ಬೆಂಗಳೂರು: ಕರ್ನಾಟಕ ರಾಜ್ಯ ವಖ್ಫ್ ಬೋರ್ಡ್ ಅಧ್ಯಕ್ಷರಾಗಿರುವ ಎನ್.ಕೆ.ಎಂ ಶಾಫಿ ಸಅದಿಯವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಕಳೆದ ಒಂದೂವರೆ ವರ್ಷಗಳ ಹಿಂದೆ ಯೂಸುಫ್ ಬೆಂಗಳೂರು ರವರ ನಿಧನದಿಂದ ತೆರವಾದ ಸ್ಥಾನಕ್ಕೆ ನಡೆದ ವಕ್ಫ್ ಚುನಾವಣೆಯಲ್ಲಿ ಶಾಫಿ ಸಅದಿಯವರು ಆಯ್ಕೆ ಯಾಗಿದ್ದರು. ಇಂಡಿಯನ್ ಗ್ರ್ಯಾಂಡ್ ಮುಫ್ತಿ ಸುಲ್ತಾನುಲ್ ಉಲಮಾರ ಸಾನಿಧ್ಯದಲ್ಲಿ ಒಂದುವರೆ ವರ್ಷದ ಅಧಿಕಾರ ಹಂಚಿಕೆಯ ಸಂಧಾನದೊಂದಿಗೆ ಅಧಿಕಾರ ಸ್ವೀಕರಿಸಿದ್ದ ಉಸ್ತಾದರು ತನ್ನ ಅವಧಿ ಪೂರ್ಣಗೊಳಿಸಿ ರಾಜಿನಾಮೆ ನೀಡಿದ್ದು,ಮುಂದಿನ ಒಂದೂವರೆ ವರ್ಷ ರಾಜ್ಯ ವಕ್ಫ್ ಮಂಡಳಿ ಸದಸ್ಯರಾಗಿ ಮುಂದುವರಿಯಲಿದ್ದಾರೆ.
ಒಂದು ತಿಂಗಳಲ್ಲಿ ಸರ್ಕಾರ ಮಗದೊಮ್ಮೆ ಚುನಾವಣೆ ನಡೆಸಿ, ಒಪ್ಪಂದದಂತೆ ಮುತುವಲ್ಲಿ ವಿಭಾಗದಿಂದ ವಕ್ಫ್ ಸದಸ್ಯರಾಗಿರುವ ಅನ್ವರ್ ಚಿತ್ರದುರ್ಗ ಹಾಗೂ ಬಾರ್ ಕೌನ್ಸಿಲ್ ನಿಂದ ಆಯ್ಕೆಯಾಗಿರುವ ಅಡ್ವೊಕೇಟ್ ರಿಯಾಝ್ ಖಾನ್ ವಕ್ಫ್ ಚುನವಾಣಾ ಅಭ್ಯರ್ಥಿಗಳಾಗುವ ಸಾಧ್ಯತೆ ಇದೆ. ಮುಂದಿನ ಅಧ್ಯಕ್ಷರ ಆಯ್ಕೆ ತನಕ ಶಾಫಿ ಸಅದಿಯವರು ಹಂಗಾಮಿ ಅಧ್ಯಕ್ಷರಾಗಿ ಅಧಿಕಾರದಲ್ಲಿ ಮುಂದುವರೆಯಲಿದ್ದಾರೆ.
ರಾಜ್ಯದ ವಖ್ಫ್ ಬೋರ್ಡ್ ಅಧ್ಯಕ್ಷ ಸ್ಥಾನವನ್ನು ಓರ್ವ ಆಲಿಮ್ ಅಲಂಕರಿಸಿದ ಹೆಗ್ಗಳಿಕೆಯು ಶಾಫಿ ಸಅದಿಯರಿಗೆ ಸಲ್ಲುತ್ತದೆ. ರಾಜ್ಯಾದ್ಯಂತ ವಕ್ಫ್ ಸಂಸ್ಥೆಯನ್ನು ಗುರುತಿಸುವಂತೆ ಮಾಡಿ. ಹಲವು ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದಾರೆ.

















ಇನ್ನಷ್ಟು ಸುದ್ದಿಗಳು
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?