ಕೋಲಾರ: ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ಸ್ ಫೆಡರೇಷನ್ ರಾಜ್ಯ ಸಮಿತಿ ಗೋಲ್ಡನ್ ಫಿಫ್ಟಿ ಮಹಾ ಸಮ್ಮೇಳನದ ಪ್ರಯುಕ್ತ ಹಮ್ಮಿಕೊಂಡಿರುವ ಗೋಲ್ಡನ್ ಸಫಾರಿ ಯಾತ್ರೆ ಇಂದು ಕೋಲಾರ ಖುತುಬೇ ಶಹಂಶಾಹ್ ನಗರದ ಖಾನ್ಖಾ ಏ ಜುನೈದಿಯಾ ಸಭಾಂಗಣದಲ್ಲಿ ಸಮಾರೋಪಗೊಂಡಿತು.
ಜೂನ್ 05 ರಂದು ಬೆಂಗಳೂರಿನ ತವಕ್ಕಲ್ ಮಸ್ತಾನ್ ದರ್ಬಾರಿನಲ್ಲಿ ಝಿಯಾರತ್ ನೊಂದಿಗೆ ಆರಂಭಗೊಂಡ ರಾಜ್ಯ ನಾಯಕರ ಗೋಲ್ಡನ್ ಸಫಾರಿ ಯಾತ್ರೆ 31 ಜಿಲ್ಲೆಗಳ ಮೂಲಕ ಹಾದು ಹೋಗಿ ಸುಮಾರು ಏಳು ಸಾವಿರ ಕಿಲೋಮೀಟರ್ ಸಂಚರಿಸಿ ಇಂದು ಕೋಲಾರ ಖುತುಬೇ ಶಹಂಶಾಹ್ ನಗರದಲ್ಲಿ ಸಮಾಪ್ತಿ ಗೊಂಡಿತು.ರಾಜ್ಯದ ಅರವತ್ತು ಕೇಂದ್ರಗಳಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳು ಹಾಗೂ ಜಿಲ್ಲಾ ಡಿವಿಷನ್ ಸೆಕ್ಟರ್ ಹಾಗೂ ಯುನಿಟ್ ನಾಯಕರ ಜೊತೆ ಚರ್ಚೆಗಳು ನಡೆದವು.
ಎಸ್ಸೆಸ್ಸೆಫ್ ರಾಜ್ಯಾಧ್ಯಕ್ಷ ಹಾಫಿಝ್ ಸುಫ್ಯಾನ್ ಸಖಾಫಿ ಅಲ್ ಹಿಕಮಿ ನೇತೃತ್ವದಲ್ಲಿ ಪ್ರಧಾನ ಕಾರ್ಯದರ್ಶಿ ಸಫ್ವಾನ್ ಚಿಕ್ಕಮಗಳೂರು ಕೋಶಾಧಿಕಾರಿ ಕೆಎಂ ಮುಸ್ತಫಾ ನಈಮಿ ಹಾವೇರಿ, ಮುಜೀಬ್ ಕೊಂಡಂಗೇರಿ, ಉಬೈದುಲ್ಲಾ ಕುತ್ತಾರ್, ಜುನೈದ್ ಸಖಾಫಿ ಚಿತ್ರದುರ್ಗ, ಅಶ್ರಫ್ ಸಖಾಫಿ ಹರಿಹರ, ಅನ್ವರ್ ಅಸ್ಅದಿ, ಹಾಗೂ ಇನ್ನಿತರ ಎಸ್ಸೆಸ್ಸೆಫ್ ರಾಜ್ಯ ನಾಯಕರು ಹಾಜರಿದ್ದರು.

















ಇನ್ನಷ್ಟು ಸುದ್ದಿಗಳು
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ