ಮಕ್ಕಾ: ಪವಿತ್ರ ಹಜ್ಜ್ ಕರ್ಮ ನಿರ್ವಹಿಸಲು ಆಗಮಿಸಿದ ಕೊಡಗಿನ ಮಡಿಕೇರಿ ನಿವಾಸಿ ಝುಹ್ರಾಬಿ ಎಂಬವರು ಅಲ್ಪಕಾಲದ ಅಸೌಖ್ಯದಿಂದ ಶನಿವಾರದಂದು ಮಕ್ಕಾದಲ್ಲಿ ನಿಧನರಾಗಿದ್ದರು
ಅಸೌಖ್ಯದಲ್ಲಿರುವಾಗ ಆಸ್ಪತ್ರೆಗೆ ಸಾಗಿಸಲು ಹಾಗೂ ದಫನ ಕಾರ್ಯಕ್ಕೆ ಬೇಕಾದ ಅವಶ್ಯಕ ದಾಖಲೆಗಳನ್ನು ಸರಿಪಡಿಸಲು ಮುತುವರ್ಜಿ ವಹಿಸಿ ಸಹಕರಿಸುವಲ್ಲಿ ಕೆಸಿಎಫ್ ಜಿದ್ದಾ ಝೋನ್ ಸಾಂತ್ವನ ಇಲಾಖೆ ಅಧ್ಯಕ್ಷರು ಹಾಗೂ ಹಜ್ಜ್ ವಾಲೇಂಟೀರ್ ಕೋರ್ ನಾಯಕರಾದ ಮೂಸಾ ಹಾಜಿ ಕಿನ್ಯ ಪ್ರಮುಖ ಪಾತ್ರ ವಹಿಸಿದ್ದರು. ಮೃತರ ದಫನ ಕಾರ್ಯ ಮಕ್ಕಾದ ಸರಯಾ ಕಬರ್ ಸ್ಥಾನದಲ್ಲಿ ಭಾನುವಾರ ಬೆಳಿಗ್ಗೆ ಹರಂ ಶರೀಫ್ ನಲ್ಲಿ ಮಯ್ಯಿತ್ ನಮಾಝ್ ನಿರ್ವಹಿಸಿ ದಫನ್ ಕಾರ್ಯ ಮಾಡಲಾಯಿತು.
ಈ ಸಂದರ್ಭ ಮಗ ರಫೀಕ್ ಮಡಿಕೇರಿ ಹಾಗೂ ಕೆಸಿಎಫ್ ಮಕ್ಕತುಲ್ ಮುಕರ್ರಮಾ ಸೆಕ್ಟರ್ ಪ್ರಧಾನ ಕಾರ್ಯದರ್ಶಿ ಹನೀಫ್ ಕೋಳಿಯೂರು, ಇಹ್ಸಾನ್ ಇಲಾಖೆ ಅಧ್ಯಕ್ಷರು ಲತೀಫ್ ನೆಲ್ಯಾಡಿ ಪಾಲ್ಗೊಂಡಿದ್ದರು.
ಹಜ್ಜ್ ವಾಲೇಂಟೀರ್ ಕೋರ್ 2023, ಸ್ವಯಂ ಸೇವಕರ ತಂಡ ಹಜ್ಜ್ ಸಂದರ್ಭದಲ್ಲಿ ಇಂತಹ ಹಲವು ಮರಣ ಪ್ರಕ್ರಿಯೆಗಳಲ್ಲಿ ಸಂದರ್ಭಕ್ಕೆ ಅನುಗುಣವಾಗಿ ತೊಡಗಿಸಿಕೊಂಡು ಸಹಕರಿಸುತ್ತಾ ಸಾರ್ವಜನಿಕರ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ