janadhvani

Kannada Online News Paper

ಕರ್ನಾಟಕ ಮುಸ್ಲಿಂ ಜಮಾಅತ್ ಕಾಜೂರ್ ಸರ್ಕಲ್ : ಪ್ರಜಾಭಾರತ ಸಂಗಮ

ಕನಾ೯ಟಕ ಮುಸ್ಲಿಂ ಜಮಾಅತ್ ಕಾಜೂರು ಸೆಕ್ಟರ್ ಇದರ ವತಿಯಿಂದ ದಿನಾಂಕ 25.08.2023 ರಂದು ಕಿಲ್ಲೂರು ಆಶಿಕ್ ಮನ್ಝಿಲ್ ನಲ್ಲಿ ಸವ೯ಧರ್ಮಿಯರ ಸೌಹಾದ೯ ಒಗ್ಗೂಡುವಿಕೆಯು ಕಾಜೂರು ಸರ್ಕಲ್ ಅಧ್ಯಕ್ಷರಾದ ದಿಡುಪೆ ಮೊಹಮ್ಮದ್ ಅಲಿಯವರ ಅಧ್ಯಕ್ಷತೆಯಲ್ಲಿ ನಡೆಯಿತು. ಇಸ್ಮಾಯಿಲ್ ಫೈಝಿ ಉಸ್ತಾದರು ದುಆ ನಿರ್ವಹಿಸಿದರು.

ಪ್ರಧಾನ ಕಾರ್ಯದರ್ಶಿಯವರಾದ ಅಬ್ದುರ್ರ ಹ್ಮಾನ್ ಮುಸ್ಲಿಯಾರ್ ಸ್ವಾಗತ ಭಾಷಣ ಮಾಡಿದರು. ಮುಖ್ಯ ಅತಿಥಿಗಳಾದ ಕೃಷ್ಣಪ್ಪ ಪೂಜಾರಿ ಕಿಲ್ಲೂರು, ತುಂಗಪ್ಪ ಪೂಜಾರಿ ಕಾಜೂರು, ವೀರಪ್ಪ ದೇವಾಡಿಗ ಬಂಗಾಡಿ ತಮ್ಮ ಬಾಲ್ಯ ಕಾಲದ ಸೌಹಾರ್ದದ ಬದುಕನ್ನು ಹಂಚಿಕೊಂಡರು. ಪ್ರತಿಷ್ಠಿತ ಕಾಜೂರು ದರ್ಗಾ ಶರೀಫ್ ಮುದರ್ರಿಸ್ ತೌಸೀಫ್ ಸ‌ಅದಿ ಹರೇಕಳ ಮುಖ್ಯ ಭಾಷಣ ಮಾಡಿ ಕೋಮು ಸೌಹಾರ್ದತೆಯ ಅನಿವಾರ್ಯತೆಯನ್ನು ತಿಳಿಸಿದರು.

ಕಾಜೂರು ದರ್ಗಾ ಶರೀಫಿನ ಪ್ರಧಾನ ಕಾರ್ಯದರ್ಶಿಯೂ, ಎಸ್‌ವೈಎಸ್ ಬೆಳ್ತಂಗಡಿ ಝೋನ್ ಕೋಶಾಧಿಕಾರಿಯೂ ಆದ ಜೆ.ಎಚ್. ಸಿದ್ದೀಕ್ ಕಾಜೂರ್, ಝೋನ್ ಸದಸ್ಯರಾದ K. P ಮೊಹಮ್ಮದ್, ಕಿಲ್ಲೂರು ಮಸೀದಿ ಉಸ್ತುವಾರಿ ಹಂಝತ್, K ಮೊಹಮ್ಮದ್ ಕಿಲ್ಲೂರು ಹಾಗೂ ಎರ್ಮಾಳ, ಕಿಲ್ಲೂರು, ಪೆರ್ದಾಡಿ, ಕಾಜೂರು ಯುನಿಟ್ ಸೆಕ್ಟರ್ ಇದರ ನೇತಾರರು ಪಾಲ್ಗೊಂಡಿದ್ದರು.

error: Content is protected !! Not allowed copy content from janadhvani.com