ನವದೆಹಲಿ,ಆಗಸ್ಟ್.11| ಎಸ್ಸೆಸ್ಸೆಫ್ ಗೋಲ್ಡನ್ ಫಿಫ್ಟಿ ರಾಷ್ಟ್ರೀಯ ಸಮ್ಮೇಳನದ ಪೂರ್ವಭಾವಿಯಾಗಿ ಆಯೋಜಿಸಿರುವ ಸಂವಿಧಾನ ಯಾತ್ರೆ ಇದೇ 12ರ ಶನಿವಾರ ಆರಂಭವಾಗಲಿದೆ. ಶ್ರೀನಗರದ ಹಜರತ್ ಬಾಲ್ ಮಸೀದಿ ಸಮೀಪದಿಂದ ಪ್ರಯಾಣ ಆರಂಭವಾಗಲಿದೆ. ಹಝರತ್ ಬಾಲ್ ಮಸೀದಿ ಇಮಾಮ್ ಹಝರತ್ ಮೌಲಾನಾ ಮುಫ್ತಿ ಬಿಲಾಲ್ ಅಹ್ಮದ್ ಧ್ವಜಾರೋಹಣ ನೆರವೇರಿಸಲಿದ್ದಾರೆ. ಎಸ್ ಎಸ್ ಎಫ್ ರಾಷ್ಟ್ರೀಯ ಅಧ್ಯಕ್ಷ ಡಾ. ಮುಹಮ್ಮದ್ ಫಾರೂಕ್ ನಈಮಿ ಅಧ್ಯಕ್ಷತೆ ವಹಿಸುವರು.
22 ರಾಜ್ಯಗಳ ಮೂಲಕ ಹಾದು ಹೋಗುವ ಪ್ರವಾಸಕ್ಕೆ 33 ಕೇಂದ್ರಗಳಲ್ಲಿ ಸ್ವಾಗತ ಸಮ್ಮೇಳನ ನಡೆಯಲಿದೆ. ಇದರ ಅಂಗವಾಗಿ ನಾಯಕರು ಕೇಂದ್ರೀಯ ವಿಶ್ವವಿದ್ಯಾಲಯಗಳು ಸೇರಿದಂತೆ ವಿವಿಧ ಕಾಲೇಜುಗಳಿಗೆ ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಲಿದ್ದಾರೆ. ಧಾರ್ಮಿಕ ಸೌಹಾರ್ದ ಸಭೆಗಳು ಮತ್ತು ಶಿಕ್ಷಣ ತಜ್ಞರು ಮತ್ತು ಗ್ರಾಮಸ್ಥರೊಂದಿಗೆ ಸಭೆಗಳನ್ನು ನಡೆಸಲಾಗುವುದು.
ಸಂವಿಧಾನ್ ಯಾತ್ರೆಯು, ದೇಶದಲ್ಲಿ ಅಲ್ಪಸಂಖ್ಯಾತರು ಮತ್ತು ದಲಿತ ವಿಭಾಗಗಳಂತಹ ಹಿಂದುಳಿದವರಿಗೆ ಶಿಕ್ಷಣ ಮತ್ತು ಉದ್ಯೋಗ ಕ್ಷೇತ್ರಗಳಲ್ಲಿ ಸಮಗ್ರ ಯೋಜನೆಗಳನ್ನು ಮುಂದಿಡಲಿದೆ. ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ, ಕೌಶಲ್ಯಾಭಿವೃದ್ಧಿ ಕೇಂದ್ರ, ಕಲಿಕಾ ಸಾಮಗ್ರಿಗಳ ವಿತರಣೆ ಇತ್ಯಾದಿಗಳನ್ನು ದೇಶದ ವಿವಿಧ ಕೇಂದ್ರಗಳಲ್ಲಿ ಪ್ರಸ್ತುತಪಡಿಸಲಿದೆ.
ಧಾರ್ಮಿಕ, ರಾಜಕೀಯ ಮತ್ತು ಸಾಮಾಜಿಕ ಮುಖಂಡರು ಸ್ವಾಗತ ಕೇಂದ್ರಗಳಲ್ಲಿ ಸಾರ್ವಜನಿಕ ಸಭೆಗಳಲ್ಲಿ ಭಾಗವಹಿಸಲಿದ್ದಾರೆ. ಪ್ರವಾಸದ ಮುಂಚಿತವಾಗಿ, ಡಾ. ಮುಹಮ್ಮದ್ ಫಾರೂಕ್ ನಈಮಿ ನೇತೃತ್ವದಲ್ಲಿ ಎಸ್ ಎಸ್ ಎಫ್ ರಾಷ್ಟ್ರೀಯ ಪದಾಧಿಕಾರಿಗಳು ನಿನ್ನೆ ಇಂಡಿಯನ್ ಗ್ರ್ಯಾಂಡ್ ಮುಫ್ತಿ ಕಾಂತಪುರಂ ಎಪಿ ಅಬೂಬಕರ್ ಮುಸ್ಲಿಯಾರ್ ಅವರನ್ನು ಭೇಟಿ ಮಾಡಿ ಧ್ವಜವನ್ನು ಸ್ವೀಕರಿಸಿದರು.
ರಾಷ್ಟ್ರೀಯ ನಾಯಕರಾದ ಡಾ. ಮುಹಮ್ಮದ್ ಫಾರೂಕ್ ನಈಮಿ, ನೌಶಾದ್ ಆಲಂ ಮಿಸ್ಬಾಹಿ, ಝುಹೈರುದ್ದೀನ್ ನೂರಾನಿ ಪಶ್ಚಿಮ ಬಂಗಾಳ, ಉಬೈದುಲ್ಲಾಹ್ ಸಖಾಫಿ, ಖಮರ್ ಸಖಾಫಿ ಬಿಹಾರ್, ಮುಈನುದ್ದೀನ್ ತ್ರಿಪುರಾ, ದಿಲ್ಶಾದ್ ಕಾಶ್ಮೀರ ಮೊದಲಾದವರು ‘ಸಂವಿಧಾನ ಯಾತ್ರೆ’ಯನ್ನು ಮುನ್ನಡೆಸುವರು. ಮುಂದಿನ ತಿಂಗಳು 10 ರಂದು ಬೆಂಗಳೂರಿನಲ್ಲಿ ಪ್ರಯಾಣ ಕೊನೆಗೊಳ್ಳಲಿದೆ.
ನವೆಂಬರ್ 24 ರಿಂದ ‘We the people of India’ ಎಂಬ ಶೀರ್ಷಿಕೆಯಡಿಯಲ್ಲಿ ರಾಷ್ಟ್ರೀಯ ಸಮ್ಮೇಳನವು ಮುಂಬೈ ಏಕದಾ ಉದ್ವಾನ್ನಲ್ಲಿ ನಡೆಯಲಿದೆ. ಇದರಲ್ಲಿ ದೇಶಾದ್ಯಂತದ ಎಸ್ ಎಸ್ ಎಫ್ ಕಾರ್ಯಕರ್ತರು ಸಂಗಮಿಸಲಿದ್ದಾರೆ. ಜೊತೆಗೆ ಎಕ್ಸಲೆನ್ಸ್ ಮೀಟ್ ಮತ್ತು ಡಿಬೇಟ್ ಕೂಡ ನಡೆಯಲಿದೆ.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ