ಕೋಝಿಕ್ಕೋಡ್ |ಮಲೇಶಿಯನ್
ಸರ್ಕಾರದ ಅತ್ಯುನ್ನತ ಪ್ರಶಸ್ತಿಯನ್ನು ಸ್ವೀಕರಿಸಿ ಹಿಂದಿರುಗಿದ ಭಾರತದ ಗ್ರ್ಯಾಂಡ್ ಮುಫ್ತಿ ಕಾಂತಪುರಂ ಎ.ಪಿ.ಅಬೂಬಕರ್ ಮುಸ್ಲಿಯಾರ್ ಅವರನ್ನು ಆತ್ಮೀಯವಾಗಿ ಸ್ವಾಗತಿಸಲಾಯಿತು.
ಸಮಸ್ತ ಕೇರಳ ಜಮ್ಇಯ್ಯತುಲ್ ಉಲಮಾ ನೇತೃತ್ವದಲ್ಲಿ ಕರಿಪೂರ್ ವಿಮಾನ ನಿಲ್ದಾಣದಲ್ಲಿ ಸುನ್ನಿ ಕಾರ್ಯಕರ್ತರು
ಉಸ್ತಾದ್ ಅವರನ್ನು ಹೃತ್ಪೂರ್ವಕವಾಗಿ ಸ್ವಾಗತಿಸಿದರು. ಮಲೇಷ್ಯಾ ಸರ್ಕಾರದ ವಿಶೇಷ ಚಾರ್ಟರ್ಡ್ ವಿಮಾನದಲ್ಲಿ ಬೆಳಿಗ್ಗೆ 8.17 ಕ್ಕೆ ಕಾಂತಪುರಂ ಉಸ್ತಾದ್ ಕರಿಪೂರ್ ವಿಮಾನ ನಿಲ್ದಾಣದಲ್ಲಿ ಬಂದಿಳಿದರು. ಬೆಳಗ್ಗೆ 6 ಗಂಟೆಯಿಂದಲೇ ಕಾಂತಪುರಂ ಉಸ್ತಾದ್ ಅವರನ್ನು ಸ್ವಾಗತಿಸಲು ಅಪಾರ ಜನಸ್ತೋಮವೇ ವಿಮಾನ ನಿಲ್ದಾಣಕ್ಕೆ ಆಗಮಿಸಿತ್ತು.

ವಿಮಾನದಿಂದ ಇಳಿದು ಇಮಿಗ್ರೇಷನ್ ಪ್ರಕ್ರಿಯೆಗಳನ್ನು ಮುಗಿಸಿ ಒಂಬತ್ತು ಗಂಟೆಗೆ ವಿಮಾನ ನಿಲ್ದಾಣದಿಂದ ಹೊರಬಂದ ಅವರನ್ನು ಜನರು ತಕ್ಬೀರ್ ಧ್ವನಿಗಳೊಂದಿಗೆ ಸ್ವಾಗತಿಸಿದರು.
ಸಮಸ್ತ ಕೇರಳ ಜಮ್ಇಯ್ಯತುಲ್ ಉಲಮಾ ಅಧ್ಯಕ್ಷರಾದ ರಈಸುಲ್ ಉಲಮಾ ಇ ಸುಲೈಮಾನ್ ಮುಸ್ಲಿಯಾರ್, ಸಯ್ಯಿದ್ ಅಲಿ ಬಾಫಕಿ ತಂಙಳ್, ಸಯ್ಯಿದ್ ಇಬ್ರಾಹಿಂ ಖಲೀಲ್ ಅಲ್ ಬುಖಾರಿ ಮತ್ತು ಪೇರೋಡ್ ಅಬ್ದುರ್ರಹ್ಮಾನ್ ಸಖಾಫಿ ಮೊದಲಾದ ಮುಖಂಡರು ಸೇರಿ ಕಾಂತಪುರಂ ಉಸ್ತಾದರನ್ನು ವಿಮಾನ ನಿಲ್ದಾಣದಲ್ಲಿ ಬರಮಾಡಿಕೊಳ್ಳಲಾಯಿತು.

ನಂತರ ನೂರಾರು ವಾಹನಗಳ ಬೆಂಗಾವಲಿನೊಂದಿಗೆ ಕೋಝಿಕ್ಕೋಡ್ ನಗರಕ್ಕೆ ಕರೆದೊಯ್ಯಲಾಯಿತು. ಕಾಂತಪುರಂ ಉಸ್ತಾದರಿಗೆ ಇಂದು ಸಂಜೆ ಕೋಝಿಕ್ಕೋಡ್ನಲ್ಲಿ ಪೌರ ಸನ್ಮಾನವನ್ನು ಕೂಡ ಆಯೋಜಿಸುಲಾಗಿದೆ. ಸಮಾಜದ ವಿವಿಧ ಕ್ಷೇತ್ರಗಳ ಗಣ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
ಸಾಮಾಜಿಕ ಮತ್ತು ವೈಜ್ಞಾನಿಕ ಕ್ಷೇತ್ರಗಳಲ್ಲಿ ಅತ್ಯುತ್ತಮ ಸೇವೆ ಸಲ್ಲಿಸುವ ಧಾರ್ಮಿಕ ವಿದ್ವಾಂಸರಿಗೆ ಹಿಜ್ರಾ ವರ್ಷದ ಆರಂಭದಲ್ಲಿ ಮಲೇಷ್ಯಾ ಸರ್ಕಾರ ನೀಡುತ್ತಿರುವ ಅತ್ಯುನ್ನತ ಪ್ರಶಸ್ತಿಯನ್ನು ಕಳೆದ ದಿನ, ಮಲೇಷಿಯಾದ ರಾಜ ಅಲ್ ಸುಲ್ತಾನ್ ಅಬ್ದುಲ್ಲಾ ಸುಲ್ತಾನ್ ಅಹ್ಮದ್ ಷಾ ಅವರು ಕಾಂತಪುರಂ ಉಸ್ತಾದರಿಗೆ ಪ್ರದಾನ ಮಾಡಿದರು.
ಈ ಪ್ರಶಸ್ತಿಯು, ಜಾಗತಿಕ ಇಸ್ಲಾಮಿಕ್ ವೇದಿಕೆಗಳಲ್ಲಿ ನಿರಂತರ ಉಪಸ್ಥಿತಿಯಲ್ಲಿರುವ ಕಾಂತಪುರಂ ಅವರ ಆರು ದಶಕಗಳ ಸುದೀರ್ಘ ಸಾಮಾಜಿಕ ಕಾರ್ಯಕ್ಕೆ ಮನ್ನಣೆಯಾಗಿದೆ.
















ಇನ್ನಷ್ಟು ಸುದ್ದಿಗಳು
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್