ಮಕ್ಕಾ: ಪವಿತ್ರ ಉಮ್ರಾ ಕರ್ಮ ನಿರ್ವಹಿಸಲು ಉಪ್ಪಳ ಸಿ.ಯಂ ಟ್ರಾವೆಲ್ಸ್ ಮೂಲಕ ಆಗಮಿಸಿದ ಮಂಗಳೂರು ಅಡ್ಯಾರ್ ಕಣ್ಣೂರು ಸಮೀಪದ ಮನಾಲ ನಿವಾಸಿ ಹುಸೈನ್ ರವರು ದಿನಾಂಕ 19/08/2023 ರಂದು ಮಕ್ಕಾದಲ್ಲಿ ನಿಧನ ಹೊಂದಿದ್ದರು.
ವಿಷಯ ತಿಳಿದು ಕಾರ್ಯಪ್ರವೃತರಾದ ಕೆಸಿಎಫ್ ಜಿದ್ದಾ ಝೋನ್ ಸಾಂತ್ವನ ಇಲಾಖೆ ಅಧ್ಯಕ್ಷರು ಹಾಗೂ ಮಕ್ಕಾ ಸೆಕ್ಟರ್ ನಾಯಕರಾದ ಮೂಸಾ ಹಾಜಿ ಕಿನ್ಯ ಮತ್ತು ಕೆಸಿಎಫ್ ಮದೀನತುಲ್ ಮುನವ್ವರ ಝೋನ್ ಸಾಂತ್ವನ ಕಾರ್ಯದರ್ಶಿ ಅಬ್ದುಲ್ ರಝ್ಝಾಖ್ ಉಳ್ಳಾಲರವರು ಮೃತರ ಅಂತ್ಯಕ್ರಿಯೆಗೆ ಬೇಕಾದ ದಾಖಲೆ ಪತ್ರಗಳು, ಭಾರತೀಯ ರಾಯಭಾರಿ ಕಚೇರಿಗೆ ಕಡತಗಳು ಹಾಗೂ ಇನ್ನಿತರ ವ್ಯವಸ್ಥೆಯನ್ನು ತ್ವರಿತ ಗತಿಯಲ್ಲಿ ಸಿದ್ಧಪಡಿಸಲು ಪ್ರಮುಖ ಪಾತ್ರ ವಹಿಸಿದ್ದರು.
ದಫನ ವಿಧಿ ವಿಧಾನಗಳಿಗೆ CM ಟ್ರಾವೆಲ್ಸ್ ಅಮೀರ್ ಜಬ್ಬಾರ್ ಸಖಾಫಿ ಪಾತೂರು ಉಸ್ತಾದರು ನೇತೃತ್ವ ನೀಡಿದರು. ಮಯ್ಯಿತ್ ದಫನ ಕಾರ್ಯದಲ್ಲಿ ಮೃತರ ಇಬ್ಬರು ಮಕ್ಕಳು ಹಾಗೂ ಕೆಸಿಎಫ್ ಮಕ್ಕತುಲ್ ಮುಕರ್ರಮಃ ಸೆಕ್ಟರ್ ಪ್ರಧಾನ ಕಾರ್ಯದರ್ಶಿ ಹನೀಫ್ ಕೋಳ್ಯೂರು, ಇಹ್ಸಾನ್ ಇಲಾಖೆ ಅಧ್ಯಕ್ಷರು ಅಬ್ದುಲ್ ಲತೀಫ್ ನೆಲ್ಯಾಡಿ ಮೊದಲಾದವರು ಪಾಲ್ಗೊಂಡಿದ್ದರು.
















ಇನ್ನಷ್ಟು ಸುದ್ದಿಗಳು
ತಪ್ಪು ಮುನ್ನೆಚ್ಚರಿಕೆ ಸಂದೇಶ- ತಾಂತ್ರಿಕ ದೋಷಕ್ಕೆ ವಿಷಾದ ವ್ಯಕ್ತಪಡಿಸಿದ ಯುಎಇ
ಆರೋಪ-ಅಪಹಾಸ್ಯಗಳ ನಡುವೆ ಧೀಮಂತ ನಾಯಕತ್ವ: ಶಾಫಿ ಸಅದಿ ಉಸ್ತಾದರ ಮುಕ್ತ ಅನಿಸಿಕೆ
‘ಸಮಸ್ತ’: ಇತಿಹಾಸ ಮತ್ತು ವರ್ತಮಾನದ ನೆನಪುಗಳನ್ನು ಮೆಲುಕು ಹಾಕಿದ ನಾಯಕರು
ಅನಿವಾಸಿಗಳಿಗೆ ಭಾರಿ ಹೊಡೆತ; ಪಾಸ್ಪೋರ್ಟ್ ದರಗಳಲ್ಲಿ ಗಣನೀಯ ಹೆಚ್ಚಳ- ಪರಿಷ್ಕೃತ ಶುಲ್ಕ ಜುಲೈ 1 ರಿಂದ ಜಾರಿ
ಗಲ್ಫ್ ಸೇರಿದಂತೆ ವಿದೇಶದಿಂದ ಭಾರತಕ್ಕೆ ಆಗಮಿಸುವ ಪ್ರಯಾಣಿಕರಿಗೆ ‘ಏರ್ ಸುವಿಧಾ’ ಡಿಕ್ಲರೇಷನ್ ಕಡ್ಡಾಯ
ಪಾಸ್ಪೋರ್ಟ್ ಮತ್ತು ಪೌರತ್ವದ ವಿರೋಧಾಭಾಸ – ಜಗತ್ತಿಗೆ ಭಾರತೀಯ, ಸ್ವದೇಶದಲ್ಲೇ ಪ್ರಶ್ನಾರ್ಹ?
ಆಧಾರ್ ಮತ್ತು ಪಾಸ್ಪೋರ್ಟ್ ಪೌರತ್ವ ದಾಖಲೆಯಲ್ಲ: ಹಾಗಾದ್ರೆ ನಿಜವಾದ ದಾಖಲೆ ಯಾವುದು?
ಹಿರಿಯ ಧಾರ್ಮಿಕ ವಿದ್ವಾಂಸರಾದ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅಲ್ ಅಝ್ಹರಿ ವಫಾತ್
ಅಂಜುಮಾನ್ ಸಿರಾಜುಲ್ ಇಸ್ಲಾಂ ಮದ್ರಸ ಮುಕ್ಕ- SBS ನೂತನ ಸಮಿತಿ ಅಸ್ತಿತ್ವಕ್ಕೆ
ರೆಸಿಡೆನ್ಸಿ ನಿಯಮ ತಿದ್ದುಪಡಿ- ವಿದೇಶಿಯರಿಗೆ ಇನ್ನು ಮುಂದೆ ಸ್ಪಾನ್ಸರ್ ರಹಿತವಾಗಿ ವೀಸಾ ಲಭ್ಯ