ಸಮಸ್ತ ಕೇರಳ ಜಂಇಯ್ಯತ್ತುಲ್ ಉಲಮಾ ಕಾರ್ಯದರ್ಶಿ ಶೈಖುನಾ ಮುಹ್ಯಿಸ್ಸುನ್ನ ಪೊನ್ಮಳ ಉಸ್ತಾದರ ಕನ್ನಡಿಗ ಶಿಷ್ಯಂದಿರ ಸಂಘಟನೆ ಮುಹ್ಯಿಸ್ಸುನ್ನ ಅಸೋಸಿಯೇಶನ್ ಆಫ್ ಕರ್ನಾಟಕ ಇದರ ಮಹಾಸಭೆಯು ಕೇರಳದ ಮಲಪ್ಪುರಂ ಜಿಲ್ಲೆಯ ಮಂಜೇರಿ ಜಾಮಿಅ ಹಿಕಮಿಯ್ಯ ಸಂಸ್ಥೆಯ ಕಾನ್ಫರೆನ್ಸ್ ಹಾಲ್ ನಲ್ಲಿ ಮುಹ್ಯಿಸ್ಸುನ್ನ ಕೇಂದ್ರ ಸಮಿತಿ ಪ್ರಧಾನ ಕಾರ್ಯದರ್ಶಿ ಪಲ್ಲಾರ್ ಹಸನ್ ಬಾಖವಿ ಉಸ್ತಾದರ ಅಧ್ಯಕ್ಷತೆಯಲ್ಲಿ ನಡೆಯಿತು. ಶೈಖುನಾ ಮುಹ್ಯಿಸ್ಸುನ್ನ ಪೊನ್ಮಳ ಉಸ್ತಾದ್ ರವರು ಉದ್ಘಾಟಿಸಿ ಹಿತೋಪದೇಶಗಳನ್ನು ನೀಡಿದರು.

ಸಮಸ್ತ ಮುಶಾವರ ಸದಸ್ಯರಾದ ಕೊಳತ್ತೂರು ಅಲವಿ ಸಖಾಫಿ ಉಸ್ತಾದ್, ಸಂಸ್ಥೆಯ ಹಿರಿಯ ಮುದರ್ರಿಸರಾದ ಮುಹಮ್ಮದ್ ಸಖಾಫಿ ಇಲ್ಲಿಪ್ಪುಲಾಕಲ್, ಸೂಫಿ ಉಸ್ತಾದ್, ಜನರಲ್ ಮ್ಯಾನೇಜರ್ ಅಬ್ದುರ್ರಹ್ಮಾನ್ ಮುಸ್ಲಿಯಾರ್, ರಹೀಂ ಸಖಾಫಿ ನಡುವಟ್ಟಮ್, ರಹೀಂ ಸಖಾಫಿ ಮನ್ನಾರ್ಕಾಡ್, ಖಲಂದರ್ ಸಿಹಾನ್ ಸಖಾಫಿ ಮುಂತಾದವರು ಕಾರ್ಯಕ್ರಮದಲ್ಲಿ ಭಾಗವಹಿಸಿ ಶುಭ ಹಾರೈಸಿದರು.
ಸಂಘಟನೆಯ ನಿಕಟ ಪೂರ್ವ ಪ್ರ. ಕಾರ್ಯದರ್ಶಿ ಉಸ್ಮಾನ್ ಸಖಾಫಿ ಪಾತೂರು ವರದಿ ವಾಚಿಸಿ ಲೆಕ್ಕ ಮಂಡಿಸಿದರು. ನಂತರ ನೂತನ ಸಮಿತಿಯನ್ನು ರಚಿಸಲಾಯಿತು. ಕೇಂದ್ರ ಸಮಿತಿ ಪ್ರ.ಕಾರ್ಯದರ್ಶಿ ಉಸ್ತಾದ್ ಹಸನ್ ಬಾಖವಿ ಪಲ್ಲಾರ್ ರವರು ಚುನಾವಣಾ ಪ್ರಕ್ರಿಯೆಗಳನ್ನು ನಡೆಸಿ ಕೊಟ್ಟರು. ಅಡ್ವೈಸರ್ ಗಳಾಗಿ ಅಶ್ರಫ್ ಸಖಾಫಿ ಕಿನ್ಯ, ಸಿರಾಜುದ್ದೀನ್ ಸಖಾಫಿ ಕನ್ಯಾನ ಹಾಗೂ ಇಸ್ಮಾಯಿಲ್ ಸಖಾಫಿ ಕೊಂಡಂಗೇರಿ ಅಧ್ಯಕ್ಷರಾಗಿ ಹಾಫಿಲ್ ಅಹ್ಮದ್ ಶರೀಫ್ ಸಖಾಫಿ ಅಲ್ ಕಾಮಿಲ್ ಉಕ್ಕುಡ, ಪ್ರಧಾನ ಕಾರ್ಯದರ್ಶಿಯಾಗಿ ಹಾಫಿಲ್ ಅಬ್ದುಲ್ ಮಜೀದ್ ಫಾಳಿಲಿ ಅಲ್ ಹಿಕಮಿ, ಕೋಶಾಧಿಕಾರಿಯಾಗಿ ನೌಫಲ್ ಸಖಾಫಿ ಅಲ್ ಹಿಕಮಿ ಕಳಸ ಹಾಗೂ 19 ಕಾರ್ಯಕಾರಿ ಸಮಿತಿ ಸದಸ್ಯರನ್ನು ಆರಿಸಲಾಯಿತು.
ಪ್ರಧಾನ ಕಾರ್ಯದರ್ಶಿ ಸ್ವಾಗತಿಸಿ ವಂದಿಸಿದರು.
















ಇನ್ನಷ್ಟು ಸುದ್ದಿಗಳು
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ