ಮಂಜನಾಡಿ: ಮಅದನುಲ್ ಉಲೂಂ ಮದ್ರಸ ಮಂಗಳಾಂತಿ ಇದರ ವಿದ್ಯಾರ್ಥಿ ಸಂಘಟನೆಯಾದ ಎಸ್. ಬಿ.ಎಸ್ ಸಮಿತಿಗೆ ನೂತನ ಪದಾಧಿಕಾರಿಗಳನ್ನು ಆರಿಸಲಾಯಿತು.
ಸಭೆಯಲ್ಲಿ ಮದ್ರಸದ ಸದರ್ ಮುಅಲ್ಲಿಮರಾದ ಮುಹಮ್ಮದ್ ಸಯೀದ್ ಸಅದಿ ಅಲ್ ಅಫ್ಲಲಿ ಸೆರ್ಕಳ ಅಧ್ಯಕ್ಷತೆ ವಹಿಸಿ ಪ್ರಾರ್ಥನೆಗೆ ನೇತೃತ್ವ ನೀಡಿದರು. ಧಾರ್ಮಿಕ -ಲೌಕಿಕ ಜ್ಞಾನವನ್ನು ಮೈಗೂಡಿಸುವ ವಿದ್ಯಾರ್ಥಿ ಸಮೂಹವು ಆಧುನಿಕತೆಯಿಂದ ಮೈಮರೆತ ಯುವ ಪೀಳಿಗೆಗೆ ಮಾದರಿಯಾಗಬೇಕೆಂದೂ, ಪವಿತ್ರ ಇಸ್ಲಾಮಿನ ಶಾಂತಿ ಸೌಹಾರ್ದತೆಯನ್ನು ತಮ್ಮ ಜೀವನದ ಮೂಲಕ ಸಮಾಜಕ್ಕೆ ತೋರಿಸಿ ಕೊಡಬೇಕೆಂದೂ ಅಧ್ಯಕ್ಷ ಭಾಷಣದಲ್ಲಿ ಸೂಚಿಸಿದರು.
ಅಧ್ಯಾಪಕರಾದ ಸಿದ್ದೀಖ್ ಅಹ್ಸನಿ ಅಸೈ ಕಾರ್ಯಕ್ರಮವನ್ನು ಉದ್ಘಾಟಿಸಿದರು. ನಿಝಾರ್ ಸಖಾಫಿ ಕಲ್ಕಟ್ಟ ಹಾಗೂ ಫಾರೂಕ್ ಹಿಮಮಿ ಕಿನ್ಯಾ ಕಾರ್ಯಕ್ರಮದಲ್ಲಿ ಶುಭಕೋರಿದರು.
ತದನಂತರ ನೂತನ ಸಮಿತಿಯನ್ನು ಆರಿಸಲಾಯಿತು. ಅಧ್ಯಕ್ಷರಾಗಿ ಸಿನಾನ್ ಉಪಾಧ್ಯಕ್ಷರಾಗಿ ಸವಾನ್ ಕಾರ್ಯದರ್ಶಿ ತಾಹಿರ್, ಜೊತೆ ಕಾರ್ಯದರ್ಶಿ ನಿಯಾಫ್ ಹಾಗೂ ಕೋಶಾಧಿಕಾರಿಯಾಗಿ ಬಶಾರತ್ ರನ್ನೂ ಕಾರ್ಯಕಾರಿ ಸದಸ್ಯರುಗಳಾಗಿ ಆದಿಲ್, ಶಹೀರ್, ಅಫ್ಲಲ್, ನಜಾಫ್, ಶಾಹಿನ್, ನಿಹಾಲ್, ಫಾಝಿಲ್, ಆಶಿಖ್ ಎಂಬಿವರನ್ನು ಆರಿಸಲಾಯಿತು. ಏಳು ತಂಡಗಳಾಗಿ ನಡೆಯುವ ಸಾಹಿತ್ಯ ಸಮಾಜಕ್ಕೆ ಸಿನಾನ್, ತಾಹಿರ್, ನಿಯಾಫ್, ಆಝಿಲ್, ವಫಾ, ನುಹಾ ಹಾಗೂ ತೌಸಿಯಾ ರನ್ನು ನಾಯಕರನ್ನಾಗಿ ನೇಮಿಸಲಾಯಿತು. ಅಧ್ಯಾಪಕರಾದ ಇರ್ಷಾದ್ ರಝ್ವಿ ಕಾರ್ಯಕ್ರಮವನ್ನು ಸ್ವಾಗತಿಸಿ ಸಿನಾನ್ ವಂದಿಸಿದರು.
















ಇನ್ನಷ್ಟು ಸುದ್ದಿಗಳು
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
SჄS ಬೆಳ್ತಂಗಡಿ ಝೋನ್: ಸಾಂತ್ವನ ಫಂಡ್ ಹಸ್ತಾಂತರ