ಕೋಲಾರ: ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ಸ್ ಫೆಡರೇಷನ್ ರಾಜ್ಯ ಸಮಿತಿ ಗೋಲ್ಡನ್ ಫಿಫ್ಟಿ ಮಹಾ ಸಮ್ಮೇಳನದ ಪ್ರಯುಕ್ತ ಹಮ್ಮಿಕೊಂಡಿರುವ ಗೋಲ್ಡನ್ ಸಫಾರಿ ಯಾತ್ರೆ ಇಂದು ಕೋಲಾರ ಖುತುಬೇ ಶಹಂಶಾಹ್ ನಗರದ ಖಾನ್ಖಾ ಏ ಜುನೈದಿಯಾ ಸಭಾಂಗಣದಲ್ಲಿ ಸಮಾರೋಪಗೊಂಡಿತು.
ಜೂನ್ 05 ರಂದು ಬೆಂಗಳೂರಿನ ತವಕ್ಕಲ್ ಮಸ್ತಾನ್ ದರ್ಬಾರಿನಲ್ಲಿ ಝಿಯಾರತ್ ನೊಂದಿಗೆ ಆರಂಭಗೊಂಡ ರಾಜ್ಯ ನಾಯಕರ ಗೋಲ್ಡನ್ ಸಫಾರಿ ಯಾತ್ರೆ 31 ಜಿಲ್ಲೆಗಳ ಮೂಲಕ ಹಾದು ಹೋಗಿ ಸುಮಾರು ಏಳು ಸಾವಿರ ಕಿಲೋಮೀಟರ್ ಸಂಚರಿಸಿ ಇಂದು ಕೋಲಾರ ಖುತುಬೇ ಶಹಂಶಾಹ್ ನಗರದಲ್ಲಿ ಸಮಾಪ್ತಿ ಗೊಂಡಿತು.ರಾಜ್ಯದ ಅರವತ್ತು ಕೇಂದ್ರಗಳಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳು ಹಾಗೂ ಜಿಲ್ಲಾ ಡಿವಿಷನ್ ಸೆಕ್ಟರ್ ಹಾಗೂ ಯುನಿಟ್ ನಾಯಕರ ಜೊತೆ ಚರ್ಚೆಗಳು ನಡೆದವು.
ಎಸ್ಸೆಸ್ಸೆಫ್ ರಾಜ್ಯಾಧ್ಯಕ್ಷ ಹಾಫಿಝ್ ಸುಫ್ಯಾನ್ ಸಖಾಫಿ ಅಲ್ ಹಿಕಮಿ ನೇತೃತ್ವದಲ್ಲಿ ಪ್ರಧಾನ ಕಾರ್ಯದರ್ಶಿ ಸಫ್ವಾನ್ ಚಿಕ್ಕಮಗಳೂರು ಕೋಶಾಧಿಕಾರಿ ಕೆಎಂ ಮುಸ್ತಫಾ ನಈಮಿ ಹಾವೇರಿ, ಮುಜೀಬ್ ಕೊಂಡಂಗೇರಿ, ಉಬೈದುಲ್ಲಾ ಕುತ್ತಾರ್, ಜುನೈದ್ ಸಖಾಫಿ ಚಿತ್ರದುರ್ಗ, ಅಶ್ರಫ್ ಸಖಾಫಿ ಹರಿಹರ, ಅನ್ವರ್ ಅಸ್ಅದಿ, ಹಾಗೂ ಇನ್ನಿತರ ಎಸ್ಸೆಸ್ಸೆಫ್ ರಾಜ್ಯ ನಾಯಕರು ಹಾಜರಿದ್ದರು.

















ಇನ್ನಷ್ಟು ಸುದ್ದಿಗಳು
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್