ಕೋಮು ಗಲಭೆಗೆ ಪ್ರಚೋದನೆ ನೀಡುವಂತಹ ಭಾಷಣ ಮಾಡಿರುತ್ತಾರೆ.
ರಘುವಿನಂತಹ ದುಷ್ಕರ್ಮಿಗಳು ಈ ಸಮಾಜದಲ್ಲಿ ಇರುವವರೆಗೂ ಸಮಾಜದ ಸ್ವಾಸ್ಥ್ಯಕ್ಕೆ ಧಕ್ಕೆ ಸೃಷ್ಟಿಯಾಗುತ್ತಲೇ ಇರುತ್ತದೆ.
ಸರಕಾರ, ಜಿಲ್ಲಾಡಳಿತ ಮತ್ತು ಪೊಲೀಸು ಇಲಾಖೆ ಪ್ರಕರಣ ದಾಖಲಿಸಿ ರಘುನಂತವರನ್ನು ಗಡೀಪಾರು ಗೊಳಿಸಬೇಕು. ರಘು ನಂತವರು ಈ ನಾಗರಿಕ ಸಮಾಜದಲ್ಲಿ ವಾಸ ಇರಲು ಯೋಗ್ಯರಲ್ಲ ಮತ್ತು ಅರ್ಹರಲ್ಲ ಎಂದು ಕೆ.ಅಶ್ರಫ್(ಮಾಜಿ ಮೇಯರ್)
ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್