ಬೆಳ್ತಂಗಡಿ : ತಾಲೂಕಿನ ಎಲ್ಲಾ ಜಾತಿ ಧರ್ಮಗಳ ಜನರು ಪರಸ್ಪರ ಸ್ನೇಹ ಸೌಹಾರ್ದತೆ ಸಾಮರಸ್ಯ ಸಹಬಾಳ್ವೆಯಿಂದ ಜೀವನ ನಡೆಸುತ್ತಿದ್ದಾರೆ. ಆದರೆ ಕೆಲವೊಂದು ಕಿಡಿಗೇಡಿಗಳು ಕ್ಷುಲ್ಲಕ ಕಾರಣ ನೀಡಿ ಶಾಂತಿ ಸೌಹಾರ್ದತೆ ಕೆಡಿಸುವ ಪ್ರಯತ್ನ, ನೈತಿಕ ಪೋಲೀಸ್ಗಿರಿ ಹಾಗೂ ಅಲ್ಪಸಂಖ್ಯಾತ ಸಮುದಾಯದ ಜನರ ಮೇಲೆ ದೌರ್ಜನ್ಯ ಮೊದಲಾದ ಕೃತ್ಯಗಳು ತಾಲೂಕಿನ ವಿವಿಧೆಡೆ ನಡೆಯುತ್ತಿರುವುದು ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿದೆ.
ಇದರ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಸರಕಾರದ ಮುಖ್ಯಮಂತ್ರಿ ಹಾಗೂ ಗೃಹ ಸಚಿವರುಗಳಿಗೆ ಬೆಳ್ತಂಗಡಿ ತಾಲೂಕು ತಹಸೀಲ್ಧಾರರ ಮುಖಾಂತರ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ SჄS ಕರ್ನಾಟಕ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ ಬಿ ಮುಹಮ್ಮದ್ ಸಾಧಿಕ್ ಮಾಸ್ಟರ್ ಮಲೆಬೆಟ್ಟು, SჄS ಬೆಳ್ತಂಗಡಿ ಝೋನ್ ಅಧ್ಯಕ್ಷರಾದ ಕಾಸಿಂ ಮುಸ್ಲಿಯಾರ್ ಮಾಚಾರು, ಬೆಳ್ತಂಗಡಿ ಝೋನ್ ಪ್ರಧಾನ ಕಾರ್ಯದರ್ಶಿ ನಝೀರ್ ಪೆರ್ದಾಡಿ, ಸಾಂತ್ವನ ಕಾರ್ಯದರ್ಶಿ ಸಲೀಂ ಕನ್ಯಾಡಿ, ಸದಸ್ಯರಾದ ಸಿದ್ದೀಖ್ ಪರಪ್ಪು, ಅಯ್ಯೂಬ್ ಮಹ್ಲರಿ ಕಾವಳಕಟ್ಟೆ, SSF ಬೆಳ್ತಂಗಡಿ ಡಿವಿಷನ್ ಅಧ್ಯಕ್ಷರಾದ ಶಾಫಿ ಮದನಿ ಪಾಂಡವರಕಲ್ಲು, ಪ್ರಧಾನ ಕಾರ್ಯದರ್ಶಿ ನವಾಝ್ ಜಾರಿಗೆಬೈಲು, ಸದಸ್ಯರಾದ ಅಬ್ದುಲ್ಲತೀಫ್ ಅಹ್ಸನಿ ಮಲೆಬೆಟ್ಟು ಮತ್ತಿತರರು ಹಾಜರಿದ್ದರು.
















ಇನ್ನಷ್ಟು ಸುದ್ದಿಗಳು
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ