ಬಂಟ್ವಾಳ: ಇಲ್ಲಿನ ಮಂಚಿ, ಕೊಳ್ನಾಡು ಸರಕಾರಿ ಪ್ರೌಢ ಶಾಲೆಯಲ್ಲಿ 76ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ವಿದ್ಯಾರ್ಥಿನಿಯ ಮೂಲಕ ಸಾವರ್ಕರ್ ಗೆ ಜೈಕಾರ ಕೂಗಿಸಿದ್ದು ವಿವಾದವೆಬ್ಬಿಸಿದೆ.
ಶಿಕ್ಷಣ ಸಚಿವರು ಮತ್ತು ಸಚಿವ ಪ್ರಿಯಾಂಕ್ ಖರ್ಗೆ ಅವರು ಸಾವರ್ಕರ್ ಪಠ್ಯವನ್ನು ಕಿತ್ತು ಬಿಸಾಕಿದ್ದೇವೆ ಎಂದು ಹೇಳಿದ್ದು, ಮತ್ತೆ ಸರ್ಕಾರಿ ಶಾಲೆಯಲ್ಲಿ ಸಾವರ್ಕರ್ ಗೆ ಜೈಕಾರ ಕೂಗಿಸುವ ಅಗತ್ಯವೇನಿತ್ತು ಎಂದು ವಿದ್ಯಾರ್ಥಿಗಳ ಪೋಷಕರು ಪ್ರಶ್ನಿಸಿದ್ದಾರೆ.
ಶಾಲೆಯ ಶಿಕ್ಷಕಿಯೋರ್ವರು ವಿದ್ಯಾರ್ಥಿನಿಯ ಮೂಲಕ ಹೇಡಿ ಸಾವರ್ಕರ್ ಗೆ ಜೈಕಾರ ಕೂಗಿಸಿದ್ದಾರೆ. ವಿದ್ಯಾರ್ಥಿನಿಯ ಹೆತ್ತವರು ಈ ಬಗ್ಗೆ ವಿಚಾರಿಸಲು ತೆರಳಿದಾಗ ಅಲ್ಲಿನ ಮುಖ್ಯ ಉಪಾದ್ಯಾಯಿನಿ ಗೈರು ಹಾಜರಾಗಿದ್ದು, ಇತರ ಶಿಕ್ಷಕಿಯರ ಬಳಿ ವಿಚಾರಿಸಿದಾಗ ಹಾರಿಕೆಯ ಉತ್ತರ ಲಭಿಸಿದೆ ಎಂದು ಪೋಷಕರು ಆರೋಪಿಸಿದ್ದಾರೆ.
ಘಟನೆ ನಡೆದ ದಿನದಲ್ಲೇ ಬಂಟ್ವಾಳ ಕ್ಷೇತ್ರ ಶಿಕ್ಷಣ ಇಲಾಖಾ ಅಧಿಕಾರಿಗೆ ಟೆಲಿಫೋನ್ ಮೂಲಕ ಮಾಹಿತಿ ನೀಡಲಾಗಿದ್ದು, ಅವರು ಸ್ಥಳದಲ್ಲಿ ಇಲ್ಲ ಸ್ವಲ್ಪ ಹೊರಗಡೆ ಇದ್ದೇನೆ ಆಮೇಲೆ ವಿಚಾರಿಸುವೆ ಎಂಬ ಅಸಡ್ಡೆಯ ಉತ್ತರ ನೀಡಿದ್ದಾರೆ.
ರಾಜ್ಯಾದ್ಯಂತ ಸಾಮಾಜಿಕ ಜಾಲತಾಣಗಳಲ್ಲಿ ಬ್ರಿಟೀಷರ ಬೂಟ್ ನೆಕ್ಕಿದ ಹೇಡಿ ಸಾವರ್ಕರ್ ಗೆ ಜೈ ಕೂಗಿದ ವಿಡಿಯೋ ಭಾರೀ ವೈರಲ್ ಆಗಿದ್ದರೂ ಕೂಡ ಈವರೆಗೆ ಸಂಬಂಧಪಟ್ಟ ಇಲಾಖೆ ಯಾವುದೇ ಕ್ರಮ ಕೈಗೊಳ್ಳದಿರುವುದು ವಿಪರ್ಯಾಸ.
ಇಷ್ಟೇಲ್ಲಾ ವಿದ್ಯಮಾನಗಳು ನಡೆದರೂ ಕೂಡ ಸರಕಾರಿ ಪ್ರೌಢ ಶಾಲೆಯ ಮುಖ್ಯ ಶಿಕ್ಷಕಿ ಏನೂ ನಡೆದೇ ಇಲ್ಲ ಎಂಬಂತೆ, ಸುರಿಬೈಲು ಶಾಲೆಯಲ್ಲಿ ನಡೆಯುವ ಹೈಸ್ಕೂಲ್ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದು ಅಚ್ಚರಿ ಮೂಡಿಸಿದೆ!
ಸದ್ರಿ ಶಾಲೆಯ ವಿದ್ಯಾರ್ಥಿಗಳ ಪೋಷಕರ ಪರವಾಗಿ ಕೆಲವರು ಸ್ಥಳೀಯ ಗ್ರಾಮ ಪಂಚಾಯತ್ ಅಧ್ಯಕ್ಷರ ಬಳಿ ಮೌಖಿಕ ಮನವಿ ನೀಡಿದಾಗ, ಅವರು ಪಂಚಾಯತ್ ಪಿಡಿಒ ಅವರಿಗೆ ಮನವಿ ನೀಡಿ ಎಂದು ಹಾಸ್ಯಾಸ್ಪದ ಹೇಳಿಕೆ ನೀಡಿರುವುದು ಗಮನಕ್ಕೆ ಬಂದಿದೆ.
ಒಟ್ಟಿನಲ್ಲಿ ಪ್ರಕರಣದ ಹಿಂದೆ ಶಿಕ್ಷಣದ ಕೇಸರೀಕರಣ ಷಡ್ಯಂತ್ರ ಇನ್ನೂ ಜೀವಂತವಿರುವುದಾಗಿ ಕಂಡು ಬರುತ್ತಿದೆ. ಸಂಬಂಧಪಟ್ಟವರು ಎಚ್ಚೆತ್ತುಕೊಂಡು, ಪ್ರಕರಣದ ರುವಾರಿಯಾಗಿರುವ ಶಿಕ್ಷಕಿಯನ್ನು ಅಮಾನತು ಗೊಳಿಸುವಂತೆ ಸರಕಾರಿ ಪ್ರೌಢ ಶಾಲೆ ಮಂಚಿ ಇಲ್ಲಿನ ವಿದ್ಯಾರ್ಥಿಗಳ ಪೋಷಕರು ಆಗ್ರಹಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ