ಪುತ್ತೂರು ಸುನ್ನಿ ಮ್ಯಾನೇಜ್ಮೆಂಟ್ ಅಸೋಸಿಯೇಷನ್ ಎಸ್ ಎಂ ಎ ಇದರ ವಾರ್ಷಿಕ ಕೌನ್ಸಿಲ್ ಬನ್ನೂರು ಸುನ್ನಿ ಸೆಂಟರ್ ನಲ್ಲಿ ಜರಗಿತು.

ಕಾರ್ಯಕ್ರಮದಲ್ಲಿ ವಿಷಯ ಮಂಡಿಸಿ ಮಾತನಾಡಿದ ರಾಜ್ಯ ಎಸ್ ಎಂ ಎ ಕೋಶಾಧಿಕಾರಿ ಹಾಜಿ ಹಮೀದ್ ಕೊಡಂಗಾಯಿ, ಇದೀಗ ವ್ಯಾಪಕವಾಗಿ ಯುವ ಸಮೂಹ ಬಲಿ ಆಗುತ್ತಿರುವ ಮಾದಕ ದ್ರವ್ಯದ ಬಗ್ಗೆ ಮೋಹಲಾಗಳಲ್ಲಿ ಜಾಗೃತಿ ಮೂಡಿಸಬೇಕು. ಮಾತ್ರವಲ್ಲದೆ ಜಾತಿ ಮತ ಭೇದವಿಲ್ಲದೆ ಮಾದಕ ದ್ರವ್ಯದ ವಿರುದ್ಧ ಹೋರಾಟ ಮಾಡಿ ಅದರ ಜಾಲವನ್ನು ಕಿತ್ತೊಗೆಯಬೇಕು ಎಂದರು. ಇಲ್ಲದಿದ್ದರೆ ಸಮಾಜಕ್ಕೆ ಮಾರಕವಾಗಲಿದೆ, ಈ ನಿಟ್ಟಿನಲ್ಲಿ ಪೊಲೀಸರೊಂದಿಗೆ ಸಾರ್ವಜನಿಕರು ಸಂಘ-ಸಂಸ್ಥೆಗಳು ಕೈಜೋಡಿಸಿ ಮಾದಕ ದ್ರವ್ಯದ ಜಾಲವನ್ನು ನಿರ್ನಾಮ ಮಾಡಬೇಕಾಗಿದೆ ಎಂದರು.
ಎಸ್ ಎಮ್ ಎ ನಡೆಸುವ ಸಾಮಾಜಿಕ ಧಾರ್ಮಿಕ ಶೈಕ್ಷಣಿಕ ಕಾರ್ಯಕ್ರಮಗಳನ್ನು ಮೊಹಲ್ಲಾಗಳಲ್ಲಿ ಜಾರಿಗೊಳಿಸಿ ಪ್ರವಾದಿ (ಸ ಅ ) ತೋರಿಸಿಕೊಟ್ಟ ಆದರ್ಶವನ್ನು ಮೈಗೂಡಿಸಿಕೊಂಡು ಸಮುದಾಯದ ಏಳಿಗೆಗೆ ಮೊಹಲ್ಲಾಗಳ ಸಬಲೀಕರಣ ಗೊಳಿಸಲು ಆಡಳಿತ ಸಮಿತಿ ಮುಂದಾಗಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ ಎಂ ಎ ಪುತ್ತೂರು ರೀಜನಲ್ ಸಮಿತಿ ಅಧ್ಯಕ್ಷರಾದ ಹಸನ್ ಶಿಹಾಬುದ್ದೀನ್ ನಿರ್ವಹಿಸಿದರು ಕಾರ್ಯಕ್ರಮವನ್ನು ಎಸ್ ಜೆ ಎಂ ಪುತ್ತೂರು ಅಧ್ಯಕ್ಷರಾದ ಶರೀಫ್ ಸಖಾಫಿ ಉದ್ಘಾಟಿಸಿದರು ಎಸ್ ಎಂ ಎ ಪುತ್ತೂರು ರೀಜಿನಲ್ ಪ್ರಧಾನ ಕಾರ್ಯದರ್ಶಿ ಸುಲೈಮಾನ್ ಸಹದಿ ವರದಿ ಲೆಕ್ಕಪತ್ರ ಸಭೆಗೆ ಮಂಡಿಸಿದರು ಸಭೆಯ ವೀಕ್ಷಕರಾಗಿ ಎಸ್ ಎಂ ಎ ವಿಟ್ಲ ಝೋನಲ್ ಸಮಿತಿ ಪ್ರಧಾನ ಕಾರ್ಯದರ್ಶಿ ಕಾಸಿಂ ಸಖಾಫಿ ಭಾಗವಹಿಸಿದರು ದಾಹೂದ್ ಅಶ್ರಫಿ ಸ್ವಾಗತಿಸಿದರು ಈ ಸಂದರ್ಭದಲ್ಲಿ ಇಸ್ಮಾಯಿಲ್ ಹಾಜಿ ಬನ್ನೂರು, ರಝಾಕ್ ಹಾಜಿ ಅಳೆಕೆಮಜಲ್, ಅಬ್ಬಾಸ್ ಹಾಜಿ ಅರಿಯಡ್ಕ, ರಫೀಕ್ ಸಖಾಫಿ ಬನ್ನೂರು, ಸಲೀಂ ಮದನಿ ಉಪಸ್ಥಿತರಿದ್ದರು.
ಸುಮಾರು 16 ಮೊಹಲ್ಲಾ ಪ್ರತಿನಿಧಿಗಳು ಭಾಗವಹಿಸಿದರು.
















ಇನ್ನಷ್ಟು ಸುದ್ದಿಗಳು
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ
ಮುಂಬೈಯನ್ನು ನಡುಗಿಸಿದ ಘಟನೆ: ಬಿರಿಯಾನಿ ಮತ್ತು ಕಲ್ಲಂಗಡಿ ತಿಂದ ಕುಟುಂಬ ಬೆಳಗಾಗುವಷ್ಟರಲ್ಲಿ ಅಂತ್ಯ