ದುಬೈ: ಕರ್ನಾಟಕ ಕಲ್ಚರಲ್ ಫೌಂಡೇಶನ್ ದುಬೈ ಸೌತ್ ಝೋನ್ ವತಿಯಿಂದ ಅಕ್ಟೋಬರ್ 8 ರಂದು ನಡೆಯುವ ಬೃಹತ್ ಮೀಲಾದ್ ಕಾನ್ಫರೆನ್ಸ್ ಕಾರ್ಯಕ್ರಮದ ಸ್ವಾಗತ ಸಮಿತಿ ರಚನಾ ಸಭೆಯು, ಕೆಸಿಎಫ್ ಯುಎಇ ನಾಲೆಡ್ಜ್ ವಿಭಾಗದ ಕಾರ್ಯದರ್ಶಿ ಶಾಹುಲ್ ಹಮೀದ್ ಸಖಾಫಿಯವರ ಅಧ್ಯಕ್ಷತೆಯಲ್ಲಿ ಬೇ ಬೈಟ್ಸ್ ಹೋಟೆಲಿನಲ್ಲಿ ನಡೆಯಿತು. ಅಝೀಝ್ ಕೆದಿಲರ ಸ್ವಾಗತದೊಂದಿಗೆ ಪಾರಂಭವಾದ ಕಾರ್ಯಕ್ರಮವನ್ನು ರಶೀದ್ ಹನೀಫಿ ಉದ್ಘಾಟಿಸಿದರು.
ಕೆಸಿಎಫ್ ಯುಎಇ ರಾಷ್ಟ್ರೀಯ ಸಮಿತಿ ಅಧ್ಯಕ್ಷರಾದ ಇಬ್ರಾಹಿಂ ಸಖಾಫಿ ಕೆದುಂಬಾಡಿಯವರ ಮುಖ್ಯ ಭಾಷಣದ ನಂತರ ನೂತನ ಸ್ವಾಗತ ಸಮಿತಿಯ ಚೇರ್ ಮ್ಯಾನ್ ಆಗಿ ಇಕ್ಬಾಲ್ ಸಿದ್ದಕಟ್ಟೆ, ವರ್ಕಿಂಗ್ ಚೇರ್ ಮ್ಯಾನ್ ನಝೀರ್ ಹಾಜಿ ಕೆಮ್ಮಾರ, ಕನ್ವೀನರ್ ಅಶ್ಫಾಕ್ ಕೊಡಗು, ವರ್ಕಿಂಗ್ ಕನ್ವೀನರ್ ಆಸಿಫ್ ಇಂದ್ರಾಣಿ, ಕೋಶಾಧಿಕಾರಿ ಅಬ್ದುಲ್ ಜಲೀಲ್ ಕಾಸರಗೋಡು, ಫಿನಾನ್ಶಿಯಲ್ ಚೇರ್ ಮ್ಯಾನ್ ಇಬ್ರಾಹಿಂ ಹೆಜಮಾಡಿ, ಮೀಡಿಯಾ ಚೇರ್ ಮ್ಯಾನ್ ಮುಸ್ತಫಾ ಸಖಾಫಿ, ಪಬ್ಲಿಕೇಶನ್ ಚೇರ್ ಮ್ಯಾನ್ ರಶೀದ್ ಹನೀಫಿ ಸೇರಿದಂತೆ ವಿವಿಧ ವಿಭಾಗಗಳಿಗೆ ಕಾರ್ಯಕರ್ತರನ್ನು ಆರಿಸಲಾಯಿತು.
ಕೆಸಿಎಫ್ ಅಂತರ್ರಾಷ್ಟ್ರೀಯ ಪ್ರತಿಭೋತ್ಸವದಲ್ಲಿ ಖಿರಾಅತ್ ನಲ್ಲಿ ಪ್ರಥಮ ಸ್ಥಾನವನ್ನು ಪಡೆದ ಆಶಿಕ್ ರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು. ದುಬೈ ಸೌತ್ ರೋನ್ ಕಾರ್ಯದರ್ಶಿ ಮನ್ಸೂರ್ ಹರೇಕಳ ಕಾರ್ಯಕ್ರಮವನ್ನು ನಿರೂಪಿಸಿ, ಆಸಿಫ್ ಇಂದ್ರಾಜೆ ವಂದಿಸಿದರು.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ