ರಿಯಾದ್: ಹಜ್ ಯಾತ್ರೆ ಮುಗಿಸಿ ಮನೆಗೆ ಮರಳುವ ಯಾತ್ರಾರ್ಥಿಗಳಿಗೆ 20 ಲಕ್ಷ ಖುರ್ಆನ್ ಪ್ರತಿಗಳನ್ನು ವಿತರಿಸಲಾಗುತ್ತಿದೆ.ದೊರೆ ಸಲ್ಮಾನ್ ಅವರ ಆದೇಶದಂತೆ, ಸೌದಿ ಅರೇಬಿಯಾದ ಧಾರ್ಮಿಕ ವ್ಯವಹಾರಗಳ ಇಲಾಖೆಯು ಈ ಖುರ್ಆನ್ ಗಳನ್ನು ಸಿದ್ಧಪಡಿಸಿದೆ. ಇವುಗಳನ್ನು ದೇಶದ ವಿವಿಧ ಗಡಿ ದ್ವಾರಗಳಲ್ಲಿ ಯಾತ್ರಾರ್ಥಿಗಳಿಗೆ ವಿತರಿಸಲಾಗುತ್ತದೆ.
77 ಭಾಷೆಗಳಲ್ಲಿ ಖುರ್ಆನ್ ಅನುವಾದಗಳನ್ನು ಯಾತ್ರಿಕರಿಗೆ ವಿತರಿಸಲಾಗುತ್ತದೆ. ಇದಕ್ಕಾಗಿ ಧಾರ್ಮಿಕ ವ್ಯವಹಾರಗಳ ಇಲಾಖೆ ಕೌಂಟರ್ಗಳ ಸಿದ್ಧತೆಯನ್ನು ಪೂರ್ಣಗೊಳಿಸಿದೆ. ಪ್ರತಿ ವರ್ಷ ಹಜ್ಗೆ ಬರುವ ಎಲ್ಲಾ ವಿದೇಶಿ ಯಾತ್ರಾರ್ಥಿಗಳಿಗೆ ದೊರೆ ಸಲ್ಮಾನ್ನಿಂದ ಉಡುಗೊರೆಯಾಗಿ ಮುಸ್ಹಫ್ ಮತ್ತು ಖುರ್ಆನ್ ಅನುವಾದಗಳನ್ನು ವಿತರಿಸಲಾಗುತ್ತದೆ. ಇವುಗಳನ್ನು ಮದೀನಾದಲ್ಲಿರುವ ಕಿಂಗ್ ಫಹದ್ ಖುರ್ಆನ್ ಪ್ರಿಂಟಿಂಗ್ ಕಾಂಪ್ಲೆಕ್ಸ್ನಲ್ಲಿ ಮುದ್ರಿಸಲಾಗಿದೆ.
ಹಜ್ ಯಾತ್ರೆ ಮುಗಿಸಿದ ಭಾರತೀಯ ಯಾತ್ರಿಕರ ವಾಪಸಾತಿ ಸೋಮವಾರದಿಂದ ಆರಂಭವಾಗಿದೆ. ಜಿದ್ದಾದಿಂದ ದೆಹಲಿ, ಕೋಲ್ಕತ್ತಾ, ಲಕ್ನೋ ಮತ್ತು ಜೈಪುರಕ್ಕೆ ಮೊದಲ ಬ್ಯಾಚ್ ಹೊರಟಿದೆ. ಮೊದಲ ದಿನ ಸುಮಾರು ಎರಡು ಸಾವಿರ ಯಾತ್ರಿಕರು ಹೊರಟಿದ್ದರು.
ಜಿದ್ದಾ ಮೂಲಕ ಆಗಮಿಸಿದ ಹಜ್ ಸಮಿತಿಯ ಅಧೀನದಲ್ಲಿರುವ ಯಾತ್ರಾರ್ಥಿಗಳು ಈಗ ಮದೀನಾ ರೌಳಾ ಸಂದರ್ಶನ ಪೂರ್ಣಗೊಳಿಸಬೇಕಾಗಿದೆ. ಮಂಗಳವಾರದಿಂದ ಮದೀನಾಕ್ಕೆ ತೆರಳಲಿದ್ದಾರೆ. ಎಂಟು ದಿನಗಳ ಕಾಲ ಮದೀನಾದಲ್ಲಿ ತಂಗುವ ಮೂಲಕ ಸಂದರ್ಶನ ಪೂರ್ಣಗೊಳ್ಳಲಿದೆ. ಬಳಿಕ ಮದೀನಾ ವಿಮಾನ ನಿಲ್ದಾಣದ ಮೂಲಕ ತಾಯ್ನಾಡಿಗೆ ಮರಳಲಿದ್ದಾರೆ.
















ಇನ್ನಷ್ಟು ಸುದ್ದಿಗಳು
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಪವಿತ್ರ ಕಅಬಾಗೆ ತೊಡಿಸುವ ಕಿಸ್ವಾದ ಹಿಂದಿರುವ ಅದ್ಭುತ ರಹಸ್ಯಗಳ ಬಗ್ಗೆ ನಿಮಗೆ ಗೊತ್ತೇ?