ಪುತ್ತೂರು : ಕರ್ನಾಟಕ ಸುನ್ನಿ ಯುವಜನ ಸಂಘ ಎಸ್ವೈಎಸ್ ದ.ಕ. ಈಸ್ಟ್ ಜಿಲ್ಲಾ ಸಮಿತಿ ವತಿಯಿಂದ ಸಪ್ಟೆಂಬರ್ 02 ಶನಿವಾರದಂದು ಪುತ್ತೂರಿನ ಟೌನ್ ಹಾಲ್ನಲ್ಲಿ ‘ಅಲ್ ಅರ್ಖಮಿಯ್ಯ -23’ ಎಂಬ ಹೆಸರಿನಲ್ಲಿ ಬೃಹತ್ ಜಿಲ್ಲಾ ಪ್ರತಿನಿಧಿ ಸಮಾವೇಶ ಹಮ್ಮಿಕೊಂಡಿದೆ. ಆರೋಗ್ಯ, ಆದರ್ಶ, ಆಧ್ಯಾತ್ಮಿಕ, ಸಂಘಟನೆ,
ಸಮಕಾಲೀನ ಸಮಸ್ಯೆ ಹೀಗೆ ವಿವಿಧ ವಿಷಯಗಳಲ್ಲಿ ವಿಚಾರಗೋಷ್ಠಿ ನಡೆಯಲಿದೆ.
ಬೆಳಗ್ಗೆ 09 ಗಂಟೆಗೆ ಆರಂಭವಾಗುವ ಸಮಾವೇಶ ಸಂಜೆ 04 ರ ತನಕ ಮುಂದುವರೆಯಲಿದೆ. ಅದೇ ದಿನ ಸಂಜೆ 04:30 ಗೆ ಎಸ್ಸೆಸ್ಸೆಫ್ ಗೋಲ್ಡನ್ ಫಿಫ್ಟಿ ಪ್ರಚಾರ ಪ್ರಯುಕ್ತ ಗೋಲ್ಡನ್ ರ್ಯಾಲಿ ನಡೆಯಲಿದೆ.
ಕಾರ್ಯಕ್ರಮದಲ್ಲಿ ಖಾಝಿ ಖುರ್ರತ್ತುಸ್ಸಾದಾತ್ ಅಸ್ಸೆಯ್ಯಿದ್ ಫಝಲ್ ಕೋಯಮ್ಮ ತಂಙಳ್ ಕೂರರವರು ಭಾಗವಹಿಸಲಿದ್ದು ಪ್ರಾರ್ಥನೆಗೆ ನೇತೃತ್ವ ನೀಡಲಿದ್ದಾರೆ. ಕರ್ನಾಟಕ ಜಂಇಯ್ಯತುಲ್ ಉಲಮಾ ರಾಜ್ಯಾಧ್ಯಕ್ಷರಾದ ಖಾಝಿ ಶೈಖುನಾ ಝೈನುಲ್ ಉಲಮಾ ಅಬ್ದುಲ್ ಹಮೀದ್ ಮುಸ್ಲಿಯಾರ್ ಮಾಣಿರವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಶೈಖುನಾ ಪೇರೋಡ್ ಅಬ್ದುರ್ರಹ್ಮಾನ್ ಸಖಾಫಿರವರು ಮುಖ್ಯ ಪ್ರಭಾಷಣಗೈಯ್ಯಲಿದ್ದಾರೆ.
ಕಾರ್ಯಕ್ರಮದಲ್ಲಿ ತ್ವಾಹಿರ್ ಸಖಾಫಿ ಮಂಜೇರಿ, ಡಾ. ಸೆಯ್ಯಿದ್ ಸೈಪುದ್ದೀನ್ ನಾಲೇಜ್ ಸಿಟಿ, ಜಿ. ಎಂ. ಎಂ. ಕಾಮಿಲ್ ಸಖಾಫಿ, ಡಾ. ಅಬ್ದುರ್ರಶೀದ್ ಝೈನಿ ಕಾಮಿಲ್ ಸಖಾಫಿ, ರಾಶಿದ್ ಬುಖಾರಿ ಕುಟ್ಯಾಡಿ, ಅಬ್ದುಲ್ ಹಫೀಳ್ ಸಅದಿ ಕೊಡಗು, ಸುಫ್ಯಾನ್ ಸಖಾಫಿ ಸಹಿತ ಅನೇಕ ಉಲಮಾಗಳು, ಸಾದಾತುಗಳು, ಸಾಮಾಜಿಕ ಮತ್ತು ರಾಜಕೀಯ ನೇತಾರರು, ಅಂಕಣಗಾರರು, ಚಿಂತಕರು, ಹಲವು ಗಣ್ಯರು ಭಾಗವಹಿಸಲಿದ್ದಾರೆ.
ಕರ್ನಾಟಕ ಮುಸ್ಲಿಂ ಜಮಾಅತ್ ದಕ್ಷಿಣ ಕನ್ನಡ ಈಸ್ಟ್ ಜಿಲ್ಲಾ ವ್ಯಾಪ್ತಿಯ ಯುನಿಟ್, ಸರ್ಕಲ್, ಸೆಕ್ಟರ್, ಝೋನ್, ಡಿವಿಷನ್ ಗಳಲ್ಲಿ ಬರುವ ಎಲ್ಲಾ ಸಂಘ ಕುಟುಂಬದ ನಾಯಕರು, ಕಾರ್ಯಕರ್ತರು ಹಾಗೂ ಹಿತೈಷಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಕರ್ನಾಟಕ ಮುಸ್ಲಿಂ ಜಮಾಅತ್ ದಕ್ಷಿಣ ಕನ್ನಡ ಈಸ್ಟ್ ಜಿಲ್ಲಾಧ್ಯಕ್ಷರಾದ ಅಬ್ದುರ್ರಹ್ಮಾನ್ ಹಾಜಿ ಅರಿಯಡ್ಕರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವರದಿ : ಯೂಸುಫ್ ಸಯೀದ್ ಪುತ್ತೂರು (ಮಾಧ್ಯಮ ಕಾರ್ಯದರ್ಶಿ ಕರ್ನಾಟಕ ಮುಸ್ಲಿಂ ಜಮಾಅತ್ ದ.ಕ. ಈಸ್ಟ್ ಜಿಲ್ಲೆ)

















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ