ದುಬೈ: ಕರ್ನಾಟಕ ಕಲ್ಚರಲ್ ಫೌಂಡೇಶನ್ ದುಬೈ ಸೌತ್ ಝೋನ್ ವತಿಯಿಂದ ಅಕ್ಟೋಬರ್ 8 ರಂದು ನಡೆಯುವ ಬೃಹತ್ ಮೀಲಾದ್ ಕಾನ್ಫರೆನ್ಸ್ ಕಾರ್ಯಕ್ರಮದ ಸ್ವಾಗತ ಸಮಿತಿ ರಚನಾ ಸಭೆಯು, ಕೆಸಿಎಫ್ ಯುಎಇ ನಾಲೆಡ್ಜ್ ವಿಭಾಗದ ಕಾರ್ಯದರ್ಶಿ ಶಾಹುಲ್ ಹಮೀದ್ ಸಖಾಫಿಯವರ ಅಧ್ಯಕ್ಷತೆಯಲ್ಲಿ ಬೇ ಬೈಟ್ಸ್ ಹೋಟೆಲಿನಲ್ಲಿ ನಡೆಯಿತು. ಅಝೀಝ್ ಕೆದಿಲರ ಸ್ವಾಗತದೊಂದಿಗೆ ಪಾರಂಭವಾದ ಕಾರ್ಯಕ್ರಮವನ್ನು ರಶೀದ್ ಹನೀಫಿ ಉದ್ಘಾಟಿಸಿದರು.
ಕೆಸಿಎಫ್ ಯುಎಇ ರಾಷ್ಟ್ರೀಯ ಸಮಿತಿ ಅಧ್ಯಕ್ಷರಾದ ಇಬ್ರಾಹಿಂ ಸಖಾಫಿ ಕೆದುಂಬಾಡಿಯವರ ಮುಖ್ಯ ಭಾಷಣದ ನಂತರ ನೂತನ ಸ್ವಾಗತ ಸಮಿತಿಯ ಚೇರ್ ಮ್ಯಾನ್ ಆಗಿ ಇಕ್ಬಾಲ್ ಸಿದ್ದಕಟ್ಟೆ, ವರ್ಕಿಂಗ್ ಚೇರ್ ಮ್ಯಾನ್ ನಝೀರ್ ಹಾಜಿ ಕೆಮ್ಮಾರ, ಕನ್ವೀನರ್ ಅಶ್ಫಾಕ್ ಕೊಡಗು, ವರ್ಕಿಂಗ್ ಕನ್ವೀನರ್ ಆಸಿಫ್ ಇಂದ್ರಾಣಿ, ಕೋಶಾಧಿಕಾರಿ ಅಬ್ದುಲ್ ಜಲೀಲ್ ಕಾಸರಗೋಡು, ಫಿನಾನ್ಶಿಯಲ್ ಚೇರ್ ಮ್ಯಾನ್ ಇಬ್ರಾಹಿಂ ಹೆಜಮಾಡಿ, ಮೀಡಿಯಾ ಚೇರ್ ಮ್ಯಾನ್ ಮುಸ್ತಫಾ ಸಖಾಫಿ, ಪಬ್ಲಿಕೇಶನ್ ಚೇರ್ ಮ್ಯಾನ್ ರಶೀದ್ ಹನೀಫಿ ಸೇರಿದಂತೆ ವಿವಿಧ ವಿಭಾಗಗಳಿಗೆ ಕಾರ್ಯಕರ್ತರನ್ನು ಆರಿಸಲಾಯಿತು.
ಕೆಸಿಎಫ್ ಅಂತರ್ರಾಷ್ಟ್ರೀಯ ಪ್ರತಿಭೋತ್ಸವದಲ್ಲಿ ಖಿರಾಅತ್ ನಲ್ಲಿ ಪ್ರಥಮ ಸ್ಥಾನವನ್ನು ಪಡೆದ ಆಶಿಕ್ ರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು. ದುಬೈ ಸೌತ್ ರೋನ್ ಕಾರ್ಯದರ್ಶಿ ಮನ್ಸೂರ್ ಹರೇಕಳ ಕಾರ್ಯಕ್ರಮವನ್ನು ನಿರೂಪಿಸಿ, ಆಸಿಫ್ ಇಂದ್ರಾಜೆ ವಂದಿಸಿದರು.
















ಇನ್ನಷ್ಟು ಸುದ್ದಿಗಳು
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ