ಮಂಗಳೂರು:ಧಾರಾಕಾರ ಮಳೆಯಿಂದಾಗಿ ಪ್ರಕೃತಿ ದುರಂತ ಹಾಗೂ ಇತರ ಅನಾಹುತಗಳ ಸಂಕಷ್ಟಕ್ಕೆ ಸಿಲುಕಿರುವವರ ಸಹಾಯಕ್ಕಾಗಿ ಮುಸ್ಲಿಂ ಜಮಾಅತ್ ಮತ್ತು SჄS ಕಿನ್ಯ ಸರ್ಕಲ್ ವ್ಯಾಪ್ತಿಯ ಏಳು ಭಾಗಗಳಲ್ಲಿ “ಸದಾ ಸೇವೆಯ ಸಾಂತ್ವನ ತಂಡ” ವನ್ನು ಮುಸ್ಲಿಂ ಜಮಾಅತ್ ಕಿನ್ಯ ಸರ್ಕಲ್ ಅಧ್ಯಕ್ಷ ಹಾಜಿ ಬಿ.ಎಂ ಇಸ್ಮಾಈಲ್ ಪರಮಾಂಡ ರವರ ಅಧ್ಯಕ್ಷತೆಯಲ್ಲಿ ಅಸ್ತಿತ್ವಕ್ಕೆ ತರಲಾಯಿತು.



ಈ ತಂಡದ ಮುಖ್ಯ ಅಮೀರರಾಗಿ ಕುರಿಯ ಉಸ್ಮಾನ್ ಝುಹ್ರಿ ರವರನ್ನು ಆಯ್ಕೆ ಮಾಡಲಾಗಿದೆ, ಸಯ್ಯದ್ ಅಲವಿ ತಂಙಳ್ ಮೀಂಪ್ರಿ ರವರ ದುಆದೂಂದಿಗೆ ಪ್ರಾರಂಭಗೊಂಡ ಸಭೆಯನ್ನು ಮುಸ್ಲಿಂ ಜಮಾಅತ್ ದ.ಕ ಜಿಲ್ಲಾ (ವೆಸ್ಟ್) ಕಾರ್ಯದರ್ಶಿ ಎಂಕೆಎಂ ಇಸ್ಮಾಈಲ್ ಮೀಂಪ್ರಿ ಉದ್ಘಾಟಿಸಿದರು.
ಏಳು ಭಾಗಗಳ ಸಾಂತ್ವನ ತಂಡದ ಅಮೀರ್ ಗಳನ್ನು ಆರಿಸಿ ಸದಾ ಸೇವೆಗೆ ಸಿದ್ದರಾಗಲು ಸೂಚನೆ ನೀಡಲಾಗಿದೆ.
ಖುತುಬಿನಗರ ಮೀನಾದಿಗೆ ಪರಮಾಂಡ ಹಾಜಿ ಬಿ.ಎಂ ಇಸ್ಮಾಈಲ್, ಮೀಂಪ್ರಿಗೆ ಎಂಕೆಎಂ ಇಸ್ಮಾಈಲ್, ರಹಮತ್ ನಗರ ಭಾಗಕ್ಕೆ ಕೆ.ಎಂ ಅಬ್ದುಲ್ ಖಾದರ್ (ಪದಿಯಾರೆ ಸೇಕಬ್ಬ) ಕುರಿಯ ಪ್ರದೇಶಕ್ಕೆ ಆಲಿಕುಂಞಿ ಬಾಕಿಮಾರ್, ಬೆಳರಿಂಗೆ ಭಾಗಕ್ಕೆ ಅಬ್ದುಲ್ ಅಝೀಝ್ ಸಾಗ್, ಉಕ್ಕುಡಕ್ಕೆ ಅನ್ಸಾರ್ ಉಕ್ಕಡ, ಬದ್ರಿಯಾನಗರ ಭಾಗಕ್ಕೆ ಕೆ.ಎಚ್ ಮೂಸಕುಂಞಿ ರವರುಗಳನ್ನು ಅಮೀರರಾಗಿ ಆಯ್ಕೆ ಮಾಡಲಾಯಿತು.
ಮುಸ್ಲಿಂ ಜಮಾಅತ್ ಕಿನ್ಯ ಸರ್ಕಲ್ ಪ್ರಧಾನ ಕಾರ್ಯದರ್ಶಿ ಕೆ.ಎಂ ಇಸ್ಮಾಈಲ್ ಸಾಗ್,SჄS ಕಿನ್ಯ ಸರ್ಕಲ್ ಕೋಶಾಧಿಕಾರಿ ಅಬ್ದುಲ್ ಹಮೀದ್ ಮೀಂಪ್ರಿ,ಮುಸ್ಲಿಂ ಜಮಾಅತ್ ಬೆಳರಿಂಗೆ ಅಧ್ಯಕ್ಷ ಅಬ್ಬಾಸ್ ಹಾಜಿ ಎಲಿಮಲೆ ಸಭೆಯಲ್ಲಿ ಉಪಸ್ಥಿತರಿದ್ದರು.
















ಇನ್ನಷ್ಟು ಸುದ್ದಿಗಳು
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್