ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ ಮೇ 12ರಂದು ನಡೆದಿದ್ದ ಚುನಾವಣಾ ಫಲಿತಾಂಶವು ಹೊರಬಿದಿದ್ದು, ಈ ನಡುವೆ ಇಲ್ಲಿ ತನಕ ಯಾವುದೇ ಪಕ್ಷಕ್ಕೂ ಮ್ಯಾಜಿಕ್ ನಂಬರ್ 113 ಪಡೆದುಕೊಳ್ಳುವುದಕ್ಕೆ ಸಾಧ್ಯವಾಗದ ಸನ್ನಿವೇಶ ಕಂಡು ಬರುತ್ತಿದ್ದು, ಬಿಜೆಪಿ ಮಾತ್ರ ರಾಜ್ಯದಲ್ಲಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಈ ನಡುವೆ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷವು ಮೈತ್ರಿ ಸರ್ಕಾರಕ್ಕೆ ಮುಂದಾಗಿದೆ ಎನ್ನಲಾಗಿದೆ.
ಮೈತ್ರಿ ಸರ್ಕಾರದ ಮಾತುಕತೆ ನಡೆಸುವ ನಿಟ್ಟಿನಲ್ಲಿ ಕಾಂಗ್ರೆಸ್ ಹೈಕಮಾಂಡ್ ಸಿ.ಎಂ ಸಿದ್ದರಾಮಯ್ಯ ಅವರಿಗೆ ಜೆಡಿಎಸ್ ಜೊತೆಗೆ ಹಳೆ ಸಂಬಂಧವನ್ನು ಮುಂದಿಟ್ಟುಕೊಂಡು ಮಾತುಕತೆ ನಡೆಸುವಂತೆ ಹೇಳಿದ್ದಾರೆ ಎನ್ನಲಾಗಿದ್ದು, ಈಗ ಕಾಂಗ್ರೆಸ್ ನ ಹಿರಿಯ ನಾಯಕರುಗಳ ಚಿತ್ತ ಪದ್ಮನಾಭನಗರದಲ್ಲಿರುವ ಮಾಜಿ ಪ್ರಧಾನಿ ಅವರ ಮನೆ ಮೇಲೆ ನೆಟ್ವಿದೆ. ಇದಲ್ಲದೇ ವಿಧಾನಸಭಾ ಚುನಾವಣೆಯ ಸ್ಪಷ್ಟ ಚಿತ್ರಣ ಸಂಜೆಯೊಳಗೆ ಸಿಗುವ ಸಾಧ್ಯತೆ ಇದ್ದು ಎಲ್ಲರ ಚಿತ್ತ ಸಂಜೆ ಸಂಪೂರ್ಣವಾಗಿ ಹೊರ ಬೀಳುವ ಫಲಿತಾಂಶದತ್ತ ನೆಟ್ಟಿದೆ. ಸದ್ಯದ ಮಾಹಿತಿ ಪ್ರಕಾರ ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರಿಗೆ ಕರೆ ಮಾಡಿದ್ದು ಮೈತ್ರಿ ಬಗ್ಗೆ ಮಾತನಾಡಿದ್ದಾರೆ ಎನ್ನಲಾಗುತ್ತಿದೆ.
ಇವೆಲ್ಲದರ ನಡುವೆ ಒಂದು ವೇಳೆ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿಗೆ ಮುಂದಾದರೆ ಮುಖ್ಯಮಂತ್ರಿಯ ಆಗುವ ಕನಸು ಕಾಣುತ್ತಿರುವ ಬಿ.ಎಸ್ವೈಗೆ ಹಾಗೂ ಬಿಜೆಪಿ ಪಕ್ಷಕ್ಕೆ ಬಹು ದೊಡ್ಡಮಟ್ಟದ ಶಾಕ್ ಆಗಲಿದೆ.















ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
‘ಎನ್ ಹಾನ್ಸ್ ಇಂಡಿಯಾ ಕಾನ್ಫರೆನ್ಸ್’- ಮಂಗಳೂರಿನ ಸಮಾವೇಶಕ್ಕೆ ಕ್ಷಣಗಣನೆ
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಪಬ್ಲಿಕ್ ಟಿವಿಯ ರಂಗನಾಥ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ
‘ಕೈ’ ಪಾಲಯಕ್ಕೆ ಸಿಎಂ ಇಬ್ರಾಹಿಂ ಗುಡ್ ಬೈ – ಜೆಡಿಎಸ್ ಸೇರುವುದು ಖಚಿತ.?
ಮದ್ರಸಾಗಳಲ್ಲಿ, ಜನಗಳ ಮಧ್ಯೆ ಸೌಹಾರ್ದ, ಸಹಬಾಳ್ವೆ, ಭ್ರಾತೃತ್ವ ಸಂಬಂಧಗಳನ್ನು ಬೆಳೆಸಲು ಕಲಿಸಲಾಗುತ್ತಿದೆ- ರಾಜ್ಯ ಸರ್ಕಾರ
ರೌಳತುಲ್ ಉಲೂಂ ಓಲ್ಡ್ ಸ್ಟೂಡೆಂಟ್ಸ್ ಉಕ್ಕುಡ ಆಯೋಜಿಸಿದ ಸ್ನೇಹ ಸಂಗಮ
ರಾಜ್ಯದಲ್ಲಿ ನೈಟ್ ಕರ್ಪ್ಯೂ- ರಾತ್ರಿ 10 ರಿಂದ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ