ದುಬೈ:ಅಲ್ ಖಾದಿಸ ಎಜುಕೇಶನಲ್ ಅಕಾಡಮಿ ದುಬೈ ಸಮಿತಿ ವತಿಯಿಂದ ಹುದ್ನಾ -1439 ಕಾರ್ಯಕ್ರಮವು ನಾಳೆ ದುಬೈಯಲ್ಲಿ ನಡೆಯಲಿದೆ.ದಕ್ಷಿಣ ಕನ್ನಡ ಜಿಲ್ಲೆಯ ಕಾವಳ್ಕಟ್ಟೆ ಎoಬಲ್ಲಿ ಬಡವರಿಗೆ ನಿರ್ಗತಿಕರಿಗೆ ಆಶಾ ಕೇಂದ್ರವಾಗಿ ಧಾರ್ಮಿಕ ಲೌಕಿಕ ಶಿಕ್ಷಣ ಸಂಸ್ಥೆಯಾಗಿ ಬೆಳೆಯುತ್ತಿರುವ ಅಲ್ ಖಾದಿಸ ಎಜುಕೇಷನಲ್ ಅಕಾಡಮಿ ಇದರ ದುಬೈ ಸಮಿತಿ ವತಿಯಿಂದ ಹುದ್ನಾ 1439 ಎಂಬ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ದಿನಾಂಕ 11/5/2018 ಶುಕ್ರವಾರ ಮಗ್ರಿಬ್ ನಮಾಝ್ ನಂತರ ದೇರಾ ಅಲ್ ನಖೀಲ್ ನಲ್ಲಿರುವ ಗೋಲ್ಡನ್ ಸ್ಕ್ವೇರ್ ಹೋಟೆಲ್ ಸಭಾಂಗಣದಲ್ಲಿ ದುಬೈ ಸಮಿತಿ ಅಧ್ಯಕ್ಷರಾದ ಅಬ್ದುಲ್ ಬಶೀರ್ ಬೊಳುವಾರ್ ರವರ ಅಧ್ಯಕ್ಷತೆಯಲ್ಲಿನಡಯಲಿದೆ. ಅಪ್ಪಟ ಪ್ರವಾದಿ ಪ್ರೇಮಿ ,ತಾಳ್ಮೆ,ಸಹನೆ,ಸರಳತೆ,ಸಜ್ಜನಿಕೆಯ ಪ್ರತಿ ರೂಪ, ಉನ್ನತ ಸ್ವಭಾವದ ಮೂಲಕ ಜನರನ್ನು ತನ್ನಡೆಗೆ ಸೆಳೆದ, ಅಲ್ ಖಾದಿಸ ವಿದ್ಯಾಸಂಸ್ಥೆಯ ಸ್ಥಾಪಕ ಡಾ.ಮುಹಮ್ಮದ್ ಫಾಝಿಲ್ ರಝ್ವಿ ಕಾವಳಕಟ್ಟೆ ಯವರು ದುವಾಶೀರ್ವಚಗೈಯ್ಯಲಿದ್ದಾರೆ.
ಕಾರ್ಯಕ್ರಮದ ಉದ್ಘಾಟನೆಯನ್ನು ಕಮಾಲ್ ನಾಸರ್ ಲಂಡನ್ ನೆರವೇರಿಸಲಿದ್ದು, ಕರ್ನಾಟಕ ಮುಸ್ಲಿಂ ಜಮಾಅತ್ ಕೌನ್ಸಿಲ್(ಕೆಎಂಜೆಸಿ)ಇದರ ಪ್ರಧಾನ ಕಾರ್ಯದರ್ಶಿ ಬಹುಮಾನ್ಯ ಅಬೂಸುಫ್ಯಾನ್ ಇಬ್ರಾಹಿಮ್ ಮದನಿ ಮತ್ತು ಎಸ್ ವೈ ಎಸ್ ಬಂಟ್ವಾಳ ಝೋನ್ ಅಧ್ಯಕ್ಷರಾದ ಬಹುಮಾನ್ಯ ಹಂಝ ಮದನಿ ಮಿತ್ತೂರ್ ಮುಖ್ಯ ಪ್ರಭಾಷಣ ಗೈಯ್ಯಲಿದ್ದಾರೆ.
ಮಹಿಳೆಯರಿಗಾಗಿ ಪ್ರತ್ಯೇಕ ಸ್ಥಳಾವಕಾಶವನ್ನು ಕಲ್ಪಿಸಲಾಗಿದೆ, ಕಾರ್ಯಕ್ರಮವನ್ನು ಯಶಸ್ವಿ ಗೊಳಿಸಬೇಕೆಂದು ಅಲ್ ಖಾದಿಸ ದುಬೈ ಸಮಿತಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.















ಇನ್ನಷ್ಟು ಸುದ್ದಿಗಳು
ಮಕ್ಕಾದಲ್ಲಿ ಪೊಲೀಸರ ಮಿಂಚಿನ ದಾಳಿ: ನಕಲಿ ದಾಖಲೆ ತಯಾರಿಸುತ್ತಿದ್ದ 18 ಜನರ ತಂಡ ಬಂಧನ
ಸೌದಿ ಅರೇಬಿಯಾ: ವಾಹನಕ್ಕೆ ಆಕಸ್ಮಿಕ ಬೆಂಕಿ – ಯುವಕನಿಗೆ ದಾರುಣ ಅಂತ್ಯ
ಜಿಸಿಸಿ: ಮಾದಕ ಜಾಲದ ವಿರುದ್ಧ ಮತ್ತಷ್ಟು ಕಠಿಣ ನಿಯಮ- ಮರಣದಂಡನೆ ಶಿಕ್ಷೆ
ಮಕ್ಕಾದಲ್ಲಿ ಹಜ್ ನಿಯಮ ಉಲ್ಲಂಘನೆ: ನೂರಾರು ವಿದೇಶಿಯರ ಬಂಧನ
ಯುಎಇ: ವೈಯಕ್ತಿಕ ವಾಟ್ಸಾಪ್ ಚಾಟ್ ಮತ್ತು ಫಾರ್ವರ್ಡ್ಗಳಿಗೂ ಸೈಬರ್ ಕಾನೂನು ಅನ್ವಯ
ಸೌದಿ: ಪಾರ್ಕ್ನಲ್ಲಿ ಆಟವಾಡುತ್ತಿದ್ದಾಗ ವಿದ್ಯುತ್ ಶಾಕ್- ಆರು ವರ್ಷದ ಬಾಲಕ ಮೃತ್ಯು
ಪ್ರಯಾಣಿಕರ ಸಂಕಷ್ಟಕ್ಕೆ ತೆರೆ: ಕುವೈತ್ ವಿಮಾನ ನಿಲ್ದಾಣದ ಕಾರ್ಯಾಚರಣೆ ಪುನಾರಂಭ
ಶುಭ ಸುದ್ದಿ : ಭಾರತ ಸೇರಿದಂತೆ ಪ್ರಮುಖ ಮಾರ್ಗಗಳಲ್ಲಿ ಲಗೇಜ್ ಮಿತಿ ಹೆಚ್ಚಳ
ಆರು ವಿಭಾಗ ಜನರಿಗೆ ಮಕ್ಕಾ ಪ್ರವೇಶಕ್ಕೆ ಅನುಮತಿ- ಅಬ್ಶೀರ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ
ಶುಭ ಸುದ್ದಿ: ಕತಾರ್ನಲ್ಲಿ ವಿಮಾನ ಸೇವೆಗಳು ಯಥಾಸ್ಥಿತಿಗೆ