ಪುತ್ತೂರು ಸುನ್ನಿ ಮ್ಯಾನೇಜ್ಮೆಂಟ್ ಅಸೋಸಿಯೇಷನ್ ಎಸ್ ಎಂ ಎ ಇದರ ವಾರ್ಷಿಕ ಕೌನ್ಸಿಲ್ ಬನ್ನೂರು ಸುನ್ನಿ ಸೆಂಟರ್ ನಲ್ಲಿ ಜರಗಿತು.

ಕಾರ್ಯಕ್ರಮದಲ್ಲಿ ವಿಷಯ ಮಂಡಿಸಿ ಮಾತನಾಡಿದ ರಾಜ್ಯ ಎಸ್ ಎಂ ಎ ಕೋಶಾಧಿಕಾರಿ ಹಾಜಿ ಹಮೀದ್ ಕೊಡಂಗಾಯಿ, ಇದೀಗ ವ್ಯಾಪಕವಾಗಿ ಯುವ ಸಮೂಹ ಬಲಿ ಆಗುತ್ತಿರುವ ಮಾದಕ ದ್ರವ್ಯದ ಬಗ್ಗೆ ಮೋಹಲಾಗಳಲ್ಲಿ ಜಾಗೃತಿ ಮೂಡಿಸಬೇಕು. ಮಾತ್ರವಲ್ಲದೆ ಜಾತಿ ಮತ ಭೇದವಿಲ್ಲದೆ ಮಾದಕ ದ್ರವ್ಯದ ವಿರುದ್ಧ ಹೋರಾಟ ಮಾಡಿ ಅದರ ಜಾಲವನ್ನು ಕಿತ್ತೊಗೆಯಬೇಕು ಎಂದರು. ಇಲ್ಲದಿದ್ದರೆ ಸಮಾಜಕ್ಕೆ ಮಾರಕವಾಗಲಿದೆ, ಈ ನಿಟ್ಟಿನಲ್ಲಿ ಪೊಲೀಸರೊಂದಿಗೆ ಸಾರ್ವಜನಿಕರು ಸಂಘ-ಸಂಸ್ಥೆಗಳು ಕೈಜೋಡಿಸಿ ಮಾದಕ ದ್ರವ್ಯದ ಜಾಲವನ್ನು ನಿರ್ನಾಮ ಮಾಡಬೇಕಾಗಿದೆ ಎಂದರು.
ಎಸ್ ಎಮ್ ಎ ನಡೆಸುವ ಸಾಮಾಜಿಕ ಧಾರ್ಮಿಕ ಶೈಕ್ಷಣಿಕ ಕಾರ್ಯಕ್ರಮಗಳನ್ನು ಮೊಹಲ್ಲಾಗಳಲ್ಲಿ ಜಾರಿಗೊಳಿಸಿ ಪ್ರವಾದಿ (ಸ ಅ ) ತೋರಿಸಿಕೊಟ್ಟ ಆದರ್ಶವನ್ನು ಮೈಗೂಡಿಸಿಕೊಂಡು ಸಮುದಾಯದ ಏಳಿಗೆಗೆ ಮೊಹಲ್ಲಾಗಳ ಸಬಲೀಕರಣ ಗೊಳಿಸಲು ಆಡಳಿತ ಸಮಿತಿ ಮುಂದಾಗಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ ಎಂ ಎ ಪುತ್ತೂರು ರೀಜನಲ್ ಸಮಿತಿ ಅಧ್ಯಕ್ಷರಾದ ಹಸನ್ ಶಿಹಾಬುದ್ದೀನ್ ನಿರ್ವಹಿಸಿದರು ಕಾರ್ಯಕ್ರಮವನ್ನು ಎಸ್ ಜೆ ಎಂ ಪುತ್ತೂರು ಅಧ್ಯಕ್ಷರಾದ ಶರೀಫ್ ಸಖಾಫಿ ಉದ್ಘಾಟಿಸಿದರು ಎಸ್ ಎಂ ಎ ಪುತ್ತೂರು ರೀಜಿನಲ್ ಪ್ರಧಾನ ಕಾರ್ಯದರ್ಶಿ ಸುಲೈಮಾನ್ ಸಹದಿ ವರದಿ ಲೆಕ್ಕಪತ್ರ ಸಭೆಗೆ ಮಂಡಿಸಿದರು ಸಭೆಯ ವೀಕ್ಷಕರಾಗಿ ಎಸ್ ಎಂ ಎ ವಿಟ್ಲ ಝೋನಲ್ ಸಮಿತಿ ಪ್ರಧಾನ ಕಾರ್ಯದರ್ಶಿ ಕಾಸಿಂ ಸಖಾಫಿ ಭಾಗವಹಿಸಿದರು ದಾಹೂದ್ ಅಶ್ರಫಿ ಸ್ವಾಗತಿಸಿದರು ಈ ಸಂದರ್ಭದಲ್ಲಿ ಇಸ್ಮಾಯಿಲ್ ಹಾಜಿ ಬನ್ನೂರು, ರಝಾಕ್ ಹಾಜಿ ಅಳೆಕೆಮಜಲ್, ಅಬ್ಬಾಸ್ ಹಾಜಿ ಅರಿಯಡ್ಕ, ರಫೀಕ್ ಸಖಾಫಿ ಬನ್ನೂರು, ಸಲೀಂ ಮದನಿ ಉಪಸ್ಥಿತರಿದ್ದರು.
ಸುಮಾರು 16 ಮೊಹಲ್ಲಾ ಪ್ರತಿನಿಧಿಗಳು ಭಾಗವಹಿಸಿದರು.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ