ಮಂಗಳೂರು : ಪುಂಜಾಲಕಟ್ಟೆಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 2012ರಲ್ಲಿ ನಡೆದ ದರೋಡೆ ಪ್ರಕರಣ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ನ್ಯಾಯಾಲಯವು ದೋಷಮುಕ್ತಮುಕ್ತಗೊಳಿಸಿದೆ.
ಮಂಗಳೂರಿನ 6ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಆರೋಪಿಗಳಾದ ಮುಹಮ್ಮದ್ ಹುಸೈನಾರ್ ಅಲಿಯಾಸ್ ಹುಸೈನ್ ಹಾಗೂ ಇಬ್ರಾಹಿಂ ಅಲಿಯಾಸ್ ಟಿನ್ ಟಿನ್ ಮೋನು ಎಂಬವರನ್ನು ಪ್ರಕರಣದಿಂದ ದೋಷಮುಕ್ತ ಗೊಳಿಸಿದೆ.
ಪ್ರಕರಣದ ಇನ್ನಿಬ್ಬರು ಆರೋಪಿಗಳ ಪೈಕಿ ಒಬ್ಬರು ಮೃತರಾಗಿದ್ದರೆ, ಇನ್ನೊಬ್ಬರು ತಲೆಮರೆಸಿಕೊಂಡಿದ್ದಾರೆ. 2012 ಆಗಸ್ಟ್ 24ರ ಶುಕ್ರವಾರದಂದು, ಮನೆಯಲ್ಲಿ ಗಂಡಸರು ಮಸೀದಿಗೆ ಹೋದ ವೇಳೆಯಲ್ಲಿ, ಮನೆಯಲ್ಲಿದ್ದ ಮಹಿಳೆಯೊಂದಿಗೆ ಕುಡಿಯಲು ನೀರು ಬೇಕೆಂದು ಕೇಳಿದ್ದು, ನೀರು ತರಲು ಹೋದಾಗ ಹಿಂದಿನಿಂದ ಮಹಿಳೆಯ ಕೈಹಿಡಿದು ಚಾಕು ತೋರಿಸಿ, ಬೆದರಿಸಿ ಮನೆಯಲ್ಲಿದ್ದ ಎರಡುವರೆ ಲಕ್ಷದ ಮೌಲ್ಯದ ಚಿನ್ನಾಭರಣ ದರೋಡೆ ಮಾಡಲಾಗಿದೆ ಎಂಬ ಪ್ರಕರಣ ಸಂಬಂಧಿಸಿ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಈ ಪ್ರಕರಣ ವಿಚಾರಣೆ ನಡೆಸಿದ ನ್ಯಾಯಾಲಯವು ಇಬ್ಬರನ್ನು ಪ್ರಕರಣದಿಂದ ದೋಷಮುಕ್ತ ಗೊಳಿಸಿದೆ. ವಕೀಲರಾದ ಅಬೂಬಕ್ಕರ್ ಸಿದ್ದೀಕ್ ಎಂ.ಪಿ, ಇಸ್ಮಾಯಿಲ್ ಎಸ್., ದುಗಾ ನಾಯಕ್ ಹಾಗೂ ನಈಮ್ ಶೇಖ್ ಅವರು ಮೇಲಿನ ಆರೋಪಿಗಳ ಪರವಾಗಿ ವಾದಿಸಿದ್ದರು.
















ಇನ್ನಷ್ಟು ಸುದ್ದಿಗಳು
ಹಜ್ ಯಾತ್ರಿಕರಿಗೆ ಡಿಜಿಟಲ್ ದಾಖಲೆಗಳ ಸೌಲಭ್ಯ- ಪಾಸ್ಪೋರ್ಟ್ಗಳ ಅಗತ್ಯವಿಲ್ಲ
ವೈದ್ಯಕೀಯ-ಇಂಜಿನಿಯರಿಂಗ್ ಕನಸುಗಳಾಚೆಗೆ ನಾಗರಿಕ ಸೇವೆಗಳತ್ತ ಯುವಶಕ್ತಿ ಮುಖ ಮಾಡಲಿ: ಇಕ್ಬಾಲ್ ಬಾಳಿಲ ಕರೆ
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ