ಮಂಗಳೂರು: ಪ್ರಚೋದನಕಾರಿ ಭಾಷಣದ ಮೂಲಕ ಸಮಾಜದಲ್ಲಿ ಶಾಂತಿ ಕದಡುವ, ಮುಸ್ಲಿಂ ಸಮುದಾಯದ ಮೇಲೆ ನಿರಂತರವಾಗಿ ದ್ವೇಷ ಹುಟ್ಟುವಂತಹ ವಾತಾವರಣ ಸೃಷ್ಟಿ ಮಾಡುವ ಬಜರಂಗದಳದ ರಘು ಸಕಲೇಶಪುರ ಅಂಥವರು ನಾಗರಿಕ ವಾಸಕ್ಕೆ ಯೋಗ್ಯರಲ್ಲ. ಅಂಥವರನ್ನು ಗಡೀಪಾರು ಮಾಡಬೇಕೂ ಎಂದು ದ. ಕ. ಜಿಲ್ಲಾ ಮುಸ್ಲಿಮ್ ಒಕ್ಕೂಟದ ಅಧ್ಯಕ್ಷರಾದ ಕೆ.ಅಶ್ರಫ್ ರವರು ಆಗ್ರಹಿಸಿದ್ದಾರೆ.
ರಘು, ಇತ್ತೀಚೆಗೆ ಸಕಲೇಶಪುರ ತಾಲೂಕಿನಲ್ಲಿ ನಡೆದ ಸಂಘಟನೆಯ ಸಭೆಯೊಂದರಲ್ಲಿ ಮುಸ್ಲಿಮರ ವಿರುದ್ಧ ನಿಂದನಾತ್ಮಕ , ಅವಹೇಳನಕಾರಿಯಾಗಿ ಹಾಗೂ ಮುಸ್ಲಿಮರು ತರಕಾರಿ, ಮೀನು ಮಾರಾಟಕ್ಕೆ ಹಿಂದೂಗಳ ಮನೆಗೆ ಬಂದರೆ ಗುಂಡಿಕ್ಕಿ ಸಾಯಿಸಿ ಎಂಬಿತ್ಯಾದಿಯಾಗಿ ಹೇಳಿಕೆ ನೀಡಿ ಮತೀಯ ವಿದ್ವೇಶ ಮತ್ತು ಕೋಮು ಗಲಭೆಗೆ ಪ್ರಚೋದನೆ ನೀಡುವಂತಹ ಭಾಷಣ ಮಾಡಿರುತ್ತಾರೆ.
ರಘುವಿನಂತಹ ದುಷ್ಕರ್ಮಿಗಳು ಈ ಸಮಾಜದಲ್ಲಿ ಇರುವವರೆಗೂ ಸಮಾಜದ ಸ್ವಾಸ್ಥ್ಯಕ್ಕೆ ಧಕ್ಕೆ ಸೃಷ್ಟಿಯಾಗುತ್ತಲೇ ಇರುತ್ತದೆ.
ಸರಕಾರ, ಜಿಲ್ಲಾಡಳಿತ ಮತ್ತು ಪೊಲೀಸು ಇಲಾಖೆ ಪ್ರಕರಣ ದಾಖಲಿಸಿ ರಘುನಂತವರನ್ನು ಗಡೀಪಾರು ಗೊಳಿಸಬೇಕು. ರಘು ನಂತವರು ಈ ನಾಗರಿಕ ಸಮಾಜದಲ್ಲಿ ವಾಸ ಇರಲು ಯೋಗ್ಯರಲ್ಲ ಮತ್ತು ಅರ್ಹರಲ್ಲ ಎಂದು ಕೆ.ಅಶ್ರಫ್(ಮಾಜಿ ಮೇಯರ್)
ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ