ಉಳ್ಳಾಲ: ಅನುಗ್ರಹೀತ ಕಾರುಣ್ಯದ ಪ್ರವಾದಿ ಮುಹಮ್ಮದ್ ಸ್ವಲ್ಲಲ್ಲಾಹು ಅಲೈಹಿವಸಲ್ಲಂ ರವರ ಜನ್ಮ ತಿಂಗಳ ಪ್ರಯುಕ್ತ ಸೆಪ್ಟೆಂಬರ್ 17 ರಂದು ಕಿನ್ಯದಲ್ಲಿ ಕರ್ನಾಟಕ ಮುಸ್ಲಿಂ ಜಮಾಅತ್, ಎಸ್.ವೈ.ಎಸ್ ಮತ್ತು ಎಸ್ಸೆಸ್ಸೆಫ್ ಜಂಟಿ ಸಮಿತಿಗಳ ವತಿಯಿಂದ “ಹುಬ್ಬುರ್ರಸೂಲ್ ಸಮಾವೇಶ” ನಡೆಯಲಿದೆ.ಪ್ರಸ್ತುತ ಕಾರ್ಯಕ್ರಮದ ಯಶಸ್ವಿಗಾಗಿ ಸ್ವಾಗತ ಸಮಿತಿಯನ್ನು ರಚಿಸಲಾಯಿತು.
ಚೇರ್ಮನ್ ಆಗಿ ಪರಮಾಂಡ ಹಾಜಿ ಬಿ.ಎಂ ಇಸ್ಮಾಈಲ್, ಜನರಲ್ ಕನ್ವೀನರ್ ಕುರಿಯ ಉಸ್ಮಾನ್ ಝುಹ್ರಿ, ಇರ್ಫಾನ್ ಸಖಾಫಿ ಖುತುಬಿನಗರ ರವರನ್ನು ಕೋಶಾಧಿಕಾರಿ ಯಾಗಿ ಆಯ್ಕೆ ಮಾಡಲಾಯಿತು.
ಉಳಿದಂತೆ ನೌಫಲ್ ಸಖಾಫಿ ಮೀಂಪ್ರಿ ಉಪಾಧ್ಯಕ್ಷರಾಗಿ,ಕೆ.ಎಂ ಇಸ್ಮಾಈಲ್ ಸಾಗ್ ರವರನ್ನು ಕನ್ವೀನರ್ ಆಗಿಯೂ ಹಾಗೂ ಮೂವತ್ತೆರಡು ಮಂದಿಯನ್ನು ಸಮಿತಿ ಸದಸ್ಯರಾಗಿ ಆರಿಸಲಾಯಿತು.
ಹಾಜಿ ಬಿ.ಎಂ ಇಸ್ಮಾಈಲ್ ಪರಮಾಂಡ ರವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸಯ್ಯಿದ್ ಅಲವಿ ತಂಙಳ್ ಮೀಂಪ್ರಿ ದುಆ ನಡೆಸಿದರು.ಸಯ್ಯಿದ್ ಶಿಹಾಬುದ್ದೀನ್ ತಂಙಳ್ ಉದ್ಘಾಟಿಸಿದರು.
ಕರ್ನಾಟಕ ಮುಸ್ಲಿಂ ಜಮಾಅತ್ ಕಿನ್ಯ ಸರ್ಕಲ್ ಪ್ರಧಾನ ಕಾರ್ಯದರ್ಶಿ ಕೆ.ಎಂ ಇಸ್ಮಾಈಲ್,ಎಸ್.ವೈ.ಎಸ್ ಕಿನ್ಯ ಸರ್ಕಲ್ ಪ್ರಧಾನ ಕಾರ್ಯದರ್ಶಿ ಅಬ್ದುಸ್ಸಲಾಂ ಬಾಕಿಮಾರ್, ಕೋಶಾಧಿಕಾರಿ ಅಬ್ದುಲ್ ಹಮೀದ್ ಮೀಂಪ್ರಿ, ಎಸ್ಸೆಸ್ಸೆಫ್ ಕಿನ್ಯ ಸೆಕ್ಟರ್ ಅಧ್ಯಕ್ಷ ಇರ್ಫಾನ್ ಸಖಾಫಿ ಖುತುಬಿನಗರ, ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಸ್ವಾದಿಖ್ ಕುರಿಯ, ಕೋಶಾಧಿಕಾರಿ ಜಲೀಲ್ ಖುತುಬಿನಗರ ಮುಂತಾದವರು ಉಪಸ್ಥಿತರಿದ್ದರು.

















ಇನ್ನಷ್ಟು ಸುದ್ದಿಗಳು
ಮಾದಕ ವಸ್ತು ‘ಖಾತ್’ ಮಾರಾಟ: ಭಾರತೀಯ ಪ್ರಜೆ ಸೌದಿಯಲ್ಲಿ ಬಂಧನ
ಅನಿವಾಸಿಗಳಿಗೆ ಶುಭ ಸುದ್ದಿ: ಕುವೈತ್ನಿಂದ ಭಾರತೀಯ ವಿಮಾನ ಸೇವೆಗಳು ಪುನರಾರಂಭ
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ