ಮಂಗಳೂರು: ಮತೀಯ ವಿದ್ವೇಷವನ್ನೆ ಉಸಿರಾಗಿಸಿಕೊಂಡ ಸಂಘ ಪರಿವಾರಕ್ಕೆ ಮುಸ್ಲಿಮ್ ಹೊರತಾದ ಸಮಸ್ಯೆಗಳು ಪತ್ಯವಲ್ಲ.
ವಿದ್ಯಾರ್ಥಿನಿಯರ ವಿಡಿಯೋ ಪ್ರಕರಣದ ವಾಸ್ತವ ಸತ್ಯವನ್ನು ಮೀರಿ ಸಂಘ ಪರಿವಾರ ಸ್ಥಳೀಯ ಶಾಸಕ ಯಶ್ಪಾಲ್ ಸುವರ್ಣರ ಮೂಲಕ ವಿಷಯವನ್ನು ರಾಷ್ಟ್ರ ಮಟ್ಟಕ್ಕೆ ವೈಭವೀಕರಿಸಲು ಪ್ರಯತ್ನಿಸುತ್ತಿದೆ ಎಂದು ಮುಸ್ಲಿಮ್ ಒಕ್ಕೂಟದ ಅಧ್ಯಕ್ಷರಾದ ಕೆ.ಅಶ್ರಫ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಶೈಕ್ಷಣಿಕ ಸಂಸ್ಥೆಯ ವ್ಯಾಪ್ತಿಯಲ್ಲಿಯೇ ಬಗೆಹರಿಯುವ ಸಮಸ್ಯೆಯನ್ನು ಬಲವಂತವಾಗಿ ಹೊರ ತಂದಂತಿದೆ ಮತ್ತು ಆ ಮೂಲಕ ಉಡುಪಿಯಿಂದಲೆ ಮತೀಯ ವಿದ್ವೇಶಿತ ಧೃವೀಕರಣಕ್ಕಾಗಿ ಸಜ್ಜು ಗೊಂಡಂತಿದೆ. ಯಷ್ಪಾಲ್ ಸುವರ್ಣರಂತಹ ವಿದ್ವಂಸಕಾರಿ ಹಿನ್ನೆಲೆಯುಳ್ಳ ವ್ಯಕ್ತಿಯ ಮೂಲಕ ಮತೀಯ ಪ್ರಚೋದಿತ ಹೇಳಿಕೆಗಳನ್ನು ನೀಡಲಾಗುತ್ತಿದೆ.
ಇಂದು ಮತೀಯ ವಿದ್ವೇಷ ಕಾರುವವರು ನಾಳೆ ಉಡುಪಿಯನ್ನು ಇನ್ನೊಂದು ಮಣಿಪುರ ಮಾಡಲು ಹಿಂಜರಿಯಲಾರರು. ಮಣಿಪುರದಲ್ಲಿ ರಾಜ್ಯ ಪ್ರೇರಿತ ಜನಾಂಗೀಯ ಹತ್ಯೆಯನ್ನು ತುಟಿ ಪಿಟಿಕ್ ಎನ್ನದೆ ನಿಶ್ಯಬ್ದ ಪಾಲಿಸಿದ ಮತ್ತು ಮಣಿಪುರದ ಆದಿವಾಸಿ ಬಡ ಅಮಾಯಕ ಮಹಿಳೆಯರ ಬೆತ್ತಲೆ ಘಟನೆಗೆ ಕಿಂಚಿತ್ತೂ ಪ್ರತಿಭಟಿಸದ ಈ ಕೇಶವ ಕೃಪಾ ಅನುಯಾಯಿಗಳಿಗೆ ವಾಸ್ತವ ರಹಿತ ವಿಧ್ಯಾರ್ಥಿಗಳ ವೀಡಿಯೊ ಮಹಾ ಅಪರಾಧವಾಗಿ ಕಂಡದ್ದು ವಿಪರ್ಯಾಸ,ಇಂತಹ ಪ್ರಭೇದ ಶಕ್ತಿಗಳ ಸಾಂದರ್ಭಿಕ ಲಾಭದಾರಿಕೆಯನ್ನು ಜನರು ಅರ್ಥ ಮಾಡಿಕೊಳ್ಳಲಿದ್ದಾರೆ ಎಂದು ಅಶ್ರಫ್.ಕೆ( ಮಾಜಿ ಮೇಯರ್) ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್